ಬೆಂಗಳೂರು: ಬೈಕ್ ಸವಾರರಿಗೆ ಹೆಲ್ಮೆಟ್ ಖಡ್ಡಾಯಗೊಳಿಸಲಾಗಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಹಿಂಬದಿ ಸವಾರರಿಗೆ ಹೆಲ್ಮೆಟ್ ಅನ್ನು ಕಡ್ಡಾಯಗೊಳಿಸಿತ್ತು. ಹೆಲ್ಮೆಟ್ ಧರಿಸದವರಿಗೆ ಭಾರೀ ಪ್ರಮಾಣದ ದಂಡವನ್ನೂ ಸಹ ವಿಧಿಸಲಾಗುತ್ತಿದೆ. ಆದರೂ ರಾಜ್ಯದಲ್ಲಿ ಅನೇಕ ಬೈಕ್ ಸವಾರರು ವಾಹನ ಚಲಾವಣೆ ಸಂದರ್ಭದಲ್ಲಿ ಹೆಲ್ಮೆಟ್ ಧರಿಸುತ್ತಿಲ್ಲ. ಹೀಗಾಗಿ ಇಂತಹ ರಸ್ತೆ ಕಾನೂನು ಉಲ್ಲಂಘನೆಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸಂಚಾರಿ ಇಲಾಖೆ ಇನ್ನೂ ರಸ್ತೆಯಲ್ಲಿ ವಾಹನ ಚಲಾಯಿಸುವಾದ ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಇದ್ದಲ್ಲಿ ಅವರ ಡಿಎಲ್ (ವಾಹನ ಚಾಲನಾ ಪರವಾನಗಿ) ಮೂರು ತಿಂಗಳ ಕಾಲ ಅಮಾನತುಗಳಿಸುವ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.
ರಾಜ್ಯದಲ್ಲಿ ಹೆಲ್ಮೆಟ್ ರಹಿತ ವಾಹನ ಚಲಾವಣೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಅಪಾರ ಸಂಖ್ಯೆಯ ಪ್ರಕರಣಗಳು ದಾಖಲಾಗುತ್ತಿವೆ. ಇದೇ ಕಾರಣಕ್ಕೆ ಸಂಚಾರಿ ಇಲಾಖೆ ಇಂತಹ ಮಹತ್ವದ ನಿರ್ಧಾರಕ್ಕೆ ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೋಟಾರು ವಾಹನ ಕಾಯ್ದೆ 2019ರ ಅನ್ವಯ ಹೆಲ್ಮೆಟ್ ರಹಿತ ವಾಹನ ಚಲಾವಣೆಗೆ 1000 ರೂ.ದಂಡ ಮತ್ತು ಮೂರು ತಿಂಗಳುಗಳ ಕಾಲ ಅವರ ಡಿಎಲ್ ಅನ್ನು ಅಮಾನತುಗೊಳಿಸಬಹುದು. ಆದರೆ, ರಾಜ್ಯದಲ್ಲಿ ದಂಡವನ್ನು 500ಕ್ಕೆ ಇಳಿಸಲಾಗಿತ್ತಾದರೂ ಡಿಎಲ್ ಅಮಾನತುಗೊಳಿಸಲು ಇಲಾಖೆ ಒಪ್ಪಿಗೆ ಸೂಚಿಸಿರಲಿಲ್ಲ. ಆದರೆ, ಇದೀಗ ಹೆಲ್ಮೆಟ್ ರಹಿತ ವಾಹನ ಚಲಾವಣೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಲು ಇಲಾಖೆ ಮುಂದಾಗಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ : ನೀವು ಆದಾಯ ತೆರಿಗೆ ಸಲ್ಲಿಸಬೇಕೆ? ಅಥವಾ ಬೇಡವೇ?; ನಿಮ್ಮ ಎಲ್ಲಾ ಗೊಂದಲಗಳಿಗೂ ಇಲ್ಲಿದೆ ಉತ್ತರ
ಈ ವರ್ಷ ಸೆಪ್ಟೆಂಬರ್ ಅಂತ್ಯಕ್ಕೆ ಬೆಂಗಳೂರಿನಲ್ಲಿ ಮಾತ್ರ ಬರೋಬ್ಬರಿ 20.7 ಲಕ್ಷ ಹೆಲ್ಮೆಟ್ ರಹಿತ ವಾಹನ ಚಲಾವಣೆ ಪ್ರಕರಣಗಳು ದಾಖಲಾಗಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ