ಮಾಗಡಿ, ರಾಮನಗರ: ಸನ್ಯಾಸಿ (Monk) ಅಂದರೆ ಸಂಸಾರ ಸುಖ, ಭೋಗಗಳನ್ನು ತ್ಯಜಿಸಿ, ಮದ, ಮೋಹ, ಕಾಮ, ಕ್ರೋಧಗಳೆಂದ ಅರಿಷಡ್ವರ್ಗಗಳನ್ನು ಗೆದ್ದವನು. ಮಠ (Math) ಅಂದರೆ ಒಂದು ಧರ್ಮ (religion), ಸಮುದಾಯಕ್ಕೆ (Community) ದಾರಿ ತೋರಿಸುವ, ಮಾರ್ಗದರ್ಶನ ಮಾಡುವ ಕೇಂದ್ರ. ಇಲ್ಲಿನ ಸ್ವಾಮೀಜಿಗೆ (Swamiji) ಸಮಾಜದಲ್ಲಿ ಉನ್ನತ ಸ್ಥಾನಮಾನ ಇರುತ್ತದೆ. ಪೀಠ ಅಲಂಕರಿಸುವ ಸ್ವಾಮೀಜಿ ಸಮಾಜಕ್ಕೆ ಮಾದರಿಯಾಗಿ (Role Model) ಬದುಕಬೇಕು. ಆದರೆ ರಾಮನಗರದ (Ramanagar) ಮಾಗಡಿ (Magadi) ತಾಲೂಕಿನ ಸೋಲೂರಿನ (Soluru) ಗದ್ದುಗೆ ಮಠದಲ್ಲಿ (Gadduge Math) ಎಲ್ಲವೂ ಅಯೋಮಯವಾಗಿದೆ. ಈ ಮಠದ ಶಿವಮಹಂತ ಸ್ವಾಮೀಜಿಯವರು (Shiva Mahanta Swamiji) ಇದೀಗ ಸನ್ಯಾಸತ್ವ ತ್ಯಜಿಸಿ, ಮಠ ಬಿಟ್ಟು ನಾಪತ್ತೆಯಾಗಿದ್ದಾರೆ. ಜೊತೆಗೆ ಪತ್ರವೊಂದನ್ನು (Letter) ಬರೆದಿಟ್ಟು, ತಾವು ಮಠ ಬಿಟ್ಟು ಹೋಗಲು ಕಾರಣವಾದ ವಿಚಾರವನ್ನು ತಿಳಿಸಿದ್ದಾರೆ. ಸ್ವಾಮೀಜಿ ನಾಪತ್ತೆಯಾಗಿರುವ ವಿಚಾರ ತಿಳಿದು ಮಠದ ಭಕ್ತರು, ಗ್ರಾಮಸ್ಥರೆಲ್ಲ ಆಘಾತಕ್ಕೆ ಒಳಗಾಗಿದ್ದಾರೆ.
ಸನ್ಯಾಸತ್ವ ತ್ಯಜಿಸಿ ನಾಪತ್ತೆಯಾದ ಸ್ವಾಮೀಜಿ
ಸೋಲೂರಿನ ಗದ್ದುಗೆ ಮಠದ ಶಿವಮಹಂತ ಸ್ವಾಮೀಜಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇವರ ಮೂಲ ಅಥವಾ ಗೃಹಸ್ಥಾಶ್ರಮದ ಹೆಸರು ಹರೀಶ್. ಇದೀಗ ಗದ್ದುಗೆ ಮಠದಲ್ಲಿದ್ದ ಶಿವಮಹಂತ ಸ್ವಾಮೀಜಿ ಸನ್ಯಾಸತ್ವ ತ್ಯಜಿಸಿ, ಪತ್ರ ಬರೆದಿಟ್ಟು ಮಠದಿಂದ ನಾಪತ್ತೆಯಾಗಿದ್ದಾರೆ.
ಹುಡುಗಿ ಜೊತೆಗೆ ನಾಪತ್ತೆಯಾದರಾ ಸ್ವಾಮೀಜಿ?
ಹೌದು, ಇಂಥದ್ದೊಂದು ವದಂತಿ ಇದೀಗ ಮಠದ ಭಕ್ತರಲ್ಲಿ ಹಾಗೂ ಗ್ರಾಮದಲ್ಲಿ ಹರಡಿದೆ. ಸ್ವಾಮೀಜಿ ಯುವತಿಯೊಬ್ಬಳ ಜೊತೆ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ಮದುವೆಯಾಗಿದ್ದವಳ ಜೊತೆ ಸ್ವಾಮೀಜಿ ತೆರಳಿದ್ದಾರೆ ಅಂತ ಹೇಳಲಾಗುತ್ತಿದೆ.
ಇದನ್ನೂ ಓದಿ: Actor Arrest: ತಾನು ಹುಡುಗಿ ಅಂತ ನಂಬಿಸಿ ಉದ್ಯಮಿಗೆ ಮೋಸ, ಬಯಲಾಯ್ತು ನವನಟನ ನವರಂಗಿ ಆಟ!
ಸನ್ಯಾಸತ್ವ ಇಷ್ಟ ಇಲ್ಲ ಅಂತ ಪತ್ರ ಬರೆದು ನಾಪತ್ತೆ
ಹರೀಶ್ ಅಂತ ಇವರು ಮೂಲ ಹೆಸರಾಗಿದ್ದು, ಸ್ವಾಮೀಜಿಯಾದ ಮೇಲೆ ಶಿವಮಹಂತ ಸ್ವಾಮೀಜಿ ಅಂತ ಹೆಸರು ನೀಡಲಾಗಿತ್ತು. ಕಳೆದ ಎರಡು ವರ್ಷಗಳ ಹಿಂದಷ್ಟೇ ಮಠದ ಪೀಠಾಧಿಪತಿಯಾಗಿ ನೇಮಕಗೊಂಡಿದ್ದರು. ಇದೀಗ ಇವರು ಮದುವೆಯಾಗಿ ಒಂದೂವರೆ ತಿಂಗಳಾಗಿದ್ದ ಯುವತಿ ಒಬ್ಬಳ ಜೊತೆಗೆ ಎಸ್ಕೇಪ್ ಆಗಿದ್ದಾರೆ ಎಂಬ ವದಂತಿ ಹಬ್ಬಿದೆ. ಇನ್ನು ಸ್ವಾಮೀಜಿ ಮಠದಿಂದ ತೆರಳುವ ಮುನ್ನ ಪತ್ರವೊಂದನ್ನು ಬರೆದಿದ್ದಾರೆ.
ನನ್ನನ್ನು ಹುಡುಕಬೇಡಿ ಅಂತ ಮನವಿ
ತನಗೆ ಸನ್ಯಾಸತ್ವ ಇಷ್ಟವಿಲ್ಲ, ನಾನು ಮಠ ಬಿಟ್ಟು ಹೋಡಿಹೋಗ್ತಿದ್ದೀನಿ ಅಂತ ಪತ್ರ ಬರೆದಿಟ್ಟು ಪರಾರಿಯಾಗಿದ್ದಾರೆ. ನಾನು ಯಾರ ಕೈಗೂ ಸಿಗುವುದಿಲ್ಲ ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರದಲ್ಲಿ ಹೇಳಿದ್ದಾರೆ.
ಸ್ವಾಮೀಜಿ ಬರೆದ ಪತ್ರದಲ್ಲಿ ಏನಿದೆ?
ನಾನು ನನ್ನ ಸ್ವಾಮೀಜಿ ಜೀವನ ತ್ಯಜಿಸುತ್ತಿದ್ದೇನೆ. ಕಾರಣ ನನ್ನ ಜೀವನದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಈ ಕಾರಣಕ್ಕಾಗಿ ನಾನು ಇದನ್ನೆಲ್ಲಾ ಬಿಟ್ಟು ದೂರ ಹೋಗುತ್ತಿದ್ದೇನೆ. ನನಗೆ ಈ ಜೀವನ ಜಿಗುಪ್ಸೆ ಉಂಟು ಮಾಡಿದೆ. ಈ ಕಾರಣ ನಿಮಗೆಲ್ಲ ಗೊತ್ತಿದೆ ಅಂತ ಭಾವಿಸುತ್ತೇನೆ. ದಯವಿಟ್ಟು ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ. ನಾನು ಕಾವಿ ಬಟ್ಟೆಯನ್ನು ತ್ಯಜಿಸಿದ ಮೇಲೆ ಮತ್ತೆಂದೂ ತೊಡುವುದಿಲ್ಲ. ಹಾಗೇನಾದರೂ ನನ್ನನ್ನು ಹುಡುಕುವ ಪ್ರಯತ್ನ ಮಾಡಿದರೆ ನನ್ನ ಹೆಣವನ್ನು ನೀವು ನೋಡುತ್ತೀರಿ ಅಂತ ಪತ್ರದಲ್ಲಿ ಸ್ವಾಮೀಜಿ ಎಚ್ಚರಿಸಿದ್ದಾರೆ.
ಇದನ್ನೂ ಓದಿ: Arundhati Movie: ಅರುಂಧತಿ ಸಿನಿಮಾ ನೋಡಿ ಬೆಂಕಿ ಹಚ್ಚಿಕೊಂಡ! ಈ ಯುವಕ ಹೇಳಿದ್ದು ಕೇಳಿದ್ರೆ ಎದೆ ನಡುಗುತ್ತೆ
ಈ ಹಿಂದೆ ಯುವತಿಯನ್ನು ಪ್ರೀತಿಸುತ್ತಿದ್ದ ಸ್ವಾಮೀಜಿ
ಈ ಹಿಂದೆ ಇದೇ ಸ್ವಾಮೀಜಿ ಬೇರೆ ಮಠದಲ್ಲಿರುವಾಗ ಯುವತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದರು ಎನ್ನಲಾಗಿದೆ. ಆಕೆಗೆ ಕಳೆದ ಒಂದೂವರೆ ತಿಂಗಳ ಹಿಂದೆ ಮದುವೆಯಾಗಿತ್ತು ಅಂತ ಹೇಳಲಾಗುತ್ತಿದೆ. ಅದೇ ಹುಡುಗಿ ಜೊತೆ ಶಿವಮಹಂತಸ್ವಾಮಿ ಅಲಿಯಾಸ್ ಹರೀಶ್ ಪರಾರಿಯಾಗಿರುವ ಶಂಕೆ ಇದೆ. ಇದೀಗ ಕುದೂರು ಠಾಣೆಯಲ್ಲಿ ಸ್ವಾಮೀಜಿ ಮಿಸ್ಸಿಂಗ್ ಕೇಸ್ ದಾಖಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ