• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka CM: ಹೈಕಮಾಂಡ್ ಮಾತಿಗೂ ಬಗ್ಗದ ಸಿದ್ದು-ಡಿಕೆಶಿ! ನಾಳೆ ಖರ್ಗೆ ನೇತೃತ್ವದಲ್ಲಿ ಮತ್ತೊಂದು ಸಭೆ

Karnataka CM: ಹೈಕಮಾಂಡ್ ಮಾತಿಗೂ ಬಗ್ಗದ ಸಿದ್ದು-ಡಿಕೆಶಿ! ನಾಳೆ ಖರ್ಗೆ ನೇತೃತ್ವದಲ್ಲಿ ಮತ್ತೊಂದು ಸಭೆ

ಡಿಕೆಶಿ-ಖರ್ಗೆ-ಸಿದ್ದು

ಡಿಕೆಶಿ-ಖರ್ಗೆ-ಸಿದ್ದು

ಅಂತಿಮ ನಿರ್ಧಾರಕ್ಕೆ ಬರಲು ಆಗದೇ ಮಲ್ಲಿಕಾರ್ಜುನ್ ಖರ್ಗೆ ಟೆನ್ಶನ್ ಆಗಿದ್ದಾರೆ. ಹೀಗಾಗಿ ನಾಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಒಂದೆಡೆ ಕೂರಿಸಿಕೊಂಡು ಸಭೆ ನಡೆಸಲು ಖರ್ಗೆ ನಿರ್ಧರಿಸಿದ್ದಾರೆ.

  • News18 Kannada
  • 5-MIN READ
  • Last Updated :
  • Karnataka, India
  • Share this:

ನವದೆಹಲಿ: ಕರ್ನಾಟಕ ಹೊಸ ಸಿಎಂ (new CM of Karnataka) ಆಯ್ಕೆ ಇನ್ನೂ ಕಗ್ಗಂಟಾಗಿದೆ. ಇಂದು ನವದೆಹಲಿಯಲ್ಲಿ ಸಭೆಗಳ ಮೇಲೆ ಸಭೆ ನಡೆಯಿತು. ಆದರೆ ಒಂದು ಒಮ್ಮತದ ನಿರ್ಧಾರಕ್ಕೆ ಬರುವಲ್ಲಿ ಕಾಂಗ್ರೆಸ್ ಹೈಕಮಾಂಡ್ (Congress high command) ವಿಫಲವಾಗಿದೆ. ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ಪಟ್ಟು ಹಿಡಿದು ಕುಳಿತಿದ್ದಾರೆ. ಬೇಕಿದ್ದರೆ ನೀವೇ ಸಿಎಂ ಆಗಿ, ಆದರೆ ಬೇರೆಯವರಿಗೆ ಮಾತ್ರ ಸಿಎಂ ಸ್ಥಾನ ಬಿಟ್ಟುಕೊಡುವುದಕ್ಕೆ ಸಾಧ್ಯವೇ ಇಲ್ಲ ಅಂತ ಡಿಕೆಶಿ ಹೇಳಿದ್ದಾರೆ. ಅತ್ತ ನಾನು ಪೂರ್ಣಾವಧಿಗೇ ಸಿಎಂ ಆಗುತ್ತೀನಿ ಅಂತ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಅಂತಿಮ ನಿರ್ಧಾರಕ್ಕೆ ಬರಲು ಆಗದೇ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಟೆನ್ಶನ್ ಆಗಿದ್ದಾರೆ. ಹೀಗಾಗಿ ನಾಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಒಂದೆಡೆ ಕೂರಿಸಿಕೊಂಡು ಸಭೆ ನಡೆಸಲು ಖರ್ಗೆ ನಿರ್ಧರಿಸಿದ್ದಾರೆ.   


ಕುರ್ಚಿಗಾಗಿ ಪಟ್ಟು ಬಿಡದ ಡಿಕೆಶಿ!


ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಡಿಕೆಶಿ ಜೊತೆ ತಮ್ಮ ನಿವಾಸದಲ್ಲಿ ಚರ್ಚೆ ನಡೆಸಿದರು. ಈ ವೇಳೆ ಡಿಕೆ ಶಿವಕುಮಾರ್, “ಸಿದ್ದರಾಮಯ್ಯ ಜೊತೆ ಯಾವುದೇ ಕಾರಣಕ್ಕೂ ಅಧಿಕಾರ ಹಂಚಿಕೆ ಇಲ್ಲ, ಸಿಎಂ ಸ್ಥಾನ ಬಿಟ್ಟುಕೊಡುವ ಮಾತೇ ಇಲ್ಲ” ಎಂದಿದ್ದಾರೆ ಅಂತ ಮೂಲಗಳು ತಿಳಿಸಿವೆ.


ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಪರೋಕ್ಷ ವಾಗ್ದಾಳಿ


ಸಿದ್ದರಾಮಯ್ಯ ವಿರುದ್ಧ ಡಿಕೆ ಶಿವಕುಮಾರ್ ಪರೋಕ್ಷವಾಗಿ ಕಿಡಿ ಕಾರಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಜೊತೆಗಿನ ಮಾತುಕತೆ ವೇಳೆ, ಮುಖ್ಯಮಂತ್ರಿ ಸ್ಥಾನವನ್ನು ಕೆಲವರು ತಮ್ಮ ಪೂರ್ವಜರ ಆಸ್ತಿ ಎಂದು ಭಾವಿಸಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಅವರ ಜೊತೆ ಅಧಿಕಾರ ಹಂಚಿಕೆ ಇಲ್ಲ ಅಂತ ಖಡಾಖಂಡಿತವಾಗಿ ಹೇಳಿದ್ದಾರೆ.
ಇದನ್ನೂ ಓದಿ: Karnataka CM: ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಸಾಧ್ಯವೇ ಇಲ್ಲ! ಖರ್ಗೆ ಮುಂದೆ ಡಿಕೆಶಿ ಖಡಕ್ ಮಾತು


ಮುಖ್ಯಮಂತ್ರಿ ಪಟ್ಟಕ್ಕಾಗಿ ಪಟ್ಟು ಬಿಡದ ಸಿದ್ದು!


ಇನ್ನು ಎಐಸಿಸಿ ಅಧ್ಯಕ್ಷರ ಜೊತೆ ಚರ್ಚೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಆಯ್ಕೆ ಸ್ಥಾನವನ್ನು ಶಾಸಕಾಂಗ ಪಕ್ಷದ ಸಭೆಯಂತೆ ನಿರ್ಧಾರ ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಶಾಸಕರು ಬೆಂಬಲ ಯಾರ ಪರವಾಗಿ ಹೆಚ್ಚಿದೆ ಅವರನ್ನೇ ಶಾಸಕಾಂಗ ಪಕ್ಷದ ನಾಯಕನಾಗಿ ಘೋಷಣೆ ಮಾಡಿ ಎಂದು ಖರ್ಗೆ ಮುಂದೆ ಸಿದ್ದು ಹೇಳಿದ್ದಾರೆ.


ಬಹುತೇಕ ಶಾಸಕರು ನನ್ನ ಪರ ಇದ್ದಾರೆ


ಖರ್ಗೆ ಜೊತೆ ಮಾತನಾಡುವಾಗ ಸಿದ್ದರಾಮಯ್ಯ ಬಹುತೇಕ ಶಾಸಕರು ನನ್ನ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂದರೆ ಅವರೆಲ್ಲರು ನನ್ನ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ ಎಂದೇ ಅರ್ಥ. ಶಾಸಕರ ಅಭಿಪ್ರಾಯವನ್ನು ಗೌರವಿಸುವಂತೆ ಖರ್ಗೆಯವರಿಗೆ ಸಿದ್ದರಾಮಯ್ಯ ಮನವರಿಕೆ ಮಾಡಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.




ಸಿದ್ದು ಪರ ನಿಂತ ಕುರುಬರ ಸಂಘ

top videos


    ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಹಾಗೂ ಸಂಘಗಳು ಕಾಂಗ್ರೆಸ್​ ಪಕ್ಷಕ್ಕೆ ಒತ್ತಡ ಹೇರುತ್ತಿರುವ ಬೆನ್ನಲ್ಲೇ ಕುರುಬ ಸಂಘ ಸಿದ್ದರಾಮಯ್ಯ ಪರ ನಿಂತಿವೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಡಿ ವೆಂಕಟೇಶ್ ಮೂರ್ತಿ, ರಾಜ್ಯದ ಸಿಎಂ ಆಗಿ ಇಬ್ಬರು ಸ್ಪರ್ಧೆಯಲ್ಲಿದ್ದಾರೆ. ಆದರೆ ಹಿಂದುಳಿದ ವರ್ಗದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ನೀಡಬೇಕು. ಶೇ.80 ರಷ್ಟು ಅಹಿಂದ ಮತದಾರರು ಸಿದ್ದರಾಮಯ್ಯನವರನ್ನು ನೋಡಿ ಕಾಂಗ್ರೆಸ್​ಗೆ ಮತ ನೀಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಹಾಗೂ ಬಡತನ ನಿರ್ನಾಮ ಮಾಡಲು ಸಿದ್ದರಾಮಯ್ಯ ಅವರ ಅಗತ್ಯ ಇದೆ ಎಂದು ತಿಳಿಸಿದ್ದಾರೆ.

    First published: