• ಹೋಂ
  • »
  • ನ್ಯೂಸ್
  • »
  • state
  • »
  • Oscar Fernandes: ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್​ ಫರ್ನಾಂಡಿಸ್​​ ಆರೋಗ್ಯ ವಿಚಾರಿಸಿದ ಎಂಬಿ ಪಾಟೀಲ್​

Oscar Fernandes: ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್​ ಫರ್ನಾಂಡಿಸ್​​ ಆರೋಗ್ಯ ವಿಚಾರಿಸಿದ ಎಂಬಿ ಪಾಟೀಲ್​

ಆಸ್ಕರ್​ ಫರ್ನಾಂಡಿಸ್​ ಅವರ ಹಳೆಯ ಚಿತ್ರ

ಆಸ್ಕರ್​ ಫರ್ನಾಂಡಿಸ್​ ಅವರ ಹಳೆಯ ಚಿತ್ರ

ಅವರು ಜಂಟಲ್ ಮೆನ್, ಬಹಳ ಒಳ್ಳೆಯ ಮನುಷ್ಯ. ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದರು.

  • Share this:

ಮಂಗಳೂರು (ಜು. 21):  ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆಸ್ಕರ್​ ಫರ್ನಾಂಡಿಸ್​ ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆ ಅವರ ಎಂ ಬಿ ಪಾಟೀಲ್​ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಇಲ್ಲಿನ ಯೆನೆಪೋಯಾ ಆಸ್ಪತ್ರೆಯಲ್ಲಿ ಐಸಿಯು ಅಲ್ಲಿ ದಾಖಲಾಗಿರುವ ತಮ್ಮ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮಾತನಾಡಿದ ಎಂಬಿ ಪಾಟೀಲ್​, ಆಸ್ಕರ್ ಅವರಿಗೆ ಸದ್ಯ ಪರಿಣಿತ ತಜ್ಞ ವೈದ್ಯರ ತಂಡ ಚಿಕಿತ್ಸೆ ಕೊಡುತ್ತಿದ್ದಾರೆ. ಮಣಿಪಾಲ್ ವೈದ್ಯರು ಸೇರಿದಂತೆ ಬೇರೆ ಬೇರೆ ತಜ್ಞ ವೈದ್ಯರು ಚಿಕಿತ್ಸೆ ಕೊಡುತ್ತಿದ್ದಾರೆ. ಸೋನಿಯಾ ಗಾಂಧಿ, ರಾಹುಲ್, ಪ್ರಿಯಾಂಕ ಅವರು ಆಸ್ಕರ್​ ಅವರ ಕುಟುಂಬದ ಜೊತೆ ಮಾತನಾಡಿ, ಧೈರ್ಯ ಹೇಳಿದ್ದಾರೆ. ಪೇಜಾವರ ಸ್ವಾಮೀಜಿಗಳು ಕೂಡ  ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿಸಿದರು.


ಆಸ್ಕರ್ ಫರ್ನಾಂಡಿಸ್​ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿದ್ದಾಗ ನಮ್ಮ ತಂದೆ ಉಪಾಧ್ಯಕ್ಷರಾಗಿದ್ದರು. ನಮ್ಮ ತಂದೆಯವರ ಸ್ವಭಾವ ಮತ್ತು ಆಸ್ಕರ್ ಅವರ ಸ್ವಭಾವ ಒಂದೇ ಆಗಿತ್ತು. ಹೀಗಾಗಿ ನನ್ನ ಮೇಲೂ ಅವರಿಗೆ ವಿಶೇಷ ಪ್ರೀತಿ. ಇದೇ ಕಾರಣ ಅವರು ನನಗೆ ಈ ಸ್ಥಾನಕ್ಕೇರಲು ಸಹಾಯ ಮಾಡಿದ್ದರು. ಅವರ ಶೀಘ್ರವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ. ಅವರು ಜಂಟಲ್ ಮೆನ್, ಬಹಳ ಒಳ್ಳೆಯ ಮನುಷ್ಯ. ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದರು.


ಇದನ್ನು ಓದಿ: 2024ರವರೆಗೂ ಸೋನಿಯಾ ಗಾಂಧಿಯೇ ಕಾಂಗ್ರೆಸ್​ ಅಧ್ಯಕ್ಷೆ


ಭಾನುವಾರ ಯೋಗ ಮಾಡುತ್ತಿದ್ದ ವೇಳೆ ಆಸ್ಕರ್​ ಫರ್ನಾಂಡಿಸ್​ ಜಾರಿ ಬಿದ್ದಿದ್ದರು. ಈ ವೇಳೆ ಅವರಿಗೆ ಯಾವುದೇ ಗಾಯಗಳಾಗಿರಲಿಲ್ಲ. ಡಯಾಲಿಸಿಸ್​ ವೇಳೆ ಅವರ ರಕ್ತ ಹೆಪ್ಪುಗಟ್ಟಿರುವದು ಪತ್ತೆಯಾಗಿದೆ. ಅವರ ಮೆದುಳಿಗೆ ಪೆಟ್ಟು ಬಿದ್ದಿದ್ದು, ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದಾರೆ. ಸದ್ಯ ಐಸಿಯಿ ಅವಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.


ರಾಜ್ಯ ಸಭಾ ಸದಸ್ಯರಾಗಿರುವ ಆಸ್ಕರ್​ ಫರ್ನಾಂಡಿಸ್​ ಮನಮೋಹನ್​ ನೇತೃತ್ವದ ಸರ್ಕಾರದಲ್ಲಿ ಸಾರಿಗೆ, ರಸ್ತೆ ಮತ್ತು ಹೆದ್ದಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇದೇ ವೇಳೇ ಅವರು ಹೆಚ್ಚುವರಿಯಾಗಿ ಕಾರ್ಮಿಕ ಮತ್ತು ಉದ್ಯೋಗ ಸಚಿವರಾಗಿದ್ದರು.
ಉಡುಪಿ ಮೂಲಕ ಆಸ್ಕರ್​ ಫರ್ನಾಂಡಿಸ್ 1980ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದರು. 1983ರಲ್ಲಿ ಅವರು ಅಖಿಲ ಭಾರತ ಕಾಂಗ್ರೆಸ್​ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿದ್ದರು​. 1983 ರಿಂದ 1997ರವರೆಗೆ ಐದು ಬಾರಿ ಲೋಕಸಭಾ ಸಂಸದರಾಗಿ ಆಯ್ಕೆಯಾಗಿದ್ದರು. 1998ರಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಸದಸ್ಯರಾಗಿದ್ದರು.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು

top videos
    First published: