• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಆರ್​ಆರ್​ ನಗರದಲ್ಲಿ ನಿಮ್ಮ ಪಕ್ಷವೇ ಇಲ್ಲವಲ್ಲ; ಭರ್ಜರಿ ಗೆಲುವಿನ ಬಳಿಕ ಸಿದ್ದರಾಮಯ್ಯ ಗೇಲಿ ಮಾಡಿದ ಬಿಜೆಪಿ

ಆರ್​ಆರ್​ ನಗರದಲ್ಲಿ ನಿಮ್ಮ ಪಕ್ಷವೇ ಇಲ್ಲವಲ್ಲ; ಭರ್ಜರಿ ಗೆಲುವಿನ ಬಳಿಕ ಸಿದ್ದರಾಮಯ್ಯ ಗೇಲಿ ಮಾಡಿದ ಬಿಜೆಪಿ

ನಳಿನ್ ಕುಮಾರ್ ಕಟೀಲ್-ಸಿದ್ದರಾಮಯ್ಯ.

ನಳಿನ್ ಕುಮಾರ್ ಕಟೀಲ್-ಸಿದ್ದರಾಮಯ್ಯ.

ಆರ್​ಆರ್​ ನಗರದಲ್ಲಿ ಮುನಿರತ್ನ ಅವರು 124446 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು 67405 ಮತಗಳನ್ನು ಪಡೆಯಲಷ್ಟೇ ಶಕ್ತರಾದರು. ಇನ್ನು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಕೇವಲ 10187 ಮತಗಳನ್ನಷ್ಟೇ ಪಡೆದುಕೊಂಡಿದ್ದಾರೆ. ಇದರೊಂದಿಗೆ ಮುನಿರತ್ನ ಅವರು 57672 ಮತಗಳ ಅಂತರದ ಹ್ಯಾಟ್ರಿಕ್ ಗೆಲುವು ದಾಖಲಿಸಿದರು.

ಮುಂದೆ ಓದಿ ...
  • Share this:

    ಬೆಂಗಳೂರು; ರಾಜರಾಜೇಶ್ವರ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಬರೋಬ್ಬರಿ 57 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರನ್ನು ಸೋಲಿಸಿದ್ದಾರೆ. ಮುನಿರತ್ನ ಗೆಲುವು ಅಧಿಕೃತವಾಗಿ ಘೋಷಣೆಯಾಗುತ್ತಿದ್ದಂತೆ ರಾಜ್ಯ ಬಿಜೆಪಿ ಟ್ವಿಟ್ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದೆ.


    ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯ ಅವರು ಆರ್ ಆರ್ ನಗರದಲ್ಲಿ ಬಿಜೆಪಿ ಅಲೆಯೇ ಇಲ್ಲ ಎಂದು ಹೇಳಿದ್ದರು. ಇದೀಗ ಅಲ್ಲಿ ಭರ್ಜರಿ ಅಂತರದಿಂದ ಗೆಲುವು ದಾಖಲಿಸುತ್ತಿದ್ದಂತೆ ಇದೇ ಹೇಳಿಕೆಯನ್ನು ಇಟ್ಟುಕೊಂಡು ರಾಜ್ಯ ಬಿಜೆಪಿ ಸಿದ್ದರಾಮಯ್ಯ ಅವರನ್ನು ವ್ಯಂಗ್ಯವಾಗಿ ಟೀಕಿಸಿದೆ. 


    ಸಿದ್ದರಾಮಯ್ಯ: ರಾಜರಾಜೇಶ್ವರಿನಗರದಲ್ಲಿ ಬಿಜೆಪಿಯ ಅಲೆಯೇ ಇಲ್ಲ . . . ಮತದಾರ; ಅಯ್ಯೋ ಸಿದ್ದರಾಮಯ್ಯ ನವರೇ ಇಲ್ಲಿ ನಿಮ್ಮ ಪಕ್ಷವೇ ಇಲ್ಲವಲ್ಲ. ಕಾಂಗ್ರೆಸ್ ಕಾಮಿಡಿಯನ್ ಸಿದ್ದರಾಮಯ್ಯ ಎಂದು ಟ್ವೀಟ್ ಮೂಲಕ ಗೇಲಿ ಮಾಡಿದೆ.



    ಇದನ್ನು ಓದಿ: ಶಿರಾದಲ್ಲಿ ನಮ್ಮ ಅಭ್ಯರ್ಥಿ 15 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ; ಬಿ.ವೈ.ವಿಜಯೇಂದ್ರ

    ಆರ್​ಆರ್​ ನಗರದಲ್ಲಿ ಮುನಿರತ್ನ ಅವರು 124446 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು 67405 ಮತಗಳನ್ನು ಪಡೆಯಲಷ್ಟೇ ಶಕ್ತರಾದರು. ಇನ್ನು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಕೇವಲ 10187 ಮತಗಳನ್ನಷ್ಟೇ ಪಡೆದುಕೊಂಡಿದ್ದಾರೆ. ಇದರೊಂದಿಗೆ ಮುನಿರತ್ನ ಅವರು 57672 ಮತಗಳ ಅಂತರದ ಹ್ಯಾಟ್ರಿಕ್ ಗೆಲುವು ದಾಖಲಿಸಿದರು.

    Published by:HR Ramesh
    First published: