ಬೆಂಗಳೂರು; ಹೊಸವರ್ಷದ ಹೊಸ್ತಿಲಲ್ಲೆ ಸಂಕ್ರಾಂತಿ ಹಬ್ಬಕ್ಕೆ ಮೆಟ್ರೋ ಇಲಾಖೆಯಿಂದ ರಾಜಧಾನಿಯ ಜನರಿಗೆ ಸಿಹಿ ಸುದ್ದಿ ನೀಡಿದೆ. ಎರಡನೇ ಹಂತದಲ್ಲಿ ನಮ್ಮ ಮೆಟ್ರೋ ಕೈಗೆತ್ತಿಕೊಂಡಿರುವ ಕನಕಪುರ ರಸ್ತೆಯ ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದವರೆಗೂ ವಿಸ್ತರಿತ ಹಸಿರು ಮಾರ್ಗದ ಮೆಟ್ರೋ ರೈಲನ್ನು ಸಿಎಂ ಬಿಎಸ್ ಯಡಿಯೂರಪ್ಪ ಉದ್ಘಾಟಿಸಿದರು.
ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆವರೆಗೂ ಮೆಟ್ರೋ ಉದ್ಘಾಟನಾ ಸಮಾರಂಭ ಹಿನ್ನಲೆಯಲ್ಲಿ ಕೋಣನಕುಂಟೆ ಕ್ರಾಸ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಅವರು 6 ಕಿ.ಮೀ. ಉದ್ದದ ಮೆಟ್ರೋ ಗ್ರೀನ್ ಲೈನ್ ಉದ್ಘಾಟನೆ ಮಾಡಿದರು. ಸಚಿವರಾದ ಆರ್. ಅಶೋಕ್, ಸುರೇಶ್ ಕುಮಾರ್, ಸದಾನಂದ ಗೌಡ ಹಾಗೂ ವಿಶ್ವನಾಥ್ ಭಾಗಿಯಾಗಿದ್ದರು.
ಇದನ್ನು ಓದಿ: ಪಕ್ಷದ ಆಂತರಿಕ ವಿಚಾರಗಳು ಏನೇ ಇದ್ದರೂ ಅದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು; ಜಗದೀಶ್ ಶೆಟ್ಟರ್
ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆವರೆಗೂ ನಿರ್ಮಾಣವಾಗಿರುವ ಮೆಟ್ರೋ ಸುಮಾರು 500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. 6.29 km ಉದ್ದದ ಮೆಟ್ರೋ ಇದಾಗಿದೆ. ಇನ್ನು ಮಾರ್ಗದಲ್ಲಿ ಕೋಣಕೊಂಟೆ ಕ್ರಾಸ್, ಕೃಷ್ಣ ಲೀಲಾ ಪಾರ್ಕ್, ವಾಜರಹಳ್ಳಿ, ತಲಗಟ್ಟಪುರ, ಅಂಜನಪುರ ಟೌನ್ ಶಿಪ್ ಎಂಬ ಐದು ಎಲಿವೇಟೆಡ್ ನಿಲ್ದಾಣ ನಿರ್ಮಾಣ ಮಾಡಲಾಗಿದ್ದು, ಉದ್ಘಾಟನೆಗೊಂಡ ಒಂದು ದಿನದ ಬಳಿಕ ಅಂದರೆ ಜನವರಿ 15 ರಿಂದ ಜನ ಬಳಕೆಗೆ ಲಭ್ಯವಾಗಲಿದೆ. ಟ್ರಾಫಿಕ್ ಕಿರಿಕಿರಿಯಿಂದ ಬಳಲುತ್ತಿದ್ದ ಜನರಿಗೆ ಇದೀಗ ಸಂತೋಷದ ಸುದ್ದಿ ಸಿಕ್ಕಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ