• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • RR Nagar By Election Result 2020: ಆರ್​ಆರ್​ ನಗರ ಉಪ ಚುನಾವಣೆ; ಮತ ಎಣಿಕೆ ಕೇಂದ್ರದ ಸುತ್ತ ಪೊಲೀಸ್​ ಸರ್ಪಗಾವಲು

RR Nagar By Election Result 2020: ಆರ್​ಆರ್​ ನಗರ ಉಪ ಚುನಾವಣೆ; ಮತ ಎಣಿಕೆ ಕೇಂದ್ರದ ಸುತ್ತ ಪೊಲೀಸ್​ ಸರ್ಪಗಾವಲು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Karnataka Assembly Bypoll Result: ಚುನಾವಣೆ ಫಲಿತಾಂಶದಿಂದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಆರ್ ಆರ್ ನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ನೆ ಜಾರಿಗೊಳಿಸಲಾಗಿದೆ ಹಾಗೂ ಬೆಳಗ್ಗೆ 6 ರಿಂದ ರಾತ್ರಿ 12 ರವರೆಗೆ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ.

ಮುಂದೆ ಓದಿ ...
  • Share this:

ಬೆಂಗಳೂರು (ನವೆಂಬರ್​ 10); ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿರುವ ಆರ್​ಆರ್​ ನಗರ ಉಪ ಚುನಾವಣೆ ಮುಕ್ತಾಯವಾಗಿದ್ದು ಇಂದು ಮತ ಎಣಿಕೆ ಆರಂಭವಾಗಿದೆ. ಆರ್​ಆರ್​ ನಗರ ಕ್ಷೇತ್ರ ಕಾಂಗ್ರೆಸ್​, ಬಿಜೆಪಿ ಮತ್ತು ಜೆಡಿಎಸ್​ ಈ ಮೂರೂ ಪಕ್ಷಗಳಿಗೆ ಗೆಲ್ಲಲೇಬೇಕಾದ ಪ್ರತಿಷ್ಠೆಯ ಕಣವಾಗಿರುವ ಕಾರಣ ಮತ ಎಣಿಕೆ ಕೇಂದ್ರಕ್ಕೆ ಬಿಗಿ ಪೊಲೀಸ್​ ಬಂದೋಬಸ್ತ್​ ಒದಗಿಸಲಾಗಿದೆ. ಅಲ್ಲದೆ, ಚುನಾವಣೆಯಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಕೊರೋನಾ ಮಾರ್ಗಸೂಚಿ ಅನ್ವಯ ಸಂಭ್ರಮಾಚರಣೆಯನ್ನೂ ನಡೆಸುವಂತಿಲ್ಲ ಎಂದು ತಾಕೀತು ಮಾಡಲಾಗಿದೆ. ಮತ ಎಣಿಕೆ ಸಂದರ್ಭದಲ್ಲಿ ನಡೆಯಬಹುದಾದ ಯಾವುದೇ ಅಹಿತಕರ ಘಟನೆಯನ್ನು ತಡೆಯುವ ಸಲುವಾಗಿ ಮತ ಎಣಿಕೆ ನಡೆಯಲಿರುವ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆ ಸುತ್ತ ಓರ್ವ ಡಿಸಿಪಿ, 4 ಎಸಿಪಿ, 20 ಇನ್ಸ್‌ಪೆಕ್ಟರ್, 48 ಪಿಎಸ್ಐ ಸೇರಿ 592 ಸಿಬ್ಬಂದಿ ನಿಯೋಜಿಸಲಾಗಿದೆ. 1 ಸಿಎಪಿಎಫ್​ ತುಕಡಿ, 9 ಕೆಎಸ್ಆರ್ ಪಿ, 9 ಸಿಎಆರ್ ತುಕಡಿಯನ್ನೂ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಅದೇರೀತಿ ಇಡೀ ಕ್ಷೇತ್ರದೆಲ್ಲೆಡೆ ಖಾಕಿ ಕಣ್ಗಾವಲನ್ನು ಚುರುಕುಗೊಳಿಸಲಾಗಿದೆ ಎನ್ನಲಾಗುತ್ತಿದೆ.


ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಎಲ್ಲೆಡೆ ಪೊಲೀಸರ ನಿಯೋಜನೆ ಮಾಡಲಾಗಿದೆ. ಇಬ್ಬರು ಡಿಸಿಪಿ, 4 ಜನ ಎಸಿಪಿ, 21 ಇನ್ಸ್‌ಪೆಕ್ಟರ್, 57 ಪಿಎಸ್ಐ ಸೇರಿ 899 ಸಿಬ್ಬಂದಿಯಿಂದ ಕ್ಷೇತ್ರದಲ್ಲಿ ಬಂದೋಬಸ್ತ್​ಗೆ ನೇಮಕ ಮಾಡಲಾಗಿದೆ. 9 ಕೆಎಸ್ಆರ್ ಪಿ ತುಕಡಿ, 9 ಸಿಎಆರ್ ತುಕಡಿಗಳು ಹಾಗೂ 104 ಚೀತಾ, 60 ಹೊಯ್ಸಳ ವಾಹನಗಳ ಗಸ್ತು ತಿರುಗಲಿವೆ.


ಇದನ್ನೂ ಓದಿ : Bihar Assembly Election 2020 Results Live: ಬಿಹಾರ ಚುನಾವಣೆ - ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭ


ಚುನಾವಣೆ ಫಲಿತಾಂಶದಿಂದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಆರ್ ಆರ್ ನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ನೆ ಜಾರಿಗೊಳಿಸಲಾಗಿದೆ ಹಾಗೂ ಬೆಳಗ್ಗೆ 6 ರಿಂದ ರಾತ್ರಿ 12 ರವರೆಗೆ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ.


ಮುನಿರತ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾರಣಕ್ಕೆ ತೆರವಾಗಿದ್ದ ಆರ್ ಆರ್ ನಗರ ಕ್ಷೇತ್ರಕ್ಕೆ ನವೆಂಬರ್ 3ರಂದು ಚುನಾವಣೆ ನಡೆದಿತ್ತು. ಇಂದು ಫಲಿತಾಂಶ ಪ್ರಕಟವಾಗಲಿದೆ. ಕಳೆದ ಬಾರಿ ಕಾಂಗ್ರೆಸ್ ಟಿಕೆಟ್​ನಿಂದ ಗೆದ್ದಿದ್ದ ಮುನಿರತ್ನ ಈ ಬಾರಿ ಬಿಜೆಪಿ ಟಿಕೆಟ್ ಪಡೆದು ಸ್ಪರ್ಧೆಗಿಳಿಸಿದ್ದಾರೆ. ಕಾಂಗ್ರೆಸ್​ನಿಂದ ದಿವಂಗತ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ನಿಂತಿದ್ದಾರೆ. ಜೆಡಿಎಸ್​ನಿಂದ ಸ್ಥಳೀಯ ಕಾರ್ಯಕರ್ತ ವಿ. ಕೃಷ್ಣಮೂರ್ತಿ ಕಣಕ್ಕಿಳಿದಿದ್ದಾರೆ. ಈ ಮೂವರ ಅದೃಷ್ಟ ಇಂದು ಬಯಲಾಗಲಿದೆ.

top videos
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು