ಶಿವಮೊಗ್ಗ (ಆ. 11): ಅಯೋಧ್ಯೆಯ ರೀತಿಯಲ್ಲೇ ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳ ಜಾಗದಲ್ಲಿ ದೇವಸ್ಥಾನಗಳನ್ನು ನಿರ್ಮಿಸಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ರೀತಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಈಶ್ವರಪ್ಪನವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೆ.ಎಸ್. ಈಶ್ವರಪ್ಪ, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ನನ್ನ ಇಡೀ ಜೀವನವನ್ನು ಬೇಕಾದರೂ ಜೈಲಿನಲ್ಲೇ ಕಳೆಯಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಡಿಕೆಶಿ ಹೇಳಿದಂತೆ ನಾನು ಜೈಲಿಗೆ ಹೋಗಲು ರೆಡಿ. ನಾನು ನೂರು ಬಾರಿ ಬಂಧನಕ್ಕೊಳಗಾಗಲು ಸಿದ್ಧನಾಗಿದ್ದೇನೆ. ಬೇಕಾದರೆ ಇಡೀ ಜೀವನ ಜೈಲಲ್ಲೇ ಇರುತ್ತೇನೆ. ಅಯೋಧ್ಯೆಯ ರಾಮಮಂದಿರ ಶಿಲಾನ್ಯಾಸದ ದಿನ ನನ್ನ ಭಾವನೆಯನ್ನು ಹಂಚಿಕೊಂಡಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ: Bangalore Crime: ಬೆಂಗಳೂರಿನಲ್ಲಿ ಕೊಕೇನ್ ಮಾರುತ್ತಿದ್ದ ನೈಜೀರಿಯಾ ಪ್ರಜೆಗಳ ಬಂಧನ
I urge PM @narendramodi to immediately instruct CM @BSYBJP to sack Minister K.S. Eshwarappa for making instigating statements intended to disturb communal harmony.
We must uphold India's secular values. A criminal case must be filed against Eshwarappa and he should be arrested. pic.twitter.com/iJNQY1In2V
— DK Shivakumar (@DKShivakumar) August 6, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ