• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Accident: ಗದಗದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್​​ಆರ್​ಟಿಸಿ ಬಸ್ ಅಪಘಾತ; ಐವರಿಗೆ ಗಂಭೀರ ಗಾಯ

Accident: ಗದಗದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್​​ಆರ್​ಟಿಸಿ ಬಸ್ ಅಪಘಾತ; ಐವರಿಗೆ ಗಂಭೀರ ಗಾಯ

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

ಅಪಫಾತಕ್ಕೀಡಾದ ಬಸ್ ಗದಗದ ರೋಣದಿಂದ ಬೆಂಗಳೂರಿಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಬಸ್​​ನಲ್ಲಿ ಸುಮಾರು 20 ಜನ ಪ್ರಯಾಣಿಕರು ಇದ್ದರು. 

  • Share this:

    ಬೆಂಗಳೂರು(ಮಾ.25): ನಿಂತಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು ಸುಮಾರು 5 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.


    ಗಾಯಗೊಂಡಿರುವವರಲ್ಲಿ ಓರ್ವ ಪ್ರಯಾಣಿಕನಿಗೆ ಎರಡೂ ಕಾಲುಗಳೂ ಕಟ್ ಆಗಿವೆ. ಬಸ್ ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು ಅವರಿಗೆ ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


    ಅಪಫಾತಕ್ಕೀಡಾದ ಬಸ್ ಗದಗದ ರೋಣದಿಂದ ಬೆಂಗಳೂರಿಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಬಸ್​​ನಲ್ಲಿ ಸುಮಾರು 20 ಜನ ಪ್ರಯಾಣಿಕರು ಇದ್ದರು.


    ನದಿ‌ಜೋಡಣೆ ಯೋಜನೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಬಲ ವಿರೋಧ; ಹೋರಾಟಕ್ಕೆ ಕೈ ಜೋಡಿಸಿದ ಪರಿಸರ ತಜ್ಞರು


    ಬಸ್ ಚಾಲಕ ರಾಘವೇಂದ್ರ ಗಜಕೋಲ್, ನಿರ್ವಾಹಕ ಅಡವಿಯಪ್ಪ, ಹೆಚ್ಚುವರಿ ಚಾಲಕ ಕೆ‌ಎಸ್‌ ಕುಲಕರ್ಣಿ‌ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು. ಆಸ್ಪತ್ರೆಗೆ ದಾಖಲಿಸಲಾಗಿದೆ.


    ಅಪಘಾತದಿಂದಾಗಿ ಮಾದನಾಯಕನಹಳ್ಳಿ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿತ್ತು.  ಟ್ರಾಫಿಕ್ ನಿಯಂತ್ರಿಸಲು ಸಂಚಾರಿ ಪೋಲಿಸರು ಹರಸಾಹಸ ಪಟ್ಟರು. ನೆಲಮಂಗಲ ಸಂಚಾರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    Published by:Latha CG
    First published: