• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಶಿಕ್ಷಕರು 5 ಸಾವಿರ ಪ್ಯಾಕೇಜ್​ ಪಡೆಯೋದು ಹೇಗೆ? ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಶಿಕ್ಷಕರು 5 ಸಾವಿರ ಪ್ಯಾಕೇಜ್​ ಪಡೆಯೋದು ಹೇಗೆ? ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಖಾಸಗಿ ಶಾಲೆ (ಸಾಂದರ್ಭಿಕ ಚಿತ್ರ)

ಖಾಸಗಿ ಶಾಲೆ (ಸಾಂದರ್ಭಿಕ ಚಿತ್ರ)

ಪ್ಯಾಕೇಜ್​ ಪರಿಹಾರವನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸುವಾಗ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಈ ದಾಖಲೆಗಳನ್ನು ಸಲ್ಲಿಸಬೇಕು.

  • Share this:

    ಬೆಂಗಳೂರು(ಜೂ.11): ಹಸನಾಗಿದ್ದ ಬದುಕುಗಳು ಕೊರೋನಾ ಬಂದ ಬಳಿಕ ಕಮರಿ ಹೋಗಿವೆ. ಈ ಮಹಾಮಾರಿ ಕೊರೋನಾ ಹಲವರ ಬದುಕನ್ನೇ ಕಿತ್ತುಕೊಂಡಿದೆ. ಎಷ್ಟೋ ಜನರ ಉದ್ಯೋಗ ಕಿತ್ತುಕೊಂಡಿದೆ. ದಿನಗೂಲಿ ಮಾಡಿ ಜೀವನ ನಡೆಸುತ್ತಿದ್ದವರ ಬದುಕು ಮೂರಾಬಟ್ಟೆಯಾಗಿದೆ. ಕೊರೋನಾ ಲಾಕ್​ಡೌನ್​ನಿಂದಾಗಿ ಹಲವರು ಕೆಲಸ ಕಳೆದುಕೊಂಡು ಜೀವನ ನಡೆಸಲು ಕಷ್ಟ ಪಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರ ಸಂಕಷ್ಟದಲ್ಲಿರುವ ಜನರಿಗೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ. ಅನುದಾನ ರಹಿತ ಶಾಲಾ ಶಿಕ್ಷಕರಿಗೂ ಸರ್ಕಾರದ ವತಿಯಿಂದ ಪರಿಹಾರ ನೀಡಲಾಗುತ್ತದೆ.


    ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೆ ತಲಾ 5 ಸಾವಿರ ರೂ. ಲಾಕ್​​​ಡೌನ್​ ಪ್ಯಾಕೇಜ್​ ಸಿಗಲಿದೆ. ಸರ್ಕಾರದ ಈ ಪರಿಹಾರ ಹಣವನ್ನು ಪಡೆಯಬೇಕಾದರೆ ಅಗತ್ಯ ದಾಖಲೆಗಳ ಜೊತೆ ಅರ್ಜಿ ಸಲ್ಲಿಸಬೇಕು. ಆಗ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಬಂದು ಬೀಳಲಿದೆ. ಪ್ಯಾಕೇಜ್​ ಪರಿಹಾರವನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸುವಾಗ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಈ ದಾಖಲೆಗಳನ್ನು ಸಲ್ಲಿಸಬೇಕು.


    ಇದನ್ನೂ ಓದಿ:Lockdown Unlock: ಮದುವೆಗೆ 40 ಜನ, ಅಂತ್ಯಕ್ರಿಯೆಗೆ 5 ಮಂದಿ; ಮುಂದುವರಿದ ಲಾಕ್​ಡೌನ್​ನಲ್ಲಿ ಏನಿದೆ? ಏನಿಲ್ಲ? ಫುಲ್ ಡೀಟೆಲ್ಸ್


    1.ಸಂಬಂಧಿಸಿದ ಶಿಕ್ಷಣ ಸಂಸ್ಥೆ ವಿತರಣೆ ಮಾಡಿದ ಗುರುತಿನ ಚೀಟಿ ಹಾಗೂ ಸಂಸ್ಥೆಯ ನೇಮಕಾತಿ ಆದೇಶದ ಪ್ರತಿ


    2. ಸಂಬಂಧಿಸಿದ ಶಾಲೆಯಿಂದ ಸೇವಾ ಪ್ರಮಾಣ ಪತ್ರ


    3. ಒಂದು ಪಾಸ್​ಪೋರ್ಟ್​ ಸೈಜಿನ ಕಲರ್ ಫೋಟೋ


    4. ರಾಷ್ಟ್ರೀಕೃತ ಬ್ಯಾಂಕ್​ ಪಾಸ್​ಬುಕ್​ನ ಪ್ರತಿ


    5. ಆಧಾರ್​ ಕಾರ್ಡ್​ ಪ್ರತಿ


    6.ಎಸ್​​ಎಟಿಎಸ್​​​ನಲ್ಲಿನ ಶಿಕ್ಷಕರ ಗುರುತಿನ ಸಂಖ್ಯೆ


    7. ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರ


    ಈ ಎಲ್ಲಾ ದಾಖಲೆಗಳ ಜೊತೆಗೆ ತಮ್ಮ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮುಖ್ಯೋಪಾಧ್ಯಾಯರ ಮೂಲಕ ಲಿಖಿತ ಪ್ರಸ್ತಾವನೆ ಸಲ್ಲಿಸಬೇಕು.


    ಇದನ್ನೂ ಓದಿ:BS Yediyurappa: ಮುಂದಿನ 2 ವರ್ಷ ನಾನೇ ಸಿಎಂ; ಎಲ್ಲಾ ವದಂತಿಗಳಿಗೆ ತೆರೆ ಎಳೆದ ಬಿ.ಎಸ್.ಯಡಿಯೂರಪ್ಪ


    ಸರ್ಕಾರ ರೈತರಿಗೆ, ಕಾರ್ಮಿಕರಿಗೆ ಸೇರಿ ಹಲವು ವಲಯಗಳಿಗೆ 2 ಹಂತದಲ್ಲಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ. ಮೊದಲ ಹಂತದಲ್ಲಿ ಹೂವು, ಹಣ್ಣು, ತರಕಾರಿ ಬೆಳೆಗಾರರಿಗೆ, ಆಟೋ, ಟ್ಯಾಕ್ಸಿ ಚಾಲಕರಿಗೆ, ಕಟ್ಟಡ ಕಾರ್ಮಿಕರಿಗೆ, ಅಸಂಘಟಿತ ಕಾರ್ಮಿಕರಿಗೆ, ರಸ್ತೆ ಬದಿ ವ್ಯಾಪಾರಸ್ಥರಿಗೆ, ಕಲಾವಿದರಿಗೆ 1250 ಕೋಟಿ ಆರ್ಥಿಕ ಪ್ಯಾಕೇಜ್​ ಘೋಷಣೆ ಮಾಡಿದೆ. 2ನೇ ಹಂತದಲ್ಲಿ 500 ಕೋಟಿ ನೆರವನ್ನು ಸರ್ಕಾರ ಘೋಷಣೆ ಮಾಡಿದ್ದು, ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೂ ಅನುದಾನ ನೀಡುವುದಾಗಿ ಸಿಎಂ ಬಿಎಸ್​ವೈ ಹೇಳಿದ್ದಾರೆ.

    Published by:Latha CG
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು