ಬೆಂಗಳೂರು (ಜು. 16): ಅಧಿಕಾರಕ್ಕಾಗಿ ಬಿಜೆಪಿಯವರು ಏನೇನೋ ಮಾಡಿದರು. ಈಗ ನಮ್ಮ ಕೈಯಲ್ಲಿ ಆಗಲ್ಲ ಅಂತ ಹೇಳುತ್ತಿದ್ದಾರೆ. ಕೊರೋನಾ ಸೋಂಕಿನ ಪರಿಸ್ಥಿತಿಯನ್ನು ನಿರ್ವಹಿಸಲು ಸಾಧ್ಯವಿಲ್ಲ, ದೇವರೇ ನಮ್ಮನ್ನು ಕಾಪಾಡಬೇಕು ಎಂದು ಒಪ್ಪಿಕೊಳ್ಳುವವರು ಅಧಿಕಾರದಲ್ಲಿ ಯಾಕಿರಬೇಕು? ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಕೊರೋನಾದಿಂದ ದೇವರೇ ನಮ್ಮನ್ನು ಕಾಪಾಡಬೇಕು ಎಂದು ಸಚಿವ ಬಿ. ಶ್ರೀರಾಮುಲು ಹೇಳಿಕೆಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದ ಆರೋಗ್ಯ ಸಚಿವ ಶ್ರೀರಾಮುಲು ಅವರ ಹೇಳಿಕೆ ಎಲ್ಲೆಲ್ಲಿಗೋ ಹೋಗುತ್ತಿದೆ. ಅದು ಕೇವಲ ಸಚಿವ ಶ್ರೀರಾಮುಲು ಹೇಳಿಕೆ ಅಲ್ಲ, ಸರ್ಕಾರದ ಹೇಳಿಕೆ. ಈಗ ಮುಖ್ಯಮಂತ್ರಿಯರವರ ಟೀಂ ನಾವು ಏನೂ ಮಾಡಕ್ಕೆ ಆಗಲ್ಲ ದೇವರೇ ಕಾಪಾಡಬೇಕು ಎಂದರೆ ಹೇಗೆ? ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ನಿಭಾಯಿಸೋಕೆ ಆಗದಿದ್ದರೆ ಅವರೆಲ್ಲ ಅಧಿಕಾರದಲ್ಲಿ ಯಾಕಿರಬೇಕು? ಎಂದು ರಾಜ್ಯ ಸರ್ಕಾರದ ಸಚಿವರನ್ನು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಇನ್ನೆರಡು ತಿಂಗಳಲ್ಲಿ ಕೊರೋನಾ ಹೆಚ್ಚಳ, ಆ ದೇವರೆ ನಮ್ಮನ್ನು ಕಾಪಾಡಬೇಕು; ಸಚಿವ ಶ್ರೀರಾಮುಲು
ಅವರು ಒಂದು ಕ್ಷಣವೂ ವೇಸ್ಟ್ ಮಾಡದೆ ರಾಜೀನಾಮೆ ನೀಡಲಿ, ರಾಜ್ಯಪಾಲರ ಆಳ್ವಿಕೆ ಜಾರಿಗೆ ಬರಲಿ. ಇವರ ಬದಲಾಗಿ ಅಧಿಕಾರಿಗಳೇ ಆಡಳಿತ ನಡೆಸುತ್ತಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ಮಿತಿಮೀರುತ್ತಿರುವ ಈ ಸಂದರ್ಭದಲ್ಲಿ ನಾವು ರಾಜಕಾರಣ ಮಾಡಲಿಲ್ಲ. ಕೊರೋನಾ ವಿಚಾರದಲ್ಲಿ ಸಂಪೂರ್ಣ ಸಹಕಾರವನ್ನು ನೀಡಿದ್ದೆವು. ಆದರೂ ಪರಿಸ್ಥಿತಿ ನಿಭಾಯಿಸೋಕೆ ಆಗಲ್ಲ ಅಂದ್ರೆ ಏನು ಮಾಡಬೇಕು? ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಪ್ರತಿಪಕ್ಷವಾಗಿ ಈಗ ನಾವು ಅನಿವಾರ್ಯವಾಗಿ ಮಾತನಾಡುವಂತ ಪರಿಸ್ಥಿತಿ ಸೃಷ್ಟಿಯಾಗಿದೆ. ಶ್ರೀರಾಮುಲು ಹೇಳಿಕೆ ಈಗ ಇಡೀ ರಾಜ್ಯವನ್ನೇ ತಲ್ಲಣಗೊಳಿಸುತ್ತಿದೆ. ಇದು ಕೇವಲ ಶ್ರೀರಾಮುಲು ಹೇಳಿಕೆಯಲ್ಲ ಇದು ಸರ್ಕಾರದ ಮಾತಾಗಿದೆ. ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಜನರನ್ನು ರಕ್ಷಿಸುವ ಜವಾಬ್ದಾರಿಯನ್ನು ನಿಮಗೆ ನೀಡಲಾಗಿದೆ ಅದನ್ನು ನಿಭಾಯಿಸಲು ನಿಮಗೆ ಸಾಧ್ಯವಿಲ್ಲ ಎಂದಾದರೆ, ಇಡೀ ಸರ್ಕಾರ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
The state government has left the covid patients at the mercy of God
Ministers @sriramulubjp, @mla_sudhakar should resign as they have admitted they cannot manage the crisis
This reflects their inability to handle crisis.Why do we need a govt which is not capable?@DKShivakumar pic.twitter.com/91n0ELXDBS
— Karnataka Congress (@INCKarnataka) July 16, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ