• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಇಂದು ಬೆಂಗಳೂರಿನಲ್ಲಿ ಮತ್ತೆ ಸಾರಿಗೆ ನೌಕರರ ಮುಷ್ಕರ; ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹ

ಇಂದು ಬೆಂಗಳೂರಿನಲ್ಲಿ ಮತ್ತೆ ಸಾರಿಗೆ ನೌಕರರ ಮುಷ್ಕರ; ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹ

ಸಾರಿಗೆ ನೌಕರರ ಪ್ರತಿಭಟನೆ (ಸಾಂದರ್ಭಿಕ ಚಿತ್ರ)

ಸಾರಿಗೆ ನೌಕರರ ಪ್ರತಿಭಟನೆ (ಸಾಂದರ್ಭಿಕ ಚಿತ್ರ)

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಕಳೆದ ಡಿಸೆಂಬರ್​​​ನಲ್ಲಿ ನಾಲ್ಕು ದಿನ ಮುಷ್ಕರ ಮಾಡಿದ್ದರು. ಮೂರು ತಿಂಗಳಾದರೂ ಸರ್ಕಾರವು ನೌಕರರ ಬೇಡಿಕೆ ಈಡೇರಿಸುವ ಪ್ರಯತ್ನ ಮಾಡಿಲ್ಲ. ಹೀಗಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದಿರುವ ಸಾರಿಗೆ ನೌಕರರು ಇಂದು ಸತ್ಯಾಗ್ರಹ ನಡೆಸಲಿದ್ದಾರೆ.

ಮುಂದೆ ಓದಿ ...
  • Share this:

ಬೆಂಗಳೂರು(ಮಾ.02): ಸಾರಿಗೆ ನೌಕರರು ಮತ್ತು ಸರ್ಕಾರದ ನಡುವೆ ಶೀತಲ ಸಮರ ನಡೆಯುತ್ತಲೇ ಇದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮತ್ತೆ ಆಗ್ರಹಿಸಿದ್ದಾರೆ. ಇವರ ಪ್ರತಿಭಟನೆ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ.  ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದಿರುವ ಸಾರಿಗೆ ನೌಕರರು ಇಂದು ಬೆಂಗಳೂರಿನ ಮೌರ್ಯ ಸರ್ಕಲ್​​ನಲ್ಲಿ ಸತ್ಯಾಗ್ರಹ ನಡೆಸಲಿದ್ದಾರೆ. ಹೀಗಾಗಿ ಬಿಎಂಟಿಸಿ, ಕೆಎಸ್​ಆರ್​​​ಟಿಸಿ ಸೇವೆ ಸ್ತಬ್ಧ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.


ರಾಜ್ಯ ಸರ್ಕಾರವು ಈವರೆಗೆ ಸಾರಿಗೆ ನೌಕರರ ಬೇಡಿಕೆ ಈಡೇರಿಸಿಲ್ಲ. ಸರ್ಕಾರದ ಈ ಧೋರಣೆಯನ್ನು ಖಂಡಿಸಿ ಸಾರಿಗೆ ನೌಕರರು ಸತ್ಯಾಗ್ರಹ  ಮತ್ತು ಸಮಾವೇಶಗಳನ್ನು ಮಾಡುತ್ತಲೇ ಇದ್ದಾರೆ.  ಬಿಎಂಟಿಸಿ, ಕೆಎಸ್​ಆರ್​​ಟಿಸಿ ಸೇರಿ ನಾಲ್ಕು ಸಾರಿಗೆ ನಿಗಮದ ನೌಕರರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.


ಆರನೇ ವೇತನ ಆಯೋಗ ಸೇರಿದಂತೆ 9 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೌರ್ಯ ಸರ್ಕಲ್​​ನಲ್ಲಿ ಚಲೋ ನಡೆಸಲಿದ್ದಾರೆ. ಸಾವಿರಾರು ನೌಕರರು ಸತ್ಯಾಗ್ರಹದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಇಂದು ರಾಜ್ಯದಲ್ಲಿ ಬಿಎಂಟಿಸಿ, ಕೆಎಸ್ಆರ್​​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.


ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಕಳೆದ ಡಿಸೆಂಬರ್​​​ನಲ್ಲಿ ನಾಲ್ಕು ದಿನ ಮುಷ್ಕರ ಮಾಡಿದ್ದರು. ಮೂರು ತಿಂಗಳಾದರೂ ಸರ್ಕಾರವು ನೌಕರರ ಬೇಡಿಕೆ ಈಡೇರಿಸುವ ಪ್ರಯತ್ನ ಮಾಡಿಲ್ಲ. ಹೀಗಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದಿರುವ ಸಾರಿಗೆ ನೌಕರರು ಇಂದು ಸತ್ಯಾಗ್ರಹ ನಡೆಸಲಿದ್ದಾರೆ.


ಕಾಫಿನಾಡಿನಲ್ಲಿ ಸಕ್ರಿಯವಾಗಿದೆ ಹುಲಿ ಬೇಟೆಗಾರರ ಜಾಲ; ಹುಲಿ ಉಗುರು, ಹಲ್ಲು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅಂದರ್​


ಸಾರಿಗೆ ನೌಕರರ  ಬೇಡಿಕೆಗಳೇನು?


2020ರ ಡಿಸೆಂಬರ್​ 14ರಿಂದ ಈವರೆಗೂ ಸಾರಿಗೆ ನೌಕರರ ಒಂದೇ ಒಂದು ಬೇಡಿಕೆಯೂ ಈಡೇರಿಲ್ಲ.


  • ಆರನೇ ವೇತನ ಆಯೋಗ ಶಿಫಾರಸ್ಸು ಸಾರಿಗೆ ನೌಕರರಿಗೆ ವಿಸ್ತರಿಸುವ ವಿಚಾರ

  • ಸರ್ಕಾರಿ ನೌಕರರಿಗೆ ಇರುವಂತ ಜ್ಯೋತಿ ಸಂಜೀವಿನಿ ಭಾಗ್ಯ ಏನಾಯ್ತು

  • ಸಾರಿಗೆ ನೌಕರರಿಗೆ ಸರ್ಕಾರಿ ಶಿಕ್ಷಕರಂತೆ ಅಂತರ್ ನುಗಮ ವರ್ಗಾವಣೆ ಪದ್ಧತಿ ಜಾರಿಗೆ ತರುವ ಬೇಡಿಕೆ ಏನಾಯ್ತು

  • ಇಲಾಖೆಗಳಲ್ಲಿ ಮೇಲಾಧಿಕಾರಿಗಳಿಂದ ಕಿರುಕುಳ ಅಲ್ಲಲ್ಲಿ ನಡೆಯುತ್ತಲೇ ಇದೆ

  • ಬಾಟ ,ಭತ್ಯೆ ಮತ್ತು ಓಟಿ ನೀಡುವಂತೆ ಕೇಳಿದ ಬೇಡಿಕೆ

  • ಎನ್ ಐ ಎನ್ ಸಿ ಪದ್ಧತಿ ರದ್ದು ಮಾಡುವಂತೆ ಬೇಡಿಕೆ ಏನಾಯ್ತು

  • ಎಚ್ ಆರ್ ಎಂ ಎಸ್ ಪದ್ಧತಿ ಜಾರಿ ಮಾಡುವುದೇ ಏನಾಯ್ತು

  • ಕೊರೋನಾ ಸೋಂಕಿತನಿಂದ ಮೃತ ಪಟ್ಟಿರುವ ನೌಕರರಿಗರ 30 ಲಕ್ಷ ಜೀವ ವಿಮೆ ನೀಡುವುದು ಎಲ್ಲಿ ಹೋಯ್ತು

  • ಸಾರಿಗೆ ಸಂಸ್ಥೆಗಳಲ್ಲಿ ಜಾರಿಯಲ್ಲಿರುವ ಎರಡು ವರ್ಷ ತರಬೇತಿ ಅವಧಿಯನ್ನು ಒಂದು ವರ್ಷಕ್ಕೆ ಕಡಿತ ಮಾಡುವ ಬೇಡಿಕೆ ಎಲ್ಲಿ ಹೋಯ್ತು

  • ಬಜೆಟ್ ನಲ್ಲಿ ಸಾರಿಗೆಗೆ ಹೆಚ್ಷು ಒತ್ತು ನೀಡಿ ಎಂದು ಆಗ್ರಹ



ಒಟ್ಟಾರೆ ಸಾರಿಗೆ ನೌಕರರ ಈ ಪ್ರತಿಭಟನೆ ನಿಲ್ಲಬೇಕಾದರೆ ಸರ್ಕಾರವು ಅವರ ಬೇಡಿಕೆಗಳನ್ನು ಈಡೇರಿಸಬೇಕಾಗಿದೆ. ಇಂದಾದರೂ ಸರ್ಕಾರ ಸಾರಿಗೆ ನೌಕರರ ಬೇಡಿಕೆ ಈಡೇರಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.

First published: