• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Siddaramaiah: ನೇಣು ಹಾಕಿಕೊಳ್ಳುವ ಬದಲು ರಾಜೀನಾಮೆ ನೀಡಿ ಪುಣ್ಯ ಕಟ್ಕೊಳಿ; ಸದಾನಂದ ಗೌಡರಿಗೆ ಸಿದ್ದರಾಮಯ್ಯ ಸಲಹೆ

Siddaramaiah: ನೇಣು ಹಾಕಿಕೊಳ್ಳುವ ಬದಲು ರಾಜೀನಾಮೆ ನೀಡಿ ಪುಣ್ಯ ಕಟ್ಕೊಳಿ; ಸದಾನಂದ ಗೌಡರಿಗೆ ಸಿದ್ದರಾಮಯ್ಯ ಸಲಹೆ

ವಿಪಕ್ಷ ನಾಯಕ ಸಿದ್ದರಾಮಯ್ಯ.

ವಿಪಕ್ಷ ನಾಯಕ ಸಿದ್ದರಾಮಯ್ಯ.

Karnataka Coronavirus Vaccine: ನೇಣು ಹಾಕಿಕೊಳ್ಳುವ ಕೆಲಸವನ್ನೆಲ್ಲ ಮಾಡಬೇಡಿ. ನಿಮ್ಮ ಕೈಯಲ್ಲಿ ಆಡಳಿತ ನಡೆಸಲು ಸಾಧ್ಯವಿಲ್ಲ. ಮರ್ಯಾದೆಯಿಂದ ರಾಜೀನಾಮೆ ಕೊಟ್ಟು ಹೊರಟುಬಿಡಿ. ದೇಶಕ್ಕಾಗಿ ಅಷ್ಟಾದರೂ ಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಸದಾನಂದ ಗೌಡರಿಗೆ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಮುಂದೆ ಓದಿ ...
  • Share this:

ಬೆಂಗಳೂರು (ಮೇ 14): ಕರ್ನಾಟಕದಲ್ಲಿ ಕೊರೋನಾ ಲಸಿಕೆಯ ಸಮಸ್ಯೆ ಎದುರಾಗಿದ್ದು, ಈಗಾಗಲೇ ಎರಡನೇ ಡೋಸ್​ನವರಿಗೆ ಮಾತ್ರ ಲಸಿಕೆ ವಿತರಿಸುವುದಾಗಿ ಸರ್ಕಾರ ಘೋಷಿಸಿದೆ. ಇದರಿಂದ 18ರಿಂದ 45 ವರ್ಷದೊಳಗಿನವರಿಗೆ ಉಚಿತ ಲಸಿಕೆ ನೀಡಲು ಕೇಂದ್ರ ಸರ್ಕಾರ ಘೋಷಿಸಿದ್ದರೂ ಕರ್ನಾಟಕದಲ್ಲಿ ಆ ಅವಕಾಶವಿಲ್ಲದಂತಾಗಿದೆ. ಕರ್ನಾಟಕಕ್ಕೆ ಹೆಚ್ಚುವರಿ ಕೊರೋನಾ ಲಸಿಕೆ ಮತ್ತು ಆಕ್ಸಿಜನ್ ಪೂರೈಕೆ ಮಾಡುವಂತೆ ಹೈಕೋರ್ಟ್​ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ. ಆದರೂ ಸರ್ಕಾರ ಕೊರೋನಾ ಲಸಿಕೆ ನೀಡದ ವಿಷಯವಾಗಿ ಅಸಹಾಯಕತೆ ತೋಡಿಕೊಂಡಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಕೋವಿಡ್ ಲಸಿಕೆ ಉತ್ಪಾದನೆಯಾಗದಿದ್ದರೆ ನಾವು ನೇಣು ಹಾಕಿಕೊಳ್ಳೋಕಾಗುತ್ತಾ? ಎಂದು ಸಿಡಿಮಿಡಿಗೊಂಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ನೇಣು ಹಾಕಿಕೊಳ್ಳುವುದೇನೂ ಬೇಡ, ಮರ್ಯಾದೆಯಿಂದ ರಾಜೀನಾಮೆ ಕೊಟ್ಟು ಹೋದರೆ ಸಾಕು ಎಂದಿದ್ದಾರೆ.


ಕೇಂದ್ರ ಸಚಿವ ಸದಾನಂದ ಗೌಡರೇ, ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ ಕಾನೂನಿಗೆ ವಿರುದ್ಧವಾದುದು. ಸುಮ್ಮನೆ ಆ ಕೆಲಸವನ್ನೆಲ್ಲ ಮಾಡಲು ಹೋಗಬೇಡಿ. ನಿಮ್ಮ ಕೈಯಲ್ಲಿ ಆಡಳಿತ ನಡೆಸಲು ಸಾಧ್ಯವಿಲ್ಲ. ಹೀಗಾಗಿ, ಮರ್ಯಾದೆಯಿಂದ ರಾಜೀನಾಮೆ ಕೊಟ್ಟು ಹೊರಟುಬಿಡಿ. ದೇಶಕ್ಕಾಗಿ ಅಷ್ಟಾದರೂ ಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಸಿದ್ದರಾಮಯ್ಯ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.



ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರು, ಹೈಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರವಿನ್ನೂ ಪೂರ್ತಿಯಾಗಿ ಕರ್ನಾಟಕಕ್ಕೆ ವ್ಯಾಕ್ಸಿನ್ ಪೂರೈಸಿಲ್ಲವಲ್ಲ ಎಂಬ ಪ್ರಶ್ನೆಗೆ ಅಸಮಾಧಾನ ಹೊರಹಾಕಿದ ಡಿವಿ ಸದಾನಂದ ಗೌಡ, ನ್ಯಾಯಾಲಯ ಇಷ್ಟು ವ್ಯಾಕ್ಸಿನ್ ಕೊಡಿ ಅಷ್ಟು ಕೊಡಿ ಎಂದು ಹೇಳುತ್ತದೆ. ಕೋರ್ಟ್ ಹೇಳಿದೆಯೆಂದ ಮಾತ್ರಕ್ಕೆ ವ್ಯಾಕ್ಸಿನ್ ಉತ್ಪಾದನೆ ಸಾಕಷ್ಟು ಪ್ರಮಾಣದಲ್ಲಿ ಮಾಡಲಾಗದಿದ್ದರೆ ನೇಣುಹಾಕಿಕೊಳ್ಳಬೇಕೇ? ಎಂದು ಪ್ರಶ್ನಿಸಿದ್ದರು.


ನಾವು ನಿರೀಕ್ಷಿಸಿದಂತೆ ಸಾಕಷ್ಟು ಪ್ರಮಾಣದಲ್ಲಿ ಉತ್ಪಾದನೆ ಆಗಲಿಲ್ಲ. ಅದು ನಮ್ಮ ಪ್ರಯತ್ನ ಮೀರಿದ್ದಾಗಿದೆ. ಕಳೆದ ಬುಧವಾರದವರೆಗೆ ಕರ್ನಾಟಕದಲ್ಲಿ ಇನ್ನು 98,000ಡೋಸ್ ವ್ಯಾಕ್ಸಿನ್ ಸಂಗ್ರಹವಿದೆ. ಕೇಂದ್ರದಿಂದ ಇನ್ನು 75,000 ಡೋಸ್ ಬರಬೇಕಾಗಿದೆ. ಇದುವರೆಗೆ 1.18 ಕೋಟಿಗೂ ಹೆಚ್ಚು ಲಸಿಕೆ ನೀಡಲಾಗಿದೆ. ನೇರವಾಗಿ ಪ್ರಧಾನಿಯವರೇ ವ್ಯಾಕ್ಸಿನೇಷನ್ ಅಭಿಯಾನದ ಉಸ್ತುವಾರಿ ವಹಿಸಿದ್ದಾರೆ. ಇನ್ನು ಒಂದು ವಾರದೊಳಗೆ ಗೊಂದಲಗಳು ಬಗೆ ಹರಿಯುತ್ತದೆ ಎಂದಿದ್ದರು.


ಇಂದು ಮಾತನಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಕಾಂಗ್ರೆಸ್​ನ ಕೊರೋನಾ ಲಸಿಕಾ ಅಭಿಯಾನದ ಬಗ್ಗೆ ಮಾಹಿತಿ ನೀಡಿದ್ದಾರೆ. ನಮ್ಮ 100 ಜನಪ್ರತಿನಿಧಿಗಳು ಪ್ರತಿಯೊಬ್ಬರೂ 1 ಕೋಟಿಯನ್ನ ವ್ಯಾಕ್ಸಿನ್ ಗೆ ನೀಡ್ತೇವೆ. 100 ಕೋಟಿಗಳನ್ನು ಲಸಿಕೆ ಖರೀದಿಗೆ ಕೊಡ್ತೇವೆ. ಈ ಬಗ್ಗೆ ನಮ್ಮ ಪಕ್ಷದ ಜನಪ್ರತಿನಿಧಿಗಳಿಗೆ ನಾವು ಸೂಚಿಸಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ನಿರ್ಧಾರವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

First published: