• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • 224 ಶಾಸಕರ ಬಗ್ಗೆ ತನಿಖೆಯಾಗಲಿ ಎಂಬ ಹೇಳಿಕೆ ನೀಡಿ ಇದೀಗ ವಿಷಾದ ವ್ಯಕ್ತಪಡಿಸಿದ ಸಚಿವ ಕೆ. ಸುಧಾಕರ್!

224 ಶಾಸಕರ ಬಗ್ಗೆ ತನಿಖೆಯಾಗಲಿ ಎಂಬ ಹೇಳಿಕೆ ನೀಡಿ ಇದೀಗ ವಿಷಾದ ವ್ಯಕ್ತಪಡಿಸಿದ ಸಚಿವ ಕೆ. ಸುಧಾಕರ್!

ಸಚಿವ ಡಾ.ಕೆ.ಸುಧಾಕರ್.

ಸಚಿವ ಡಾ.ಕೆ.ಸುಧಾಕರ್.

ಸುಧಾಕರ್ ಹೇಳಿಕೆಗೆ ಕಾಂಗ್ರೆಸ್​ ತೀಕ್ಷ್ಣವಾಗಿ ತಿರುಗೇಟು ನೀಡಿತ್ತು. ಸ್ಪೀಕರ್ ಅವರನ್ನೂ ಸೇರಿದಂತೆ ಸದನದ ಮಹಿಳಾ ಸದಸ್ಯರನ್ನೂ ಸೇರಿಸಿ ಎಲ್ಲಾ 224 ಸದಸ್ಯರ ಮೇಲೆ ವ್ಯಭಿಚಾರದ ಆರೋಪ ಹೊರಿಸಿದ ಸಚಿವ ಸುಧಾಕರ್ ಕ್ಷಮೆ ಕೇಳಬೇಕು. ಉಳಿದ 5 ಸಚಿವರು ಸೇರಿದಂತೆ ತಡೆಯಾಜ್ಞೆ ತಂದಿರುವ ಸುಧಾಕರ್ ಅವರೇ ಕಳಂಕಿತರು, ಮೊದಲು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿತ್ತು.

ಮುಂದೆ ಓದಿ ...
  • Share this:

ಬೆಂಗಳೂರು: ಸಿಡಿ ವಿಷಯವಾಗಿ ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಸಚಿವ ಡಾ.ಕೆ. ಸುಧಾಕರ್ ಅವರು, ರಾಜ್ಯದ ಎಲ್ಲ ಶಾಸಕರ ಮೇಲೂ ತನಿಖೆಯಾಗಲಿ. ಯಾರ್ಯಾರ ಸತ್ಯಹರಿಶ್ಚಂದ್ರರು, ಶ್ರೀರಾಮರು ಇದ್ದಾರೆ ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದ್ದರು. ಆದರೆ, ಈ ಹೇಳಿಕೆಗೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾದ ಬಳಿಕ ಎಚ್ಚೆತ್ತುಕೊಂಡ ಸಚಿವ ಸುಧಾಕರ್ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.


ಈ ಸಂಬಂಧ ಟ್ವೀಟ್ ಮಾಡಿರುವ ಸುಧಾಕರ್ ಅವರು, ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ.  ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನನಗೆ ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ.  ಹೀಗಾಗಿ ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ ಹದಿನೇಳು ಜನರ ವಿರುದ್ದ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವು ಉಂಟು ಮಾಡುವ ಉದ್ದೇಶ ನನಗಿಲ್ಲ, ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.





ಇಂದು ಅಧಿವೇಶನಕ್ಕೆ ಹೋಗುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ಯಾವ್ಯಾವ ಮುಖ್ಯಮಂತ್ರಿಗಳು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದರು ಎಲ್ಲವೂ ತನಿಖೆ ಆಗಲಿ. ಯಾರಿಗೆಲ್ಲಾ ಅನೈತಿಕ ಸಂಬಂಧ ಇದೆ ಎಂಬುದು ತಿಳಿಯಲಿ. ಎಲ್ಲಾ ಮಂತ್ರಿಗಳದ್ದು, ವಿರೋಧ ಪಕ್ಷಗಳವರದ್ದು ತನಿಖೆ ಅಗಲಿ. ಎಲ್ಲಾ 224 ಶಾಸಕರದ್ದೂ ತನಿಖೆ ಆಗಿ ಹೋಗಲಿ. ಯಾರು ಎಂಥವರು ಎಂಬ ಸತ್ಯ ಜನರಿಗೆ ಗೊತ್ತಾಗಲಿ.  ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕುಮಾರಣ್ಣ ಅವರೆಲ್ಲಾ ಸತ್ಯ ಹರಿಶ್ಚಂದ್ರರು. ರಮೇಶ್ ಕುಮಾರ್ ಕೂಡ ಸತ್ಯ ಹರಿಶ್ಚಂದ್ರರಿದ್ದಾರೆ. ಇವರೆಲ್ಲರೂ ಏಕಪತ್ನಿ ವ್ರತವನ್ನ ಬಹಳ ಮಾಡುತ್ತಿದ್ದಾರೆ. ಎಲ್ಲಾ 224 ಶಾಸಕರದ್ದು ತನಿಖೆ ಆಗಲಿ ಎಂಬ ನನ್ನ ಪ್ರಸ್ತಾಪವನ್ನು ಇವರು ಒಪ್ಪಿಕೊಳ್ಳಲಿ ಎಂದೂ ಸುಧಾಕರ್ ಚಾಲೆಂಜ್ ಮಾಡಿದ್ಧರು.


ಇದನ್ನು ಓದಿ: ಎಲ್ಲಾ 224 ಶಾಸಕರದ್ದೂ ತನಿಖೆಯಾಗಲಿ, ಯಾರಿಗೆಲ್ಲಾ ಅನೈತಿಕ ಸಂಬಂಧ ಇದೆ ಗೊತ್ತಾಗಲಿ: ಡಾ. ಸುಧಾಕರ್


ಸುಧಾಕರ್ ಹೇಳಿಕೆಗೆ ಕಾಂಗ್ರೆಸ್​ ತೀಕ್ಷ್ಣವಾಗಿ ತಿರುಗೇಟು ನೀಡಿತ್ತು. ಸ್ಪೀಕರ್ ಅವರನ್ನೂ ಸೇರಿದಂತೆ ಸದನದ ಮಹಿಳಾ ಸದಸ್ಯರನ್ನೂ ಸೇರಿಸಿ ಎಲ್ಲಾ 224 ಸದಸ್ಯರ ಮೇಲೆ ವ್ಯಭಿಚಾರದ ಆರೋಪ ಹೊರಿಸಿದ ಸಚಿವ ಸುಧಾಕರ್ ಕ್ಷಮೆ ಕೇಳಬೇಕು. ಉಳಿದ 5 ಸಚಿವರು ಸೇರಿದಂತೆ ತಡೆಯಾಜ್ಞೆ ತಂದಿರುವ ಸುಧಾಕರ್ ಅವರೇ ಕಳಂಕಿತರು, ಮೊದಲು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿತ್ತು.




ಅಷ್ಟೇ ಅಲ್ಲದೇ, ಸುಧಾಕರ್ ಹೇಳಿಕೆ ಖಂಡಿಸಿ, ಸ್ವತಃ ಬಿಜೆಪಿ ಮಹಿಳಾ ಸದಸ್ಯರು ಸಹ ಆಕ್ಷೇಪ ವ್ಯಕ್ತಪಡಿಸಿದ್ದರು.

First published: