ಗೋಕಾಕ್ (ಏ. 6): ಕೊರೋನಾ ಹಿನ್ನಲೆ ಉಸಿರಾಟದ ಸಮಸ್ಯೆಯಿಂದಾಗಿ ಐಸಿಯುನಲ್ಲಿ ದಾಖಲಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೂರನೇ ದಿನದ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಗೆ ದಾಖಲಾದ ಹಿನ್ನಲೆ ಎಸ್ಐಟಿ ವಿಚಾರಣೆಗೆ ರಮೇಶ್ ಜಾರಕಿಹೊಳಿ ಗೈರಾಗಿದ್ದರು. ಈ ಹಿನ್ನಲೆ ಇಂದು ಎಸ್ಐಟಿ ತಂಡ ಆಸ್ಪತ್ರೆಗೆ ಭೇಟಿ ನೀಡಿ ರಮೇಶ್ ಜಾರಕಿಹೊಳಿ ಆರೋಗ್ಯದ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಎಸ್ಐಟಿ ತನಿಖೆಯಿಂದ ತಪ್ಪಿಸಿಕೊಳ್ಳಲು ಕೊರೋನಾ ಸುಳ್ಳು ನೆಪ ಹೇಳುತ್ತಿದ್ದಾರೆ ಎಂದು ಸಿಡಿ ಪ್ರಕರಣದ ಸಂತ್ರಸ್ತೆ ಪರ ವಕೀಲರು ಆರೋಪಿಸಿದ್ದರು. ಈ ಬೆನ್ನಲ್ಲೆ ಮಾಜಿ ಸಚಿವರು ಗೋಕಾಕ್ ತಾಲೂಕು ಆಸ್ಪತ್ರೆಯ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ವಿಡಿಯೋ ಬಿಡುಗಡೆ ಮಾಡಲಾಗಿತ್ತು. ಈ ಬೆಳವಣಿಗೆ ಕುರಿತು ಮಾಹಿತಿ ಕಲೆ ಹಾಕಲು ಎಸ್ಐಟಿ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದರು.
ಬೆಂಗಳೂರಿನಿಂದ ಆಗಮಿಸಿದ್ದ ಇಬ್ಬರು ಅಧಿಕಾರಿಗಳು ಗೋಕಾಕ್ ನ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಜೊತೆಗೆ ಸುಮಾರು ಒಂದು ಗಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಚರ್ಚೆ ವೇಳೆ ಚಿಕಿತ್ಸೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಪಡೆದರು. ಈ ವೇಳೆ ಮಾಜಿ ಸಚಿವರು ಕೊವೀಡ್ ವರದಿಯನ್ನು ಪರಿಶೀಲಿಸಲಾಗಿದ್ದು, ಕೆಲವು ಚಿಕಿತ್ಸೆ ದಾಖಲೆಗಳನ್ನು ಪಡೆದುಕೊಂಡರು.
ಅಧಿಕಾರಿಗಳ ಭೇಟಿ ಬಳಿಕ ಮಾತಾನಾಡಿದ ಡಾ, ರವೀಂದ್ರ, ಮಾಜಿ ಸಚಿವರು ಆಸ್ಪತ್ರೆಯಿಂದ ಬಿಡುಗಡೆಗೂ ಮುನ್ನ ಎಸ್ಐಟಿ ತಂಡಕ್ಕೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿಸಿದರು.
ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಮೇಶ್ ಜಾರಕಿಹೊಳಿ ಇನ್ನೂ ಎರಡೂ ವಾರ ಎಸ್.ಐ.ಟಿ ಮುಂದೆ ಹಾಜರಾಗುವುದು ಅನುಮಾನ ಎನ್ನಲಾಗುತ್ತಿದೆ. ರಮೇಶ್ ಸಂಪೂರ್ಣ ಚೇತರಿಸಿಕೊಂಡಿಲ್ಲ. ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದರೂ ಎರಡು ವಾರಗಳ ವರೆಗೂ ಕ್ವಾರಂಟೈನ ನಲ್ಲಿ ಅವರು ಇರಬೇಕಾಗುತ್ತದೆ. ರಮೇಶ್ ಜಾರಕಿಹೊಳಿ ಅವರಿಗೆ ಇನ್ನು ಬಿಪಿ, ಶುಗರ್ ಕಂಟ್ರೋಲ್ ಗೆ ಬಂದಿಲ್ಲ, ಈಗಲೂ ಸ್ವಲ್ಪ ಉಸಿರಾಟದ ತೊಂದರೆಯನ್ನು ಅವರು ಅನುಭವಿಸುತ್ತಿದ್ದಾರೆ. ಐದು ದಿನಗಳ ಬಳಿಕ ಟ್ರೀಟ್ ಮೆಂಟ್ ಸಂಪೂರ್ಣ ಆಗಲಿದೆ. ಎರಡು ವಾರಗಳ ಬಳಿಕ ಮತ್ತೆ ಕೊರೋನಾ ಪರೀಕ್ಷೆಗೆ ಅವರನ್ನು ಒಳಪಡಿಸಲಾಗುವುದು. ಆ ವರದಿಯಲ್ಲಿ ನೆಗಟಿವ್ ಬಂದ ಬಳಿಕವೇ ಅವರು ಹೊರಗಡೆ ಓಡಾಡಲು ಸಾಧ್ಯ ಎಂದು ಡಾ. ರವೀಂದ್ರ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ