• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Weather Today: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ; ಇಂದಿನಿಂದ ಜೂನ್ 17ರವರೆಗೆ ಆರೆಂಜ್ ಅಲರ್ಟ್ ಘೋಷಣೆ

Karnataka Weather Today: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ; ಇಂದಿನಿಂದ ಜೂನ್ 17ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Karnataka Monsoon 2021: ಭಾರೀ ಮಳೆಯಿಂದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

  • Share this:

    Karnataka Monsoon Rain: ಬೆಂಗಳೂರು(ಜೂ.13): ಇಂದು ಮುಂಜಾನೆಯಿಂದಲೇ ಮಲೆನಾಡು, ಕರಾವಳಿಯಲ್ಲಿ ಮಳೆಯಾಗುತ್ತಿದ್ದು, ನಾಳೆಯಿಂದ ಮಳೆಯ ಆರ್ಭಟ ತೀವ್ರಗೊಳ್ಳಲಿದೆ. ಕಳೆದೊಂದು ವಾರದಿಂದ ಕರ್ನಾಟಕದಲ್ಲಿ ವರುಣನ ಆರ್ಭಟ ಶುರುವಾಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಿಂದ ಅನೇಕ ಮನೆ, ರಸ್ತೆಗಳು ಹಾನಿಯಾಗಿದ್ದು, ಹಲವೆಡೆ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಇಂದಿನಿಂದ ಜೂನ್ 17ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.


    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಸೋಮವಾರ ರೆಡ್ ಅಲರ್ಟ್​ ಕೂಡ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಹಾಗೂ 17ರಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಉಳಿದ ದಿನಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


    ಉತ್ತರ ಒಳನಾಡಿನಲ್ಲಿ ಸೋಮವಾರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಹೀಗಾಗಿ, ಉತ್ತರ ಒಳನಾಡಿನಲ್ಲಿ ಜೂನ್ 14ರಿಂದ 2 ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.


    ಇದನ್ನೂ ಓದಿ: Viral Video: ಸೀರೆಯುಟ್ಟು ಕುದುರೆ ಓಡಿಸಿದ ಭಾರತೀಯ ನಾರಿ; ಮಹಿಳೆಯ ಅಶ್ವ ಸವಾರಿಯ ವಿಡಿಯೋ ವೈರಲ್


    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರ್ನಾಟಕದ ಉಡುಪಿ, ಒಡಿಶಾ, ಕೇರಳದ ಕೊಜಿಕೊಡೆ, ವಯನಾಡಿನಲ್ಲಿ ಇಂದಿನಿಂದ ಜೂನ್​ 15ರವರೆಗೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳದಲ್ಲಿ ಇನ್ನೂ 3 ದಿನ ಅಧಿಕ ಮಳೆಯಾಗಲಿದೆ.


    ಕೇರಳ ರಾಜ್ಯದಲ್ಲೂ ಇಂದಿನಿಂದ 3 ದಿನ ಅಧಿಕ ಮಳೆಯಾಗಲಿದೆ. ಹೀಗಾಗಿ ಕೇರಳದ ಜಿಲ್ಲೆಗಳಾದ ಮಲಪ್ಪುರಂ, ಕೊಜಿಕೊಡೆ, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ನಾಳೆ ಆರೆಂಜ್​ ಅಲರ್ಟ್​​ ಘೋಷಣೆ ಮಾಡಲಾಗಿದೆ. ಈ ವರ್ಷ ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಿದ್ದ ನೈರುತ್ಯ ಮಾನ್ಸೂನ್​ ಜೂನ್ 6ರಂದು ಕರ್ನಾಟಕವನ್ನು ಪ್ರವೇಶಿಸಿತ್ತು.


    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಇಂದಿನಿಂದ 1 ವಾರ ಹಳದಿ ಅಲರ್ಟ್​ ಘೋಷಿಸಲಾಗಿದೆ.


    ಇದನ್ನೂ ಓದಿ: Love Story: ಪಕ್ಕದ ಮನೆಯಲ್ಲೇ 11 ವರ್ಷ ಗುಟ್ಟಾಗಿ ಸಂಸಾರ; ಕೇರಳದಲ್ಲೊಂದು ವಿಚಿತ್ರ ಲವ್ ಸ್ಟೋರಿ!


    ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಈಗಾಗಲೇ ಜಲಾಶಯಗಳಿಗೆ ಭಾರೀ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಣೆ ಆಗಿರುವುದರಿಂದ ಮುಂದಿನ 1 ವಾರಗಳ ಕಾಲ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.


    ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

    Published by:Sushma Chakre
    First published: