• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Mysuru: ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಿದ್ದೀರಾ? ವಾಟರ್‌ ಬಾಟಲ್‌, ವ್ಯಾನಿಟಿ ಬ್ಯಾಗ್ ತರಬೇಡಿ; ಬರೋ ಮುನ್ನ ಮೊಬೈಲ್ ಸ್ವಿಚ್ಛ್​ ಆಫ್ ಮಾಡಿ!

Mysuru: ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಿದ್ದೀರಾ? ವಾಟರ್‌ ಬಾಟಲ್‌, ವ್ಯಾನಿಟಿ ಬ್ಯಾಗ್ ತರಬೇಡಿ; ಬರೋ ಮುನ್ನ ಮೊಬೈಲ್ ಸ್ವಿಚ್ಛ್​ ಆಫ್ ಮಾಡಿ!

ವಿಶ್ವವಿಖ್ಯಾತ ಮೈಸೂರು ಅರಮನೆ (ಚಿತ್ರ ಕೃಪೆ: Internet)

ವಿಶ್ವವಿಖ್ಯಾತ ಮೈಸೂರು ಅರಮನೆ (ಚಿತ್ರ ಕೃಪೆ: Internet)

ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾರ್ವಜನಿಕರಿಗೆ ಮೈಸೂರು ನಗರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. 

  • Share this:

ಮೈಸೂರು (ಜೂ 19): ಸಾಂಸ್ಕೃತಿಕ ನಗರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಗಮಿಸುತ್ತಿದ್ದಾರೆ. ವಿಶ್ವ ಯೋಗದಿನದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಮೈಸೂರಿಗೆ ಮೋದಿ ಅಗಮನ ಹಿನ್ನೆಲೆ ಮೈಸೂರಿನಲ್ಲಿ ಭಾರೀ ಬಿಗಿ ಭದ್ರತೆ ಮಾಡಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ (Maharaja College) ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾರ್ವಜನಿಕರಿಗೆ ಮೈಸೂರು ನಗರ (Mysuru) ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.


ಸಾರ್ವಜನಿಕರಿಗೆ ಮಾರ್ಗಸೂಚಿ


* ಸಾರ್ವಜನಿಕರಿಗೆ ನಿಗಧಿಪಡಿಸಲಾಗಿರುವ ಆಸನದ ವ್ಯವಸ್ಥೆಯಲ್ಲಿ ಬಂದು ಆಸೀನರಾಗಬೇಕು. ಸಾರ್ವಜನಿಕರು ಆಗಮಿಸುವಾಗ ನಿಗದಿಪಡಿಸಿದ ಪ್ರವೇಶ ದ್ವಾರಗಳಿಂದಲೇ ಆಗಮಿಸಬೇಕು, ಬರುವ ಮುನ್ನ ಸಾರ್ವಜನಿಕರು ಪ್ರವೇಶ ದ್ವಾರದಲ್ಲಿ ಭದ್ರತಾ ಸಿಬ್ಬಂದಿಗಳ ತಪಾಸಣೆಗೆ ಸಹಕರಿಸಬೇಕ


* ಲೋಹ ಶೋಧಕ ಯಂತ್ರದ ಮೂಲಕ ತಪಾಸಣೆಗೆ ಒಳಪಟ್ಟು, ನಂತರ ಕಾರ್ಯಕ್ರಮದ ಸ್ಥಳಕ್ಕೆ ನಿಗದಿ ಪಡಿಸಿದ ಸ್ಥಳಕ್ಕೆ ತೆರಳುವುದು.


  1. *ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರು ತಮ್ಮೊಂದಿಗೆ ನೀರಿನ ಬಾಟಲ್, ಗಾಜಿನ ಬಾಟಲ್ ಬ್ಯಾಗ್, ವ್ಯಾನಿಟಿಬ್ಯಾಗ್, ಹರಿತವಾದ ವಸ್ತುಗಳು, ಯಾವುದೇ ರೀತಿಯ ಆಯುಧಗಳು, ಲೋಹದ ವಸ್ತುಗಳು ಹಾಗೂ ಇತರೆ ಯಾವುದೇ ರೀತಿಯ ವಸ್ತುಗಳನ್ನು ಹೊಂದಿರಬಾರದು.

  2. *ಯಾವುದೇ ರೀತಿಯ ಕರಪತ್ರ, ಬ್ಯಾನರ್, ಕಪ್ಪು ಬಟ್ಟೆ/ಪ್ಲಾಗ್ ಕಾರ್ಡ್‌ಗಳಿಗೆ ಅನುಮತಿ ಇರುವುದಿಲ್ಲ.

  3. *ಸಾರ್ವಜನಿಕರು ಮೊಬೈಲ್‌ಗೆ ಮಾತ್ರ ಅವಕಾಶವಿದ್ದು ಉಳಿದ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಹೊಂದಲು ಅವಕಾಶ ಇರುವುದಿಲ್ಲ.

  4. *ಕ್ಯಾಮರಾ, ವೀಡಿಯೋ ಕ್ಯಾಮರಾ, ಪವರ್ ಬ್ಯಾಂಕ್‌, ಇಯರ್‌ ಫೋನ್, ಹ್ಯಾಂಡ್ಸ್ ಫ್ರೀ ಇತ್ಯಾದಿಗಳಿ ಅನುಮತಿ ಇಲ್ಲ

  5. *ಮೊಬೈಲ್​ ಫೋನ್​ ತರಲು ಅನುಮತಿ ಇದೆ ಆದ್ರೆ ಒಳಗೆ ಬರುವ ಮುನ್ನ ಫೋನ್​ಗಳನ್ನು ಸ್ವಿಚ್ಛ್​ ಆಫ್​ ಮಾಡಬೇಕು

  6. *ಬೆಂಕಿ ಉತ್ಪತ್ತಿ ಮಾಡುವ ಬೆಂಕಿ ಪೊಟ್ಟಣ, ಲೈಟರ್, ಪಟಾಕಿ ಹಾಗೂ ಇತ್ಯಾದಿ ವಸ್ತುಗಳನ್ನು ತೆಗೆದುಕೊಂಡು ಬರಬಾರದು.

  7. *ಬೀಡಿ, ಸಿಗರೇಟ್, ಗುಟ್ಕಾ ಇತ್ಯಾದಿ ತಂಬಾಕು ಪದಾರ್ಥಗಳನ್ನು ಕಡ್ಡಾಯವಾಗಿ ನಿಷೇದಿಸಿದೆ.

  8. *ಕರ್ಕಶ ಶಬ್ಧವನ್ನು ಮಾಡುವ ಸೀಟಿ, ತಮಟೆ, ನಗಾರಿ ಇತ್ಯಾದಿ ವಸ್ತುಗಳನ್ನು ನಿಷೇಧಿಸಿದೆ.

  9. *ಸಾರ್ವಜನಿಕರು ತಮಗೆ ಮೀಸಲಿರುವ ಆಸನಗಳಲ್ಲಿಯೇ ಕುಳಿತುಕೊಳ್ಳಬೇಕು


ಸಾರ್ವಜನಿಕರು ಒಮ್ಮೆ ಕಾರ್ಯಕ್ರಮದಲ್ಲಿ ಆಸೀನರಾದ ನಂತರ ಕಾರ್ಯಕ್ರಮ ಮುಗಿಯುವ ವರೆಗೆ ಒಂದು ಸೆಕ್ಟರ್ ನಿಂದ ಇನ್ನೊಂದು ಸೆಕ್ಟರ್‌ಗೆ ಹೋಗಬಾರದು.  ಸಾರ್ವಜನಿಕರು ಆಸೀನರಾದ ಸ್ಥಳದಲ್ಲಿ ನಿಂತುಕೊಳ್ಳುವುದು, ಅನಾವಶ್ಯಕವಾಗಿ ತಿರುಗಾಡುವುದು, ಕಿರುಚುವುದು ಇತ್ಯಾದಿ ಮಾಡದೆ ತಮ್ಮ ಅಕ್ಕ ಪಕ್ಕ ಆಸೀನರಾದ ಇತರರಿಗೆ ತೊಂದರೆಯಾಗದಂತೆ ವರ್ತಿಸಬೇಕು.


ಇದನ್ನೂ ಓದಿ: Bengaluru: ನಾಳೆ ವಾಹನ ಸವಾರರು ರಸ್ತೆಗಿಳಿಯೋ ಮುನ್ನ ಎಚ್ಚರ; ನಗರದಲ್ಲಿ ಹಲವೆಡೆ ಸಂಚಾರ ಬಂದ್


ಯಾವುದೇ ವಾರಸುದಾರರಿಲ್ಲದ ಬ್ಯಾಗುಗಳು, ಪೊಟ್ಟಣ, ಆಟಿಕೆ ಸಾಮಾನುಗಳು ಹಾಗೂ ಇತರೆ ವಸ್ತುಗಳು ಕಂಡು ಬಂದಲ್ಲಿ ಅದನ್ನು ಮುಟ್ಟದೇ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಕಾರ್ಯಕ್ರಮ ವೀಕ್ಷಣೆಗೆ ಬರುವವರು ತಮ್ಮ ವಾಹನಗಳನ್ನು ಸಂಚಾರಿ ಪೊಲೀಸರು ನಿಗದಿಪಡಿಸಿರುವ ಸ್ಥಳದಲ್ಲೇ ನಿಲ್ಲಿಸಬೇಕು


ಸಾರ್ವಜನಿಕರು ಗಣ್ಯ ವ್ಯಕ್ತಿಗಳು ಸಾಗುವ ಮಾರ್ಗದಲ್ಲಿ ಗುಂಪು ಸೇರದೆ ಹಾಗು ಮಾರ್ಗಕ್ಕೆ ಬಂದು ಅಡ್ಡಿಯುಂಟು ಮಾಡದಂತೆ ಸಾಕಷ್ಟು ಅಂತರವನ್ನು ಕಾಯ್ದುಕೊಂಡು ದೂರದಿಂದಲೇ ವೀಕ್ಷಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಮಾರ್ಗಸೂಚಿ ಹೊರಡಿಸಿದ್ದಾರೆ.

Published by:Pavana HS
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು