ಚಿಕ್ಕಮಗಳೂರು (ಫೆ.23): ಜಿಲ್ಲೆಯ ಕಡೂರಿನಲ್ಲಿ ನಡೆದಿದ್ದ ಕವಿತಾ ಕೊಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿತ್ತು. ಅಕ್ರಮ ಸಂಬಂಧ ಉಳಿಸಿಕೊಳ್ಳಲು ದಂತ ವೈದ್ಯ ಪತ್ನಿಯ ಪ್ರಾಣವನ್ನೇ ತೆಗೆದು, ನಂತರ ಭಯಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ. ಈಗ ಪ್ರಿಯತಮನ ಸಾವಿನ ಸುದ್ದಿ ಕೇಳಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆ ಕೂಡ ನೇಣಿಗೆ ಶರಣಾಗಿದ್ದಾಳೆ.
ಫೆ.17ರಂದು ದಂತ ವೈದ್ಯ ಡಾ. ರೇವಂತ್ ಪತ್ನಿ ಕವಿತಾ ಬರ್ಬರವಾಗಿ ಹತ್ಯೆಯಾಗಿದ್ದಳು. ಈ ಕೊಲೆಯನ್ನು ಪತಿಯೇ ಮಾಡಿದ್ದ! ಕೊಲೆ ಮಾಡಿದ್ದು ಯಾರು ಎನ್ನುವುದು ಗೊತ್ತಾಗಬಾರದು ಎನ್ನುವ ಕಾರಣಕ್ಕೆ ‘ಚಿನ್ನಾಭರಣ ದೋಚಿ, ಪತ್ನಿಯನ್ನು ಕೊಲೆಗೈದಿದ್ದಾರೆ’ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದ. ಅಷ್ಟೇ ಅಲ್ಲ ಮೊಸಳೆ ಕಣ್ಣೀರು ಹಾಕಿದ್ದ. ಈ ಮೂಲಕ ಪೊಲೀಸರ ದಿಕ್ಕುತಪ್ಪಿಸಲು ಪ್ರಯತ್ನ ನಡೆಸಿದ್ದ. ಪೊಲೀಸರಿಗೆ ಸತ್ಯ ಗೊತ್ತಾಗುತ್ತಿದ್ದಂತೆ, ರೈಲಿಗೆ ತಲೆ ನೀಡಿ ರೇವಂತ್ ಆತ್ಮಹತ್ಯೆ ಮಾಡಿಕೊಂಡಿದ್ದ.
ಹರ್ಷಿತಾ ಎಂಬಾಕೆ ಜೊತೆ ರೇವಂತ್ ಅಕ್ರಮ ಸಂಬಂಧ ಹೊಂದಿದ್ದ. ಈ ಸಂಬಂಧ ಉಳಿಸಿಕೊಳ್ಳಲು ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈಗ ರೇವಂತ್ ಸಾವಿನ ಸುದ್ದಿ ಕೇಳಿ ಹರ್ಷಿತಾ ಕೂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹರ್ಷಿತಾ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಕಡೂರು ದಂತ ವೈದ್ಯನ ಹೆಂಡತಿ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್; ಇಲ್ಲಿ ಹಂತಕ ಯಾರು ಗೊತ್ತಾ?
ಕೊಲೆಗೆ ಕಾರಣವೇನು?:
ರೇವಂತ್ ಬೇರೆಯವರ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಇದನ್ನು ಉಳಿಸಿಕೊಳ್ಳಲು ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪತಿಯ ಅಕ್ರಮ ಸಂಬಂಧದ ಬಗ್ಗೆ ಕವಿತಾ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಇಬ್ಬರ ನಡುವೆ ಅನೇಕ ಬಾರಿ ವಾಗ್ವಾದ ಕೂಡ ಏರ್ಪಟ್ಟಿತ್ತು. ಪತ್ನಿ ಆಕ್ಷೇಪ ಹಿನ್ನೆಲೆಯಲ್ಲಿ ಕವಿತಾರನ್ನು ಕತ್ತು ಸೀಳಿ ಈತ ಕೊಲೆ ಮಾಡಿದ್ದಾನೆ. ಈಗ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ