ಮಂಗಳೂರು: ಬಿರು ಬೇಸಿಗೆ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಇನ್ನೊಂದೆಡೆ ಮಂಗಳೂರು ಮಹಾನಗರಕ್ಕೆ (Mangaluru Water Crisis) ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ (Tumbe Dam) ಭಾರೀ ಪ್ರಮಾಣದಲ್ಲಿ ನೀರು ಇಳಿಮುಖವಾಗಿದ್ದು, ಈಗಾಗಲೇ ಎರಡು ದಿನಕ್ಕೊಮ್ಮೆ ನೀರು ಪೂರೈಸುವ ರೇಷನಿಂಗ್ ಪದ್ಧತಿಯಲ್ಲೂ (Mangaluru EWater Rationing) ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು 'Daijiworldʼ ಸುದ್ದಿ ಸಂಸ್ಥೆ ವರದಿ ಮಾಡಿದೆ.
ನೀರು ಸಂಗ್ರಹ ಕುಸಿತ; ಹೆಚ್ಚಿದ ಆತಂಕ
ತುಂಬೆ ಡ್ಯಾಂನಲ್ಲಿ ಈ ವಾರದ ಆರಂಭಕ್ಕೆ 4.03 ಮೀಟರ್ಗೆ ನೀರು ಇಳಿಕೆ ಆಗಿದೆ. ಪಶ್ಚಿಮ ಘಟ್ಟಗಳಲ್ಲೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದು ನೀರಿನ ಒಳ ಹರಿವು ಇಲ್ಲದಂತೆ ಆಗಿದೆ. ಹೀಗಾಗಿ ಮಂಗಳೂರಿನಲ್ಲಿ ಸದ್ಯ ಎರಡು ದಿನಕ್ಕೊಮ್ಮೆ ನೀರು ಕೊಡಲಾಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ, ಈ ನಿಯಮದಲ್ಲೂ ಬದಲಾವಣೆ ಆಗುವ ಸಾಧ್ಯತೆ ಇದೆ.
ಟ್ಯಾಂಕರ್ ಪೂರೈಕೆಗೂ ನೀರಿಲ್ಲ!
ಈ ಹಿಂದೆ ತುಂಬೆ ಡ್ಯಾಂನಿಂದ ನೀರು ಪೂರೈಕೆ ವ್ಯತ್ಯಯವಾದಾಗ, ಬೇಸಿಗೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯು ಟ್ಯಾಂಕರ್ ನೀರಿನ ಮೊರೆ ಹೋಗುತ್ತಿತ್ತು. ಪಾಲಿಕೆ ವ್ಯಾಪ್ತಿಯ 60 ವಾರ್ಡ್ಗಳಲ್ಲಿ ಹಲವು ಟ್ಯಾಂಕರ್ಗಳ ಮೂಲಕ ಅಗತ್ಯವಿದ್ದಲ್ಲಿಗೆ ನೀರು ಪೂರೈಸುತ್ತಿತ್ತು.
ಇದನ್ನೂ ಓದಿ: Mangaluru News: ಮಂಗಳೂರಿನಲ್ಲಿ ರಕ್ತದ ಅಭಾವ, ದಾನಿಗಳೇ ಮುಂದೆ ಬನ್ನಿ!
ಆದರೆ, ಈ ಬಾರಿ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಬಾವಿಗಳಲ್ಲೂ ನೀರು ಇಲ್ಲವಾಗಿದೆ. ಇರುವ ಬಾವಿಗಳ ನೀರು ಕೆಸರಿನಿಂದ ತುಂಬಿದ್ದು, ನೀರು ಇನ್ನೇನು ಬತ್ತಿ ಹೋಗುವುದರಲ್ಲಿದೆ. ಹೀಗಾಗಿ ಹಣ ಕೊಡ್ತೀವಿ ಅಂದ್ರೂ ಕುಡಿಯುವ ನೀರಿನ ಪೂರೈಕೆ ಜಟಿಲವಾಗುತ್ತಿದೆ.
ಕೆರೆಗಳಲ್ಲಿ ನೀರು ಇದ್ರೂ ನೋ ಯೂಸ್!
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಗುಜ್ಜರಕೆರೆ, ಕಾವೂರು ಕೆರೆ ಹೀಗೆ ಹಲವು ಕೆರೆಗಳಿದ್ರೂ ಅದರ ನೀರು ಕುಡಿಯಲು ಯೋಗ್ಯವಾಗಿಲ್ಲ. ಶುದ್ಧೀಕರಣ ವ್ಯವಸ್ಥೆ ಇಲ್ಲಿದಿರುವುದರಿಂದ ಅದನ್ನು ಪೂರೈಸುವಂತಿಲ್ಲ.
ಇದನ್ನೂ ಓದಿ: Dakshina Kannada News: ಕರಾವಳಿಯಲ್ಲಿ ಹೆಚ್ಚಾಯ್ತು ಜೇನುತುಪ್ಪ ಸಂಗ್ರಹ, ಬೇಸಿಗೆಯೇ ಕಾರಣ!
ಹೀಗಾಗಿ ವಸತಿ ಸಮುಚ್ಚಯ, ವಾಣಿಜ್ಯ ಮಳಿಗೆಗಳು ಸಮರ್ಪಕ ನೀರು ಇಲ್ಲದೇ ಸಂಕಷ್ಟಪಡುವಂತಾಗಿದೆ. ಒಟ್ಟಿನಲ್ಲಿ ಮಹಾನಗರ ಪಾಲಿಕೆ ಇಕ್ಕಟ್ಟಿನಲ್ಲಿ ಸಿಲುಕಿದ್ದು, ಮಳೆ ಸುರಿಯುವುದನ್ನೇ ಮುಂದೆ ನೋಡ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ