ಬೆಂಗಳೂರು (ಜನವರಿ 31); "ಉತ್ತರ ಕರ್ನಾಟಕದ ಹಲವು ಭಾಗಗಳಿಗೆ ಕುಡಿಯುವ ನೀರನ್ನು ಪೂರೈಸುವ ಕರ್ನಾಟಕದ ಮಹತ್ವಾಕಾಂಕ್ಷೆಯ ಯೋಜನೆಯಾದ ಮಹದಾಯಿ ಯೋಜನೆಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಗೋವಾ ಮುಖ್ಯಮಂತ್ರಿಯಾದ ಪ್ರಮೋದ್ ಸಾವಂತ್ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಅಂತಹ ಹೇಳಿಕೆ ನೀಡಿದ್ದಾರೆ. ಈ ಕುರಿತು ಕನ್ನಡಿಗರು ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಶ್ವಾಸನೆ ನೀಡಿದ್ದಾರೆ. ನಿನ್ನೆ ಗೋವಾ ಸದನದಲ್ಲಿ ಮಾತನಾಡಿದ್ದ ಅಲ್ಲಿನ ಸಿಎಂ ಪ್ರಮೋದ್ ಸಾವಂತ್, "ಮಹದಾಯಿ ಗೋವಾದ ಜೀವ ನದಿ. ಆದರೆ, ಕರ್ನಾಟಕದ ಮಹದಾಯಿ ಯೋಜನೆಯಿಂದ ಇಲ್ಲಿನ ಪ್ರಕೃತಿ ಹಾನಿಗೊಳಗಾಗಲಿದೆ. ಹೀಗಾಗಿ ಮಹದಾಯಿ ವಿಚಾರದಲ್ಲಿ ರಾಜೀ ಮಾಡಿಕೊಳ್ಳುವುದಿಲ್ಲ, ಪಕ್ಷಭೇದಗಳಿಗೆ ಆಸ್ಪದ ಇಲ್ಲ" ಎಂದು ಕರ್ನಾಟಕದ ವಿರುದ್ಧ ಮಾತನಾಡಿದ್ದರು.
ಪ್ರಮೋದ್ ಸಾವಂತ್ ಅವರ ಈ ಹೇಳಿಕೆ ಸಾಮಾನ್ಯವಾಗಿ ಉತ್ತರ ಕರ್ನಾಟಕದ ಜನರ ಆತಂಕಕ್ಕೆ ಕಾರಣವಾಗಿತ್ತು. ಅಲ್ಲದೆ, ಗೋವಾ ಸಿಎಂ ಮಾತಿಗೆ ಮುಖ್ಯಮಂತ್ರಿ ಯಡಿಯೂರಪ್ಪ ತಕ್ಕ ಉತ್ತರ ನೀಡಬೇಕು ಎಂಬ ಒತ್ತಾಯಗಳು ಕೇಳಿ ಬಂದಿತ್ತು. ಹೀಗಾಗಿ ಇಂದು ನೆಲಮಂಗಲದಲ್ಲಿ ಈ ಕುರಿತು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿರುವ ಯಡಿಯೂರಪ್ಪ,
"ಕರ್ನಾಟಕದ ಮಹತ್ವಾಕಾಂಕ್ಷೆಯ ಮಹದಾಯಿ ವಿಚಾರದಲ್ಲಿ ಯಾವುದೇ ಸಮಸ್ಯೆ ಆಗಲ್ಲ. ಗೋವಾ ಸಿಎಂ ಅವರ ರಾಜಕೀಯ ಸ್ವಾರ್ಥಕ್ಕಾಗಿ ಇಂತಹ ಅಸಂಬದ್ಧ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯದಲ್ಲೂ ನಮಗೆ ಅನುಕೂಲಕರವಾದ ಸ್ಥಿತಿಯೇ ಇದೆ. ಮಹದಾಯಿ ನೀರು ನಮಗೆ ಸಿಗಲೇಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಶೀಘ್ರದಲ್ಲೇ ಮಹದಾಯಿ ಸಮಸ್ಯೆಯನ್ನು ನಾವು ಬಗೆಹರಿಸುತ್ತೇವೆ. ಕೇಂದ್ರದ ನಾಯಕರಿಗೂ ಮಹದಾಯಿ ವಿಚಾರ ಮನವರಿಕೆ ಮಾಡಿಕೊಡ್ತೇವೆ" ಎಂದು ಆಶ್ವಾಸನೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ನಾಳೆಯಿಂದ ಆರಂಭವಾಗಲಿರುವ ರಾಜ್ಯ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಸದನದಲ್ಲಿ ಬೊಟ್ಟು ಮಾಡಿ ತೋರಿಸುವುದಾಗಿ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆಗೂ ಉತ್ತರ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ,
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ