1.Karnataka Rains: ಮನೆಯಿಂದ ಹೊರ ಹೋಗುವ ಮುನ್ನಎಚ್ಚರ; ಎಲ್ಲೆಲ್ಲಿ ರೆಡ್ ಅಲರ್ಟ್ ಇದೆ ಗೊತ್ತಾ?
ಬಣ ಜಗಳ, ಚುನಾವಣೆ (Election) ಮೊದಲೇ ಸಿಎಂ ಸ್ಥಾನಕ್ಕೆ ಕಿತ್ತಾಡಿ ಸುದ್ದಿಯಾಗುತ್ತಿದ್ದ ಕಾಂಗ್ರೆಸ್ ನಾಯಕರು (Congress Leaders) ಈಗ ಒಗ್ಗಟ್ಟು ಪ್ರದರ್ಶನ ಮೂಲಕ ಸದ್ದಿ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Opposition Leader Siddaramaiah) ಅದ್ಧೂರಿ ಹುಟ್ಟಹಬ್ಬದ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬೂಸ್ಟರ್ ಡೋಸ್ ನೀಡಿದಂತೆ ಆಗಿದೆ. ಇದು ಬಿಜೆಪಿ (BJP) ಹಾಗೂ ಜೆಡಿಎಸ್ (JDSS) ಪಕ್ಷಕ್ಕೆ ತಳಮಳವನ್ನು ಉಂಟು ಮಾಡಿದೆ. ಹೀಗಾಗಿ ಉತ್ತರ ಕರ್ನಾಟಕದ (North Karnataka) ಪ್ರಭಾವಿ ಲಿಂಗಾಯತ ನಾಯಕನ (Lingayat) ಹುಟ್ಟುಹಬ್ಬದ ಅದ್ದೂರಿ ಆಚರಣೆಗೆ ತೆರೆಮರೆಯಲ್ಲಿ ಪ್ಲ್ಯಾನ್ ರೂಪಿಸಲಾಗುತ್ತಿದೆ. ಎಲ್ಲಾ ಅಂದುಕೊಂಡಂತೆ ಆದ್ರೆ ಅಕ್ಟೋಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ(Belagavi) ಬೃಹತ್ ಸಮಾವೇಶ ನಡೆಯಲಿದೆ.
ಸಾರ್ವಜನಿಕ ಗಣೇಶೋತ್ಸವಕ್ಕೆ (Ganeshotsava) ಸರ್ಕಾರ (Government) ಹಲವು ನಿರ್ಬಂಧ ಹಾಕುತ್ತಿದೆ. ಇದರಿಂದ ಎಷ್ಟೊಂದು ಕಿರಿಕಿರಿ ಆಗುತ್ತಿದೆ. ನಮಗೆ ಸ್ವಾತಂತ್ರ್ಯವೇ ಇಲ್ಲವಾಗಿದೆ. ಸರ್ಕಾರದ ಈ ನೀತಿಯನ್ನು ನಾನು ವಿರೋಧಿಸುತ್ತೆನೆ. ಇದು ಬಿಜೆಪಿ ಸರ್ಕಾರದಲ್ಲೇ (BJP Government) ಹೀಗಾಗುತ್ತಿದೆ ಎಂದರೆ ಹೇಗೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.
4.Gold Price: ವರಮಹಾಲಕ್ಷ್ಮೀ ಹಬ್ಬದಂದೇ ಆಭರಣ ಪ್ರಿಯರಿಗೆ ಶಾಕ್! ಇಂದು ಚಿನ್ನ, ಬೆಳ್ಳಿ ಬೆಲೆ ಏರಿಕೆ
ಇಂದು ಭಾರತದ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,750 ಆಗಿದೆ. ಈಗಾಗಲೇ ಭಾರತವು ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತೆ ಏರಿಕೆಯಾಗುವ ಸಾಧ್ಯತೆಯನ್ನೂ ಅಲ್ಲಗಳೆಯಲು ಆಗಲ್ಲ. ಮಾರುಕಟ್ಟೆಯಲ್ಲಿ ಇಂದು ಒಂದು ಗ್ರಾಂ (1GM) 22 ಕ್ಯಾರೆಟ್ ಆಭರಣದ ಚಿನ್ನದ ಬೆಲೆ - ರೂ. 4,750, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,182 ಆಗಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,550 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,250, ರೂ. 47,500, ರೂ. 47,500 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,650 ರೂ. ಆಗಿದೆ.
5.Yadagiri Accident: ಯಾದಗಿರಿಯಲ್ಲಿ ಭೀಕರ ಅಪಘಾತ; ಕಂದಮ್ಮ ಸೇರಿ ಒಂದೇ ಕುಟುಂಬದ ಆರು ಜನ ಸಾವು
ಯಾದಗಿರಿ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ. ಕಾರ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಮೂರು ಜನ ಹಾಗೂ ಆಸ್ಪತ್ರೆಯಲ್ಲಿ ಮೂರು ಜನರ ಪ್ರಾಣಪಕ್ಷಿ ಹೋಗಿದೆ. ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ನಿನ್ನೆ ತಡರಾತ್ರಿ ಅಪಘಾತ ನಡೆದಿದೆ. ಒಂದು ವರ್ಷದ ಹೆಣ್ಣು ಮಗು ಸೇರಿ 6 ಜನ ಮೃತರಾಗಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ