ಕನ್ನಡ ಚಲನಚಿತ್ರದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ (S. K Bhagavan) ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಗೆ (Jayadeva Hospital) ದಾಖಲು ಮಾಡಲಾಗಿದೆ. ಎಸ್.ಕೆ ಭಗವಾನ್ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ರು. ಭಗವಾನ್ ಅವರಿಗೆ ಜಯದೇವ ಆಸ್ಪತ್ರೆ ವೈದ್ಯರು (Doctor) ಚಿಕಿತ್ಸೆ ನೀಡುತ್ತಿದ್ದಾರೆ. ಕನ್ನಡ ಚಲನಚಿತ್ರರಂಗದಲ್ಲೇ ನಿರ್ದೇಶಕ ದೊರೈರಾಜ್ ಹಾಗೂ ಎಸ್.ಕೆ ಭಗವಾನ್ ಜೋಡಿ ಭಾರೀ ಜನಪ್ರಿಯವಾಗಿತ್ತು.
ನಾಟಕಗಳಲ್ಲಿ ಮೊದಲ ಅಭಿನಯ
ಭಗವಾನ್ ಎಂದೇ ಪ್ರಸಿದ್ಧರಾಗಿರುವ ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರು, ನಿರ್ಮಾಪಕರು ಮತ್ತು ನಟರು. 1933 ರಲ್ಲಿ ಮೈಸೂರಿನಲ್ಲಿ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ ಇವರು ಯುವಕರಾಗಿದ್ದಾಗಲೇ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. 1956 ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರೀಗಳಿಗೆ ಸಹಾಯಕರಾಗಿ ಚಿತ್ರರಂಗ ಪ್ರವೇಶಿಸದ ಇವರು 1966 ರಲ್ಲಿ ತೆರೆಕಂಡ `ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾದ್ರು
ನಿರ್ದೇಶಕರಾಗಿ ದೊರೈರಾಜ್ ಜೊತೆ ಸೇರಿದ ಭಗವಾನ್
ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿದ ಇವರು ಸ್ವತಂತ್ರರಾಗಿ ಚಿತ್ರನಿರ್ದೇಶಿಸಲು ಆರಂಭಿಸಿದರು. ಈ ನಿರ್ದೇಶಕ ಜೋಡಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದೆ. 1993 ರಲ್ಲಿ ದೊರೈರಾಜ್ ನಿಧನದ ನಂತರ ಚಿತ್ರನಿರ್ದೇಶನಕ್ಕೆ ವಿದಾಯ ಹೇಳಿದರು. ಸುಮಾರು 49 ಚಿತ್ರಗಳನ್ನು ನಿರ್ದೇಶಿಸಿದ ಈ ಜೋಡಿಯ 32 ಚಿತ್ರಗಳಲ್ಲಿ ಡಾ.ರಾಜಕುಮಾರ್ ನಾಯಕನಟರಾಗಿ ನಟಿಸಿದ್ದು ವಿಶೇಷ. ಸಾಮಾಜಿಕ ಕಳಕಳಿ ಹೊಂದಿದ್ದ ಇವರು 24 ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸದ್ದಾರೆ.
ಚಿತ್ರ ನಿರ್ದೇಶನಕ್ಕೆ ವಿದಾಯ ಹೇಳಿದ ನಂತರ `ಆದರ್ಶ ಸಿನಿಮಾ ಇನ್ಸ್ಟಿಟ್ಯೂಟ್'ನಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಹೆಚ್ಚು ಚಿತ್ರಗಳಿಗೆ ಸಂಗೀತ ನೀಡಿದ್ದು ರಾಜನ್-ನಾಗೇಂದ್ರ ಜೋಡಿ.
ಯಶಸ್ವಿ ಚಿತ್ರಗಳನ್ನು ನೀಡಿದ ಜೋಡಿ
ಕನ್ನಡ ಚಿತ್ರರಂಗದ ಮತ್ತೋರ್ವ ನಿರ್ದೇಶಕರಾದ ದೊರೈರಾಜ್ ಜೊತೆಗೂಡಿ ಚಿತ್ರಗಳನ್ನು ನಿರ್ದೇಶಿಸಿದರು. ಈ ಇಬ್ಬರ ಜೊಡಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಚಂದನದ ಗೊಂಬೆ’, ‘ವಸಂತ ಗೀತ’, ‘ಆಪರೇಷನ್ ಡೈಮಂಡ್ ರಾಕೆಟ್’, ‘ಹೊಸಬೆಳಕು’, ‘ಯಾರಿವನು’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳನ್ನು ಭಗವಾನ್ ಅವರು ನಿರ್ದೇಶಿಸಿದ್ದಾರೆ.
ದೊರೈರಾಜರ ಮರಣದ ನಂತರ ನಿರ್ದೇಶನಕ ಗುಡ್ ಬೈ
ಇವರ 30 ಚಿತ್ರಗಳಲ್ಲಿ ವರನಟ ಡಾ. ರಾಜಕುಮಾರ್ ನಾಯಕ ನಟರಾಗಿ ಅಭಿನಯಿಸಿರುವುದು ಇನ್ನೊಂದು ವಿಶೇಷ. ಅಷ್ಟೇ ಅಲ್ಲದೇ ಭಗವಾನ್ ಅವರು ವಿನಯ್ ರಾಘವಂದ್ರ ರಾಜ್ಕುಮಾರ್ ನಾಯಕತ್ವದ ‘ಅನಂತು ವರ್ಸಸ್ ನುಸ್ರತ್’ ಚಿತ್ರದಲ್ಲೂ ನಟಿಸಿದ್ದರು. ಸಿನಿಮಾ ರಂಗದಲ್ಲಿ 65 ವರ್ಷದ ಸುದೀರ್ಘ ಅನುಭವವನ್ನು ಹೊಂದಿದ್ದಾರೆ. ದೊರೈರಾಜರ ಮರಣದ ನಂತರ ಇವರು ನಿರ್ದೇಶನದಿಂದ ನಿವೃತ್ತಿ ಪಡೆದರು.
ಇದನ್ನೂ ಓದಿ: Mandeep Roy: ಹಾಸ್ಯ ನಟ ಮಂದೀಪ್ ರಾಯ್ಗೆ ಹೃದಯಾಘಾತ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ