• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Unlock 2.0: ಶಿವಮೊಗ್ಗ, ಉಡುಪಿ ಸೇರಿ 6 ಜಿಲ್ಲೆಗಳು ಇಂದಿನಿಂದ ಅನ್​ಲಾಕ್; ಬಾರ್, ಅಂಗಡಿ, ರೆಸ್ಟೋರೆಂಟ್​ಗಳು ಓಪನ್

Karnataka Unlock 2.0: ಶಿವಮೊಗ್ಗ, ಉಡುಪಿ ಸೇರಿ 6 ಜಿಲ್ಲೆಗಳು ಇಂದಿನಿಂದ ಅನ್​ಲಾಕ್; ಬಾರ್, ಅಂಗಡಿ, ರೆಸ್ಟೋರೆಂಟ್​ಗಳು ಓಪನ್

ಸಿಎಂ ಯಡಿಯೂರಪ್ಪ

ಸಿಎಂ ಯಡಿಯೂರಪ್ಪ

Karnataka Unlock Guidelines: ಇಂದಿನಿಂದ ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲೂ ಲಾಕ್​ಡೌನ್ ವಿನಾಯಿತಿ ನೀಡಲಾಗಿದೆ.

  • Share this:

ಬೆಂಗಳೂರು (ಜೂನ್ 22): 2ನೇ ಹಂತದ ಅನ್​ಲಾಕ್ ಜಾರಿ ವೇಳೆ 16 ಜಿಲ್ಲೆಗಳಲ್ಲಿ ಮಾತ್ರ ಲಾಕ್​ಡೌನ್ ಸಡಿಲಿಕೆ ಮಾಡಿದ್ದ ರಾಜ್ಯ ಸರ್ಕಾರ ನಿನ್ನೆ ಮತ್ತೆ 6 ಜಿಲ್ಲೆಗಳಲ್ಲಿ ಅನ್​ಲಾಕ್ ಘೋಷಣೆ ಮಾಡಿದೆ. ಕೊರೋನಾ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕಡಿಮೆ ಇರುವ ಕಾರಣಕ್ಕೆ ಶಿವಮೊಗ್ಗ, ಉಡುಪಿ ಸೇರಿ 6 ಜಿಲ್ಲೆಗಳಲ್ಲಿ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ, ಇಂದಿನಿಂದ ಒಟ್ಟು 22 ಜಿಲ್ಲೆಗಳಲ್ಲಿ ಅನ್​ಲಾಕ್ ಜಾರಿಗೆ ಬರಲಿದೆ.


ಇಂದಿನಿಂದ ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲೂ ಲಾಕ್​ಡೌನ್ ವಿನಾಯಿತಿ ನೀಡಲಾಗಿದೆ. 2ನೇ ಹಂತದ ಕರ್ನಾಟಕ ಅನ್​ಲಾಕ್ ಭಾಗವಾಗಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ 16 ಜಿಲ್ಲೆಗಳಲ್ಲಿ ಮಾತ್ರ ನಿರ್ಬಂಧ ಸಡಿಲಿಸಿ ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿತ್ತು. ನಿನ್ನೆ ಮತ್ತೆ 6 ಜಿಲ್ಲೆಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ನೀಡಲಾಗಿದೆ.


ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಈ ಮೊದಲು ಅನ್​ಲಾಕ್ ಜಾರಿ ಮಾಡಲಾಗಿತ್ತು. ಇಂದಿನಿಂದ ಆ ಪಟ್ಟಿಗೆ ಇನ್ನೂ 6 ಜಿಲ್ಲೆಗಳನ್ನು ಸೇರಿಸಲಾಗಿದೆ.


ಇದನ್ನೂ ಓದಿ: Gold Price Today: ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ; ಬೆಳ್ಳಿ ಬೆಲೆ ಒಂದೇ ದಿನದಲ್ಲಿ 200 ರೂ. ಏರಿಕೆ


ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ಇಂದಿನಿಂದ ಎಸಿ ಬಳಸದೆ ಹೋಟೆಲ್‌ ತೆರೆಯಲು ಅವಕಾಶವಿದೆ. ಬಸ್, ಮೆಟ್ರೋಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗುತ್ತದೆ. ಲಾಡ್ಜ್​, ರೆಸಾರ್ಟ್, ಜಿಮ್‌ಗಳು ಕೆಲವು ನಿರ್ಬಂಧಗಳೊಂದಿಗೆ ಕಾರ್ಯ ನಿರ್ವಹಿಸಲು ಜನರಿಗೆ ಅವಕಾಶವಿದೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ ನೀಡಲಾಗಿದೆ.


ಅನ್​ಲಾಕ್ ಆಗಿರುವ 22 ಜಿಲ್ಲೆಗಳಲ್ಲಿ ಯಾವುದಕ್ಕೆ ಅನುಮತಿ?:
* ಹೋಟೆಲ್ ಆರಂಭಿಸಲು, ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಸಂಜೆ 5 ಗಂಟೆಯವರೆಗೂ ಅವಕಾಶ.


*  ಹೋಟೆಲ್​ಗಳಲ್ಲಿ ಕುಳಿತು ತಿನ್ನಲು ಅವಕಾಶ. ಆದರೆ, ಶೇ.50 ರಷ್ಟು ಗ್ರಾಹಕರಿಗೆ ಮಾತ್ರ ಅನುಮತಿ.


*  ಬಾರ್​ನಲ್ಲಿ ಕುಳಿತು ಊಟ ಮಾಡಲು ಅವಕಾಶ. ಮದ್ಯ ಪೂರೈಕೆಗೆ ಅವಕಾಶ ಇಲ್ಲ


*  ಬಸ್, ಮೆಟ್ರೋ ಸಂಚಾರಕ್ಕೆ ಶೇ.50 ಆಸನ ಸಾಮರ್ಥ್ಯದೊಂದಿಗೆ ಅವಕಾಶ


* ರೆಸಾರ್ಟ್ ಮತ್ತು ಲಾಡ್ಜ್ ಗಳಲ್ಲಿ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅವಕಾಶ


* ಶೇ. 50ರಷ್ಟು ಸಾಮರ್ಥ್ಯದೊಂದಿಗೆ ಹೊರಾಂಗಣ ಚಿತ್ರೀಕರಣಕ್ಕೆ ಅನುಮತಿ


* ಹವಾನಿಯಂತ್ರಣವಿಲ್ಲದೆ ಜಿಮ್ ಗಳು ಕಾರ್ಯ ನಿರ್ವಹಿಸಲು ಅವಕಾಶ.


* ಹೊರಾಂಗಣ ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಲ್ಲದೆ ಕ್ರೀಡೆಗೆ ಅವಕಾಶ


ಇದನ್ನೂ ಓದಿ: Karnataka Weather Today: ರಾಜ್ಯದಲ್ಲಿ ತಗ್ಗಿದ ಮಳೆಯ ಅಬ್ಬರ; ಮಲೆನಾಡು, ಕರಾವಳಿಯಲ್ಲಿಂದು ಹಳದಿ ಅಲರ್ಟ್​ ಘೋಷಣೆ


 ಯಾವುದಕ್ಕೆ ನಿಷೇಧ?:
* ಜುಲೈ 5ರವರೆಗೆ ಬೆಂಗಳೂರಿನಲ್ಲಿ ಪ್ರತಿದಿನ ಸಂಜೆ 7 ಗಂಟೆಯಿಂದ ಬೆಳಗ್ಗೆ 5 ರವರೆಗೆ ನೈಟ್​ ಕರ್ಫ್ಯೂ


*  ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ

top videos


    *  ಸಿನಿಮಾ ಮಂದಿರ, ದೇಗುಲ, ಮಾಲ್​ಗಳನ್ನು ತೆರೆಯಲು ನಿರ್ಬಂಧ


    ಒಟ್ಟು 22 ಜಿಲ್ಲೆಗಳಲ್ಲಿ ಅನ್​ಲಾಕ್ ಘೋಷಣೆ ಮಾಡಲಾಗಿದ್ದು, 8 ಜಿಲ್ಲೆಗಳಲ್ಲಿ ಲಾಕ್​ಡೌನ್ ವಿಸ್ತರಣೆಯಾಗಿದೆ. ಕೊರೋನಾ ಪಾಸಿಟಿವಿಟಿ ದರ ಶೇ. 5ಕ್ಕಿಂತ ಹೆಚ್ಚಿರುವ ಮೈಸೂರು, ಹಾಸನ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಧಾರವಾಡ ಜಿಲ್ಲೆಗಳಲ್ಲಿ ಲಾಕ್​ಡೌನ್ ನಿಯಮಗಳು ಜುಲೈ 5ರವರೆಗೆ ಮುಂದುವರೆಯಲಿದೆ.

    First published: