ಹುಬ್ಬಳ್ಳಿ: ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ (Open Election Campaign) ನಡೆಯುತ್ತಿದೆ. ಎಲ್ಲಾ ನಾಯಕರು ಬಹಿರಂಗ ಸಭೆ ಮತ್ತು ರೋಡ್ಶೋ (Roadshow) ಮಾಡುತ್ತಿದ್ದಾರೆ. 224 ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಭ್ರಷ್ಟಾಚಾರದ ದಾಖಲೆ ಕೊಡಿ ಎಂದು ಚುನಾವಣಾ ಆಯೋಗಕ್ಕೆ (Election Commission) ಕೇಳಿದ್ದೆ, ಅವರಿಗೆ ಕೊಡಲು ಆಗಿಲ್ಲ. ನಮ್ಮ ವಿರುದ್ಧ ಯಾವುದೇ ಕೇಸ್ ಇಲ್ಲ, ಸಾಕ್ಷಿನೂ ಇಲ್ಲ. ಇಷ್ಟೆಲ್ಲಾ ಮಾತನಾಡುವ ಕಾಂಗ್ರೆಸ್ನವರ (Congress) ಮೇಲೆಯೇ ಭ್ರಷ್ಟಾಚಾರದ ಕೇಸ್ಗಳಿವೆ. ತಮ್ಮ ಮೇಲೆ ಕೇಸ್ ಇದ್ದು ಕೋರ್ಟ್ಗೆ ಅಲೆದಾಡುತ್ತಿದ್ದಾರೆ. ಯಾವ ನೈತಿಕತೆಯಿಂದ ನಮ್ಮನ್ನು ಪ್ರಶ್ನಿಸುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ವಾಗ್ದಾಳಿ ನಡೆಸಿದರು.
ವೀರಶೈವ ಸಮಾಜ ದೊಡ್ಡದಿದ್ದು ಯಾವುದೇ ಸಂಸ್ಥೆಯ ಅಡಿಯಲ್ಲಿ ಇಲ್ಲ. ವೀರಶೈವ ಮಹಾಸಭಾ ಅಧ್ಯಕ್ಷರಿಗೆ ನಾವು ಗೌರವ ಕೊಡುತ್ತೇವೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಒಂದು ಪಕ್ಷಕ್ಕೆ ಸಂಸ್ಥೆ ಹೆಸರು ಬಳಸುವುದು ಸರಿಯಲ್ಲ. ಲಿಂಗಾಯತ ವೇದಿಕೆ ಅನ್ನೋದು ಎಲ್ಲಿಯೂ ಇಲ್ಲ. ಅದೊಂದು ಕಾಲ್ಪನಿಕ ಸಂಘಟನೆ. ನಾಲ್ಕು ಜನ ಸೇರಿ ಏನೋ ಹೇಳಿದ್ರೆ ಅದು ಲಿಂಗಾಯತರ ಧ್ವನಿ ಆಗುತ್ತಾ ಎಂದು ಪ್ರಶ್ನೆ ಮಾಡಿದರು.
ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು
ಲಿಂಗಾಯತ ಸಮಾಜ ಅನ್ನೋದು ಸಮುದ್ರ ಇದ್ದಂತೆ. ಲಿಂಗಾಯತ ವೇದಿಕೆ ಚುನಾವಣೆ ಸಂದರ್ಭಗಳಲ್ಲಿ ಹುಟ್ಟಿಕೊಂಡ ಸಂಘಟನೆ. ಐಟಿಯವರು ಎಲ್ಲಾ ಜಿಲ್ಲೆಯಲ್ಲಿದ್ದಾರೆ. ಎಲ್ಲಿ ತಪ್ಪು ನಡೆಯುತ್ತೋ ಅವರಿಗೆ ಮಾಹಿತಿ ಇರುತ್ತೆ. ಕಾಂಗ್ರೆಸ್ನವರು ತಪ್ಪು ಮಾಡಿದ್ರೆ ನಾವು ಏನ್ ಮಾಡೋಕಾಗುತ್ತೆ ಎಂದು ಕೈ ನಾಯಕರ ಆರೋಪಕ್ಕೆ ಸಿಎಂ ತಿರುಗೇಟು ನೀಡಿದರು.
ಪ್ರಚಾರ ಪಕ್ಷಕ್ಕೆ ಬೂಸ್ಟರ್ ಡೋಸ್ ಸಿಗಲಿದೆ
ಕಾಂಗ್ರೆಸ್ನವರ ಮೊದಲೇ ರೈಡ್ ಆಗುತ್ತೆ ಎಂದು ಹೇಳುತ್ತಾರೆ. ಮೊದಲೇ ಐಟಿ ದಾಳಿ ಆಗುತ್ತೆ ಅಂತ ಹೇಳೋದು ಕಾಂಗ್ರೆಸ್ನವರ ತಂತ್ರಗಾರಿಕೆ. ಮೊದಲು ತಪ್ಪು ಮಾಡೋದನ್ನ ಕಾಂಗ್ರೆಸ್ ಬಿಡಲಿ.
ಇದನ್ನೂ ಓದಿ: Karnataka Election Day Rain: ಚುನಾವಣೆಯ ದಿನ ಮಳೆಯಾಗುತ್ತಾ ಇಲ್ವಾ?
ನಮ್ಮ ರಾಷ್ಟ್ರೀಯ ನಾಯಕರು ಎಲ್ಲಾ ಚುನಾವಣೆಯಲ್ಲಿ ರಾಜ್ಯಕ್ಕೆ ಬಂದಿದ್ದಾರೆ. ರಾಷ್ಟ್ರೀಯ ನಾಯಕರದ್ದು ಹಾಗೂ ಕರ್ನಾಟಕದ ಜನರದ್ದು ಭಾವನಾತ್ಮಕ ಸಂಬಂಧ. ಇದೊಂದು ದೊಡ್ಡ ಮಟ್ಟದಲ್ಲಿ ಬೂಸ್ಟರ್ ಡೋಸ್ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ