Kukke Subrahmanya: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಭರಣಗಳು ನಾಪತ್ತೆಯಾಗಿಲ್ಲ; ದೇಗುಲದಿಂದ ಸ್ಪಷ್ಟನೆ
Kukke Subrahmanya Temple: ಕುಕ್ಮೆ ಸುಬ್ರಹ್ಮಣ್ಯ ದೇವಸ್ಥಾನದ ಎಲ್ಲ ಆಭರಣಗಳು ಸುರಕ್ಷಿತವಾಗಿದ್ದು, ಯಾವುದೇ ಅವ್ಯವಹಾರಗಳು ನಡೆದಿಲ್ಲ ಎಂದು ಆಡಳಿತ ಮಂಡಳಿ ಸ್ಫಷ್ಟಪಡಿಸಿದೆ.
news18-kannada Updated:October 23, 2020, 12:55 PM IST

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
- News18 Kannada
- Last Updated: October 23, 2020, 12:55 PM IST
ಮಂಗಳೂರು (ಅ. 23): ಕರ್ನಾಟಕದ ಪ್ರಸಿದ್ಧ ನಾಗಕ್ಷೇತ್ರವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಮೇಲೆ ದೇವಾಲಯದ ಆಭರಣಗಳನ್ನು ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿತ್ತು. ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತಾಧಿಕಾರಿ ರೂಪಾ ಎಂ.ಜೆ ಹಾಗೂ ದೇಗುಲದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿದ್ದ ರವೀಂದ್ರ ಎಂ.ಎಚ್ ಅವರ ಮೇಲೆ ಸುಬ್ರಹ್ಮಣ್ಯದ ನಿವಾಸಿಯಾದ ಶ್ರೀನಾಥ್ ಟಿ.ಎಸ್. ಅವರು ಮಂಗಳೂರಿನ ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹದಳದ ಪೋಲಿಸ್ ಅಧೀಕ್ಷಕರಿಗೆ ದೂರು ದಾಖಲಿಸಿದ್ದು, ತನಿಖೆ ನಡೆಸುವಂತೆ ಕೋರಿದ್ದರು. ಈ ಕುರಿತು ದೇವಾಲಯದಿಂದ ಇಂದು ಸ್ಪಷ್ಟನೆ ನೀಡಲಾಗಿದೆ. ದೇವಸ್ಥಾನದ ಎಲ್ಲ ಆಭರಣಗಳು ಸುರಕ್ಷಿತವಾಗಿದ್ದು, ಯಾವುದೇ ಅವ್ಯವಹಾರಗಳು ನಡೆದಿಲ್ಲ ಎಂದು ಸ್ಫಷ್ಟಪಡಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಡಳಿತ ವಿಭಾಗದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಧಿಕೃತ ದಾಖಲಾತಿ ಪುಸ್ತಕದಲ್ಲಿ ದಾಖಲಾಗಿರುವ ಕೋಟ್ಯಾಂತರ ರೂಪಾಯಿ ಮೌಲ್ಯದ ವಜ್ರದ ಕಂಠಿಹಾರ, ಆಭರಣ, ಲಿಂಗ ದೇವರ ಬೆಳ್ಳಿಯ ಒಡವೆಗಳಲ್ಲಿ ಅವ್ಯವಹಾರವಾಗಿದೆ ಎಂದು ದೂರಿ ಈ ದೂರು ದಾಖಲಾಗಿತ್ತು. ವರ್ಷದ ಹಿಂದೆ ಈ ಬಗ್ಗೆ ದೇವಸ್ಥಾದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮೋನಪ್ಪ ಮಾನಾಡು ಎಂಬುವವರು ದೇವಸ್ಥಾನಕ್ಕೆ ಈ ವಸ್ತುಗಳ ಬಗ್ಗೆ ವಿವರ ನೀಡುವಂತೆ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ನಾಪತ್ತೆ; ಆಡಳಿತ ಮಂಡಳಿ ವಿರುದ್ಧ ದೂರು
ಈ ಅರ್ಜಿಗೆ ದೇವಸ್ಥಾನದಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲದ ಹಿನ್ನೆಲೆಯಲ್ಲಿ ಶ್ರೀನಾಥ್ ಟಿ.ಎಸ್ ಈ ಒಡವೆಗಳಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕುಕ್ಮೆ ಸುಬ್ರಹ್ಮಣ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್, ದೇವಸ್ಥಾನದ ಎಲ್ಲ ಆಭರಣಗಳು ಸುರಕ್ಷಿತವಾಗಿದ್ದು, ಯಾವುದೇ ಅವ್ಯವಹಾರಗಳು ನಡೆದಿಲ್ಲ ಎಂದು ಸ್ಫಷ್ಟಪಡಿಸಿದ್ದಾರೆ.
ದೂರು ನೀಡಿದ ಶ್ರೀನಾಥ ಎನ್ನುವ ವ್ಯಕ್ತಿ ಕಳೆದ ವರ್ಷದವರೆಗೂ ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಪೂಜೆಯ ಸೇವೆ ಸಲ್ಲಿಸುತ್ತಿದ್ದರು. ಈ ನಡುವೆ ಭಕ್ತರೊಬ್ಬರಿಂದ ದಕ್ಷಿಣೆಗೆ ಪೀಡಿಸಿದ ಹಿನ್ನಲೆಯಲ್ಲಿ ಭಕ್ತರು ಶ್ರೀನಾಥ ವಿರುದ್ಧ ದೂರು ದಾಖಲಿಸಿದ್ದರು. ದೇವಸ್ಥಾನದ ವತಿಯಿಂದ ಈ ಬಗ್ಗೆ ತನಿಖೆ ಕೈಗೊಂಡಾಗ ಭಕ್ತರ ದೂರಿನಲ್ಲಿ ಸತ್ಯಾಂಶ ಇರುವುದು ಬೆಳಕಿಗೆ ಬಂದಿತ್ತು. ಈ ಕಾರಣಕ್ಕಾಗಿ ಶ್ರೀನಾಥ ಅವರನ್ನು ಸೇವಾ ಕಾರ್ಯಗಳಿಂದ ಉಚ್ಛಾಟಿಸಲಾಗಿತ್ತು. ಇದೇ ಕಾರಣಕ್ಕಾಗಿ ತನ್ನ ವೈಯುಕ್ತಿಕ ದ್ವೇಷ ಸಾಧನೆಗಾಗಿ ಈ ರೀತಿಯ ದೂರು ದಾಖಲಿಸಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ರವೀಂದ್ರ ಎಂ.ಎಚ್. ಸ್ಪಷ್ಟಪಡಿಸಿದ್ದಾರೆ. ಭಕ್ತಾದಿಗಳು ಈ ಬಗ್ಗೆ ಯಾವುದೇ ಗೊಂದಲಕ್ಕೆ ಒಳಗಾಗಬೇಕಿಲ್ಲ ಎಂದೂ ದೇವಸ್ಥಾನದ ವತಿಯಿಂದ ವಿನಂತಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಡಳಿತ ವಿಭಾಗದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಧಿಕೃತ ದಾಖಲಾತಿ ಪುಸ್ತಕದಲ್ಲಿ ದಾಖಲಾಗಿರುವ ಕೋಟ್ಯಾಂತರ ರೂಪಾಯಿ ಮೌಲ್ಯದ ವಜ್ರದ ಕಂಠಿಹಾರ, ಆಭರಣ, ಲಿಂಗ ದೇವರ ಬೆಳ್ಳಿಯ ಒಡವೆಗಳಲ್ಲಿ ಅವ್ಯವಹಾರವಾಗಿದೆ ಎಂದು ದೂರಿ ಈ ದೂರು ದಾಖಲಾಗಿತ್ತು. ವರ್ಷದ ಹಿಂದೆ ಈ ಬಗ್ಗೆ ದೇವಸ್ಥಾದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮೋನಪ್ಪ ಮಾನಾಡು ಎಂಬುವವರು ದೇವಸ್ಥಾನಕ್ಕೆ ಈ ವಸ್ತುಗಳ ಬಗ್ಗೆ ವಿವರ ನೀಡುವಂತೆ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗೆ ದೇವಸ್ಥಾನದಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲದ ಹಿನ್ನೆಲೆಯಲ್ಲಿ ಶ್ರೀನಾಥ್ ಟಿ.ಎಸ್ ಈ ಒಡವೆಗಳಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕುಕ್ಮೆ ಸುಬ್ರಹ್ಮಣ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್, ದೇವಸ್ಥಾನದ ಎಲ್ಲ ಆಭರಣಗಳು ಸುರಕ್ಷಿತವಾಗಿದ್ದು, ಯಾವುದೇ ಅವ್ಯವಹಾರಗಳು ನಡೆದಿಲ್ಲ ಎಂದು ಸ್ಫಷ್ಟಪಡಿಸಿದ್ದಾರೆ.
ದೂರು ನೀಡಿದ ಶ್ರೀನಾಥ ಎನ್ನುವ ವ್ಯಕ್ತಿ ಕಳೆದ ವರ್ಷದವರೆಗೂ ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಪೂಜೆಯ ಸೇವೆ ಸಲ್ಲಿಸುತ್ತಿದ್ದರು. ಈ ನಡುವೆ ಭಕ್ತರೊಬ್ಬರಿಂದ ದಕ್ಷಿಣೆಗೆ ಪೀಡಿಸಿದ ಹಿನ್ನಲೆಯಲ್ಲಿ ಭಕ್ತರು ಶ್ರೀನಾಥ ವಿರುದ್ಧ ದೂರು ದಾಖಲಿಸಿದ್ದರು. ದೇವಸ್ಥಾನದ ವತಿಯಿಂದ ಈ ಬಗ್ಗೆ ತನಿಖೆ ಕೈಗೊಂಡಾಗ ಭಕ್ತರ ದೂರಿನಲ್ಲಿ ಸತ್ಯಾಂಶ ಇರುವುದು ಬೆಳಕಿಗೆ ಬಂದಿತ್ತು. ಈ ಕಾರಣಕ್ಕಾಗಿ ಶ್ರೀನಾಥ ಅವರನ್ನು ಸೇವಾ ಕಾರ್ಯಗಳಿಂದ ಉಚ್ಛಾಟಿಸಲಾಗಿತ್ತು. ಇದೇ ಕಾರಣಕ್ಕಾಗಿ ತನ್ನ ವೈಯುಕ್ತಿಕ ದ್ವೇಷ ಸಾಧನೆಗಾಗಿ ಈ ರೀತಿಯ ದೂರು ದಾಖಲಿಸಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ರವೀಂದ್ರ ಎಂ.ಎಚ್. ಸ್ಪಷ್ಟಪಡಿಸಿದ್ದಾರೆ. ಭಕ್ತಾದಿಗಳು ಈ ಬಗ್ಗೆ ಯಾವುದೇ ಗೊಂದಲಕ್ಕೆ ಒಳಗಾಗಬೇಕಿಲ್ಲ ಎಂದೂ ದೇವಸ್ಥಾನದ ವತಿಯಿಂದ ವಿನಂತಿಸಲಾಗಿದೆ.