• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Unlock: ಶಿವಮೊಗ್ಗ, ಬಳ್ಳಾರಿ ಸೇರಿದಂತೆ 6ಜಿಲ್ಲೆಗಳು ಅನ್​ಲಾಕ್​; ಇನ್ನುಳಿದ 7 ಜಿಲ್ಲೆಗಳಲ್ಲಿ ಲಾಕ್​ಡೌನ್​ ಮುಂದುವರಿಕೆ

Unlock: ಶಿವಮೊಗ್ಗ, ಬಳ್ಳಾರಿ ಸೇರಿದಂತೆ 6ಜಿಲ್ಲೆಗಳು ಅನ್​ಲಾಕ್​; ಇನ್ನುಳಿದ 7 ಜಿಲ್ಲೆಗಳಲ್ಲಿ ಲಾಕ್​ಡೌನ್​ ಮುಂದುವರಿಕೆ

ಪ್ರಾತಿನಿಧಿಕ ಚಿತ್ರ .

ಪ್ರಾತಿನಿಧಿಕ ಚಿತ್ರ .

ರಾತ್ರಿ 7 ಗಂಟೆ ಬಳಿಕ ಎಂದಿನಂತೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ವಿಕೇಂಡ್​ ಕರ್ಪ್ಯೂ ಕೂಡ ಜಾರಿಯಲ್ಲಿ ಇರಲಿದೆ

  • Share this:

ಬೆಂಗಳೂರು (ಜೂ. 21): ಕೊರೋನಾ ಸೋಂಕು ಕಡಿಮೆಯಾದ ಹಿನ್ನಲೆ 6 ಜಿಲ್ಲೆಗಳಲ್ಲಿ ಅನ್​ಲಾಕ್​ ಮಾಡಿ ಸಿಎಂ ಬಿಎಸ್​ ಯಡಿಯೂರಪ್ಪ ಆದೇಶಿಸಿದ್ದಾರೆ. ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರದಲ್ಲಿ ಅನ್​ಲಾಕ್​ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಈ ಸಮಯದಲ್ಲಿ ಸಾರಿಗೆ ಸಂಚಾರ ಇರಲಿದ್ದು, ಹೊಟೇಲ್​, ಅಂಗಡಿ ಮುಗ್ಗಟ್ಟುಗಳು ಕೂಡ ಸಂಜೆವರೆಗೆ ಕಾರ್ಯನಿರ್ವಹಿಸಲಿದೆ. ರಾತ್ರಿ 7 ಗಂಟೆ ಬಳಿಕ ಎಂದಿನಂತೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ವಿಕೇಂಡ್​ ಕರ್ಪ್ಯೂ ಕೂಡ ಜಾರಿಯಲ್ಲಿ ಇರಲಿದೆ ಎಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.


ಶನಿವಾರ ಅನ್​ಲಾಕ್​ 2.0 ಘೋಷಣೆ ಮಾಡಿದ ಮಖ್ಯಮಂತ್ರಿಗಳು   13 ಜಿಲ್ಲೆಗಳಲ್ಲಿ ಸೋಂಕು ಇಳಿಕೆಯಾದ ಪರಿಣಾಮ ಲಾಕ್​ಡೌನ್​ ನಿಯಮ ಸಡಿಲಿಕೆ ಮಾಡಿ ಆದೇಶಿಸಿದ್ದರು. ಈ ವೇಳೆ ಮೈಸೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ಗ್ರಾ., ದಾವಣಗೆರೆ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ವಿಜಯಪುರದಲ್ಲಿ ಎಂದಿನಂತೆ ಲಾಕ್​ಡೌನ್​ ಮುಂದುವರೆಯಲಿದೆ ಎಂದು ಘೋಷಿಸಿದ್ದರು.


13 ಜಿಲ್ಲೆಗಳಲ್ಲಿ ಮೈಸೂರು ಹೊರತು ಪಡಿಸಿ ಇನ್ನು ಉಳಿದ ಜಿಲ್ಲೆಗಳಲ್ಲಿ ಸೋಂಕಿನ ದರ ಶೇ. 5ಕ್ಕಿಂತ ಕಡಿಮೆಯಿರುವ ಹಿನ್ನಲೆ ಈಗ ಮತ್ತೆ ಉಳಿದ 6 ಜಿಲ್ಲೆಗಳಲ್ಲಿ ಅನ್​ಲಾಕ್​ ಮಾಡಿ ಮರು ಆದೇಶ ಮಾಡಲಾಗಿದೆ. ಅನ್​ಲಾಕ್​ ಆದರೂ ಜನರು ಸೋಂಕಿನ ಬಗ್ಗೆ ಜಾಗ್ರತೆವಹಿಸುವಂತೆ ತಿಳಿಸಿದ್ದಾರೆ. ಇನ್ನುಳಿದ 7 ಜಿಲ್ಲೆಗಳಲ್ಲಿ ಮುಂಚಿನಂತೆ ಕಟ್ಟು ನಿಟ್ಟಿನ ಲಾಕ್​ಡೌನ್​ ಮುಂದುವರೆಸುವುದಾಗಿ ತಿಳಿಸಲಾಗಿದೆ.


ಯಾವ ಜಿಲ್ಲೆಗಳಲ್ಲಿ ಅನ್​ಲಾಕ್​


ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರ

ಇದನ್ನು ಓದಿ: ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ಅವರು ಉಡುಗೆಯೇ ಕಾರಣ; ಪಾಕ್​ ಪ್ರಧಾನಿ


ಏನೆಲ್ಲಾ ವಿನಾಯಿತಿ


  • ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.

  • ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ  ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.

  •  ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.

  •  ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.

  • ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.

  •  ಸರ್ಕಾರಿ/ ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.

  •  ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

  • ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.


ಭಾನುವಾರ ರಾಜ್ಯದಲ್ಲಿ 4, 517 ಹೊಸ ಕೋವಿಡ್​ ಪ್ರಕರಣಗಳು ದಾಖಲಾಗಿದ್ದು, 120 ಕೋವಿಡ್​ ಸಾವು ಸಂಭವಿಸಿದೆ. 8, 456 ಜನರು ಡಿಸ್ಚಾರ್ಜ್​ ಹೊಂದಿದ್ದಾರೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು

top videos
    First published: