ಬೆಂಗಳೂರು (ಮೇ 13): ರಮ್ಯಾ (Ramya) ಹಾಗೂ ಡಿ.ಕೆ ಶಿವಕುಮಾರ್ (D.K Shivakumar) ನಡುವಿನ ಟ್ವೀಟ್ ವಾರ್ಗೆ ಸದ್ಯಕ್ಕೆ ಬ್ರೇಕ್ ಬೀಳೋ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ (Rajasthan) ನಡೆಯುತ್ತಿರೋ ಚಿಂತನ ಶಿಬಿರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಎಂಬಿ ಪಾಟೀಲ್ (M.B Patil) ಹೆಗಲ ಮೇಲೆ ಕೈ ಹಾಕಿ ನಗುತ್ತಾ ಮಾತಾಡ್ತಿರೋ ಫೋಟೋ ನೋಡಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಒಳ್ಳೆಯ ಕೆಲಸ ಎಂದು ಟ್ವೀಟ್ (Tweet) ಮಾಡಿದ ರಮ್ಯಾ, ರಾಜ್ಯ ಕಾಂಗ್ರೆಸ್ ಘಟಕದ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಟ್ವೀಟ್ ಕಾಮೆಂಟ್ ಟ್ಯಾಗ್ (Tag) ಮಾಡಿದ್ದಾರೆ. ರಾಜಸ್ಥಾನದಲ್ಲಿ ಡಿ.ಕೆ ಶಿವಕುಮಾರ್ ಹಾಗೂ ಎಂ.ಬಿ ಪಾಟೀಲ್ ಮುನಿಸಿನ ಬಗ್ಗೆ ಕೂಡ ರಾಜ್ಯ ನಾಯಕರು (Leaders) ಚರ್ಚೆ ಮಾಡಿದ್ದಾರೆ. ಇದನ್ನ ಮುಂದುವರಿಸೋದು ಬೇಡ ಎಂದು ಇಬ್ಬರಿಗೂ ಹಿರಿಯ ನಾಯಕರು ಸಲಹೆ ನೀಡಿದ್ದಾರೆ.
ಯಾರು ಏನೇ ಮಾಡಲಿ ತಲೆ ಕೆಡಿಸಿಕೊಳ್ಳಬೇಡಿ
ಡಿ.ಕೆ ಶಿವಕುಮಾರ್ ವಿರುದ್ಧ ರಮ್ಯಾ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದ್ದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದ್ದಾರೆ. ಈ ವಿಚಾರದ ಬಗ್ಗೆ ರಾಜಸ್ಥಾನದಲ್ಲೂ ರಾಜ್ಯ ನಾಯಕರು ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಇದೇ ವೇಳೆ ಡಿಕೆ ಶಿವಕುಮಾರ್ ಹಾಗೂ ಎಂಬಿ ಪಾಟೀಲ್ ಅವರಿಗೆ ಇದನ್ನು ಮುಂದುವರಿಸೋದು ಬೇಡ ಎಂದು ಕಿವಿ ಮಾತು ಹೇಳಿದ್ದಾರೆ.
ಇದನ್ನು ಓದಿ: ಡಿಕೆಶಿ ಕರ್ಮಕಾಂಡಕ್ಕೆ ಪರ್ಮನೆಂಟ್ ಜಾಗ ತಿಹಾರ್ ಜೈಲು ಎಂದ ಅಶ್ವಥ್ ನಾರಾಯಣ್
Good job @rssurjewala @KBByju 👏🏽 👏🏽 https://t.co/JvzFi5hXnN
— Divya Spandana/Ramya (@divyaspandana) May 13, 2022
ರಾಜಸ್ಥಾನದಲ್ಲಿ ನಡೀತಿರೋ ಕಾಂಗ್ರೆಸ್ ಚಿಂತನ ಶಿಬರದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಸಹ ಭಾಗಿಯಾಗಿದ್ರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಎಂ.ಬಿ ಪಾಟೀಲ್ ಮುಖಾಮುಖಿ ಆಗಿದ್ದಾರೆ. ಈ ವೇಳೆ ಎಂ.ಬಿ ಪಾಟೀಲ್, ಡಿಕೆ ಶಿವಕುಮಾರ್ ಹೆಗಲ ಮೇಲೆ ಕೈ ಹಾಕಿ ನಗ್ತಾ ಮಾತಾಡಿದ್ದಾರೆ. ಈ ಫೋಟೋಗೆ ಗುಡ್ ಜಾಬ್ ಎಂದು ರಮ್ಯಾ ಟ್ವೀಟ್ ಮಾಡಿದ್ದಾರೆ. ರಮ್ಯಾ ಟ್ವೀಟ್ ಬಳಿಕ ಡಿಕೆಶಿ ಹಾಗೂ ರಮ್ಯಾ ನಡುವಿನ ಟ್ವೀಟ್ ವಾರ್ಗೆ ತೆರೆಬೀಳೋ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.
ರಮ್ಯಾ ಟ್ವೀಟ್ ಬಗ್ಗೆ ಆರ್ ಅಶೋಕ್ ವ್ಯಂಗ್ಯ
ದಿಲ್ಲಿಯಲ್ಲಿ ಹೇಗೆ ಕಾಂಗ್ರೆಸ್ ಹಿರಿಯ ಮುಖಂಡರ ಜಿ-23 ಪ್ರತ್ಯೇಕ ಬಣ ಇದೆ. ಅದೇ ರೀತಿ ಕರ್ನಾಟಕದಲ್ಲಿ ಕೆ-23 ಬಣಕ್ಕೆ ನಟಿ ರಮ್ಯ ಮುಹೂರ್ತ ಫಿಕ್ಸ್ ಮಾಡುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಕರ್ನಾಟಕದಲ್ಲಿ ಕೆ-23 ಭಿನ್ನಮತೀಯರ ಗ್ಯಾಂಗ್
ಕಾಂಗ್ರೆಸ್ ನಾಯಕರುಗಳ ಮಧ್ಯೆದ ಟ್ವಿಟರ್ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗೊಂದಲದ ಗೂಡಾಗಿದೆ. ಹೊಂದಾಣಿಕೆ ಇಲ್ಲ. 224 ಕ್ಷೇತ್ರಗಳಿಗೆ ಅಭ್ಯರ್ಥಿಗಳೇ ಇಲ್ಲ. ಆಗಲೇ ಟವೆಲ್ ಹಾಕಲು ಶುರು ಮಾಡಿದ್ದಾರೆ. ಆ ಟವೆಲ್ ಹಾಕಲು ಹೊರಟಿರುವುದರಿಂದಲೇ ಜಗಳ ಶುರುವಾಗಿದೆ. ಒಂದು ಕಡೆ ಜಮೀರ್ ಬಣ, ಇನ್ನೊಂದು ಕಡೆ ರಮ್ಯಾ ಎಂದು ಟೀಕಿಸಿದರು.
ಇದನ್ನೂ ಓದಿ: DKS v/s Ashwath: ನನ್ನನ್ನು ಟಚ್ ಮಾಡಿ ಅವ್ರೇ ಕೆಟ್ರು; ರಮ್ಯಾ ಮಾತಿನಿಂದ ನನಗೆ ಖುಷಿಯಾಗಿದೆ- ಅಶ್ವತ್ಥ ನಾರಾಯಣ
ದಿಲ್ಲಿಯಲ್ಲಿ ಕಾಂಗ್ರೆಸ್ನಲ್ಲಿ ಜಿ-23 ಭಿನ್ನಮತೀಯರ ಗ್ಯಾಂಗ್ ಇದೆ. ಅದೇ ರೀತಿ ಕರ್ನಾಟಕದಲ್ಲಿ ಕೆ-23 ಭಿನ್ನಮತೀಯರ ಗ್ಯಾಂಗ್ ಪ್ರಾರಂಭವಾಗುತ್ತಿದೆ. ಅದಕ್ಕೆ ಕುಮಾರಿ ರಮ್ಯಾ ಮುಹೂರ್ತ ಇಡಲಿದ್ದಾರೆ. ರಮ್ಯಾ, ಎಂ.ಬಿ.ಪಾಟೀಲ್ ಪರ ಒಂದು ಟೀಂ, ಡಿಕೆಶಿ ನಲಪಾಡ್ ಪರ ಮತ್ತೊಂದು ಟೀಂ ಆಗಿದೆ. ಕಾಂಗ್ರೆಸ್ನ ಗುಂಪುಗಳ ಬಯಲಾಟ ಇದು. ಆ ಗುಂಪುಗಳ ಬಯಲಾಟ ಈಗ ಬೀದಿಗೆ ಬಂದಿದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ