ದಾವಣಗೆರೆ: ಚುನಾವಣೆ ಪ್ರಚಾರಕ್ಕೆ (Election Campaign) ಬಂದಿದ್ದ ಶಾಸಕ ಎಂ.ಪಿ.ರೇಣುಕಾಚಾರ್ಯ (MLA MP Renukacharya) ಅವರಿಗೆ ಗ್ರಾಮಸ್ಥರು ಕ್ಲಾಸ್ ತೆಗೆದುಕೊಂಡಿರುವ ಘಟನೆ ನ್ಯಾಮತಿ ತಾಲೂಕಿನ ಕಂಕನಹಳ್ಳಿ ತಾಂಡಾದಲ್ಲಿ (Kankanagalli Tanda) ನಡೆದಿದೆ. ಚುನಾವಣೆ (Assembly Election) ಹಿನ್ನೆಲೆ ಶಾಸಕ ರೇಣುಕಾಚಾರ್ಯ ತಮ್ಮ ಬೆಂಬಲಿಗರ ಜೊತೆಯಲ್ಲಿ ಕಂಕನಹಳ್ಳಿ ತಾಂಡಾಕ್ಕೆ ತೆರಳುತ್ತಿದ್ರು. ಈ ವೇಳೆ ಗ್ರಾಮ ಪ್ರವೇಶಕ್ಕೆ ಬಿಡದ ಗ್ರಾಮಸ್ಥರು ಕ್ಲಾಸ್ ತೆಗೆದುಕೊಂಡಿದ್ದಾರೆ. ತಾಂಡಾದಲ್ಲಿ ಪ್ರಚಾರಕ್ಕೆ ಬಿಡದೇ ಪ್ರವೇಶದ್ವಾರದಿಂದ ಹೊರಗೆ ಕಳುಹಿಸಿದ್ದಾರೆ.
ಮೀಸಲಾತಿ ಕಿತ್ತುಕೊಂಡಿದ್ದೀರಿ
ಗ್ರಾಮದಲ್ಲಿ ಅಭಿವೃದ್ದಿ ಕೆಲಸ ಮಾಡಿಲ್ಲ. ಎಸ್ಸಿ ಜಾತಿ ಎಂದು ನಿಮ್ಮ ಕುಟುಂಬ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಮೋಸ ಮಾಡಿದ್ದೀರಿ. ಒಳ ಮೀಸಲಾತಿ ತಂದು ಲಂಬಾಣಿ ಸಮುದಾಯದ ಮೀಸಲಾತಿ ಕಿತ್ತುಕೊಂಡಿದ್ದೀರಿ ಎಂದು ಯುವಕನೋರ್ವ ಆಕ್ರೋಶ ಹೊರ ಹಾಕಿದ್ದಾನೆ.
ನಮ್ಮ ಊರಿಗೆ ಬರಬೇಡಿ
ಕೆಲಸವನ್ನೆ ಮಾಡದೇ ಬರೀ ಫೋಟೊ, ವಿಡಿಯೋ ಪೋಸ್ ಕೊಡುತ್ತೀರಿ. ನೀವು ನಮ್ಮ ಊರಿಗೆ ಬರಬೇಡಿ ಎಂದು ರೇಣುಕಾಚಾರ್ಯ ಅವರ ಮುಂದೆಯೇ ಆಕ್ರೋಶ ಹೊರ ಹಾಕಿದ್ದಾರೆ. ಕೊನೆಗೆ ಶಾಸಕ ರೇಣುಕಾಚಾರ್ಯ ತಾಂಡಾದಲ್ಲಿ ಪ್ರಚಾರ ಮಾಡದೇ ಹಿಂದಿರುಗಿದ್ದಾರೆ.
ಬಿಜೆಪಿ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ
ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಬಿಜೆಪಿ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ ನಡೆದಿದೆ.
ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಬೆಂಬಲಿಗರಿಂದ ಕಲ್ಲು ತೂರಾಟ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ