ಬೆಂಗಳೂರು (ಆಗಸ್ಟ್ 28); ಜಿಎಸ್ಟಿ ಪರಿಹಾರವನ್ನು ನೀಡುವುದಿಲ್ಲ ಎಂಬ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ನಿಲುವು ರಾಜ್ಯಕ್ಕೆ ಮಾಡಿರುವ ಘೋರ ಅನ್ಯಾಯ. ಈ ಅನ್ಯಾಯವನ್ನು ಪ್ರತಿಭಟಿಸದೆ ಬಾಯಿ ಮುಚ್ಚಿ ಒಪ್ಪಿಕೊಂಡ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ. ತೆರಿಗೆ ಹಣ ಇಲ್ಲದೆ ಈಗ ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ.
ಗುರುವಾರ ನಡೆದ ಹಣಕಾಸು ಜಿಎಸ್ಟಿ ಸಭೆಯಲ್ಲಿ ಮಾತನಾಡಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ "ಖಜಾನೆಯಲ್ಲಿ ಹಣವಿಲ್ಲ. ಹೀಗಾಗಿ ರಾಜ್ಯಗಳಿಗೆ ಹೆಚ್ಚುವರಿ ಜಿಎಸ್ಟಿ ತೆರಿಗೆ ಹಣವನ್ನು ನೀಡುವುದು ಸಾಧ್ಯವಿಲ್ಲ" ಎಂದು ಸ್ಪಷ್ಟಪಡಿಸಿದ್ದರು. ಇದರಿಂದ ಎಲ್ಲಾ ರಾಜ್ಯಗಳಿಗೂ ಸಾಕಷ್ಟು ನಷ್ಟವಾಗಿದೆ. ಈ ಕುರಿತು ಸರಣಿ ಟ್ವೀಟ್ ಮಾಡುವ ಮೂಲಕ ಖಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ,
ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದು @BJP4India ಹೇಳಿತ್ತು.
ಇದನ್ನು ನಂಬಿದ ಜನತೆ 25 ಸಂಸದರನ್ನು ಆರಿಸಿಕಳಿಸಿತ್ತು. ಇವರೆಲ್ಲ ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ.#GSTCouncil
— Siddaramaiah (@siddaramaiah) August 28, 2020
ಜಿಎಸ್ ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದ ಗೃಹಸಚಿವ @BSBommai ರಾಜ್ಯದಲ್ಲಿ ಜಿಎಸ್ ಟಿ ಸಂಗ್ರಹ ಶೇಕಡಾ 71ರಷ್ಟಾಗಿದೆ ಎಂದು ಹೇಳಿದ್ದಾರೆ.
ಹೀಗಿದ್ದರೂ ನಮ್ಮ ತೆರಿಗೆ ಹಣವನ್ನು ನಮಗೆ ನೀಡಲು ನಿರಾಕರಿಸುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ಮೋಸ ಅಲ್ಲವೇ?
6/6 pic.twitter.com/kS1RLOuR3o
— Siddaramaiah (@siddaramaiah) August 28, 2020
ಕೇಂದ್ರದಲ್ಲಿ @BJP4India ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ಬರಬೇಕಾಗಿರುವ ಅನುದಾನಗಳು ಕಡಿತಗೊಳ್ಳುತ್ತಲೇ ಬಂದಿದೆ.
14ನೇ ಹಣಕಾಸು ಆಯೋಗದಡಿ ಕೇಂದ್ರ ತೆರಿಗೆಯಲ್ಲಿ ಶೇಕಡಾ 4.7ರಷ್ಟು ಪಾಲು ಕರ್ನಾಟಕಕ್ಕೆ ಸಿಗುತ್ತಿದ್ದರೆ, 15ನೇ ಹಣಕಾಸು ಆಯೋಗ ಅದನ್ನು ಶೇಕಡಾ 3.6ಕ್ಕೆ ಇಳಿಸಿದೆ.
ಈಗ ಇನ್ನೊಂದು ಅನ್ಯಾಯ.
5/6 pic.twitter.com/FnwpdiqEmD
— Siddaramaiah (@siddaramaiah) August 28, 2020
ನಾಲ್ಕು ತಿಂಗಳ ಒಟ್ಟು ಜಿಎಸ್ಟಿ ಪರಿಹಾರ ರೂ.13,764 ಕೋಟಿ ರಾಜ್ಯಕ್ಕೆ ಬರಬೇಕಾಗಿದೆ.
ಇದು ಕೇಂದ್ರ ಮತ್ತು ರಾಜ್ಯಗಳು ಮಾಡಿಕೊಂಡ ಒಡಂಬಡಿಕೆ.
ಈಗ ನಮ್ಮ ಖಜಾನೆಯಲ್ಲಿ ದುಡ್ಡಿಲ್ಲ, ನೀವು ಬೇಕಿದ್ದರೆ ಆರ್ ಬಿಐ ನಲ್ಲಿ ಸಾಲ ಮಾಡಿ ತೀರಿಸಿಕೊಳ್ಳಿ ಎಂದರೆ ಇದು ಯಾವೂರ ನ್ಯಾಯ @narendramodi ?
4/6#GSTCouncil
— Siddaramaiah (@siddaramaiah) August 28, 2020
ಸಂವಿಧಾನದ 101ನೇ ತಿದ್ದುಪಡಿ ಮೂಲಕ ಜಾರಿಗೆ ಬಂದಿರುವ ಜಿಎಸ್ಟಿ ಕಾಯ್ದೆಯ ಸೆಕ್ಷನ್ 18ರ ಪ್ರಕಾರ ಜಿಎಸ್ ಟಿ ಯಿಂದ ಆಗುವ ನಷ್ಟಕ್ಕೆ ಐದು ವರ್ಷಗಳ ಕಾಲ ಪರಿಹಾರ ನೀಡಬೇಕಾಗಿರುವುದು ಕೇಂದ್ರ ಸಂವಿಧಾನಾತ್ಮಕ ಕರ್ತವ್ಯ.
ಈ ಪರಿಹಾರದ ನಿರಾಕರಣೆಯೆಂದರೆ ರಾಜ್ಯದ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆ.
3/6#GSTCouncil
— Siddaramaiah (@siddaramaiah) August 28, 2020
ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ ಎಂದು ಒಂದು ಕಡೆ @CMofKarnataka ಕಣ್ಣೀರು ಹಾಕುತ್ತಿದ್ದಾರೆ. ಇನ್ನೊಂದೆಡೆ ನಮಗೆ ನೀಡಬೇಕಾಗಿರುವ ನ್ಯಾಯಬದ್ಧ ಜಿಎಸ್ ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು @PMOIndia ಹೇಳುತ್ತಿದೆ.
ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?
2/6#GSTCouncil
— Siddaramaiah (@siddaramaiah) August 28, 2020
ಜಿಎಸ್ ಟಿ ಪರಿಹಾರವನ್ನು ನೀಡುವುದಿಲ್ಲ ಎಂಬ ಕೇಂದ್ರ ಸಚಿವೆ @nsitharaman ನಿಲುವು ರಾಜ್ಯಕ್ಕೆ ಮಾಡಿರುವ ಘೋರ ಅನ್ಯಾಯ.
ಈ ಅನ್ಯಾಯವನ್ನು ಪ್ರತಿಭಟಿಸದೆ ಬಾಯಿ ಮುಚ್ಚಿಕೊಂಡು ಒಪ್ಪಿಕೊಂಡ @BJP4Karnataka ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ.
1/6#GSTCouncil
— Siddaramaiah (@siddaramaiah) August 28, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ