ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ಶೋಚನೀಯ ಸ್ಥಿತಿಗೆ ಕೈಗನ್ನಡಿಯಂತೆ ಮತ್ತೊಂದು ಬ್ಯಾಂಕು ನಷ್ಟದಲ್ಲಿ ಮುಳುಗಿಹೋಗುತ್ತಿದೆ. ನಗರದ ನೆಟ್ಟಕಲ್ಲಪ್ಪ ಸರ್ಕಲ್ ಬಳಿ ಮುಖ್ಯ ಕಚೇರಿ ಇರುವ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ 600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದಷ್ಟು ವಸೂಲಾತಿಯಾಗದ ಸಾಲ (ಎನ್ಪಿಎ) ಬಾಕಿ ಉಳಿದುಕೊಂಡಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕು ಈ ಸಹಕಾರಿ ಬ್ಯಾಂಕಿಗೆ ಅಂಕುಶ ಹಾಕಿದ್ದು ಆರು ತಿಂಗಳವರೆಗೆ ವಿವಿಧ ನಿರ್ಬಂಧಗಳನ್ನು ಹೇರಿದೆ. ಒಬ್ಬ ಗ್ರಾಹಕರು ಆರು ತಿಂಗಳಲ್ಲಿ 35 ಸಾವಿರ ರೂಗಿಂತ ಹೆಚ್ಚು ಹಣ ವಿತ್ಡ್ರಾ ಮಾಡುವಂತಿಲ್ಲ ಎಂದೂ ಸೂಚಿಸಿದೆ. ಇದು ಆ ಬ್ಯಾಂಕ್ನ ಗ್ರಾಹಕರಿಗೆ ಚಿಂತೆಗೀಡು ಮಾಡಿದೆ.
ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಸಂಸ್ಥೆಯು ನಗರದ ವಿವಿಧೆಡೆ 12 ಬ್ರ್ಯಾಂಚ್ಗಳನ್ನ ಹೊಂದಿದೆ. ಆಕರ್ಷಕ ಬಡ್ಡಿ ದರ ಆಫರ್ ಕೊಟ್ಟಿರುವ ಹಿನ್ನೆಲೆಯಲ್ಲಿ ಬ್ಯಾಂಕ್ನಲ್ಲಿ ಗ್ರಾಹಕರು ಇಟ್ಟಿರುವ ಠೇವಣಿ ಮೊತ್ತ ಬರೋಬ್ಬರಿ 2,400 ಕೋಟಿ ರೂ ಇದೆ. ಈ ಪೈಕಿ 1,700 ಕೋಟಿಯಷ್ಟು ಹಣವನ್ನು ಬ್ಯಾಂಕು ಸಾಲವಾಗಿ ನೀಡಿದೆ. ಆದರೆ, 600 ಕೋಟಿಗೂ ಹೆಚ್ಚು ಮೊತ್ತದ ಹಣವು ಎನ್ಪಿಎ ಆಗಿ ನಿಂತುಹೋಗಿದೆ. ಈಗ ಮಧ್ಯಪ್ರವೇಶಿಸಿರುವ ಆರ್ಬಿಐ, ಬ್ಯಾಂಕ್ ಚೇತರಿಸಿಕೊಳ್ಳುವವರೆಗೂ ತಾನು ನಿರ್ದಿಷ್ಟಪಡಿಸಿದ ನಿರ್ಬಂಧಗಳೊಂದಿಗೆ ಮಾತ್ರ ವ್ಯವಹಾರ ನಡೆಸಬೇಕೆಂದು ಸೂಚಿಸಿದೆ.
ಆರ್ಬಿಐ ನೂತನ ಆದೇಶದ ಅನ್ವಯ ಗ್ರಾಹಕರು ರೂ. 35 ಸಾವಿರ ಮಾತ್ರ ಡ್ರಾ ಮಾಡಬಹುದು. ಈ ಹಿಂದೆ ಮಹಾರಾಷ್ಟ್ರದ ಪಿಎಂಸಿ ಬ್ಯಾಂಕ್ ಮೇಲೆಯೂ ಇದೇ ರೀತಿಯ ನಿರ್ಬಂಧವನ್ನು ಆರ್ಬಿಐ ಹೇರಿತ್ತು. ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಸುಮಾರು ರೂ. 600 ಕೋಟಿಗೂ ಅಧಿಕ ಎನ್ಪಿಎ (ನಾನ್ ಪರ್ಫಾರ್ಮಿಂಗ್ ಅಸ್ಸೆಟ್) ಆಗಿರುವ ಹಿನ್ನೆಲೆಯಲ್ಲಿ ಆರ್ಬಿಐ ಈ ಆದೇಶ ಹೊರಡಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸರ್ಕಾರ ಠೇವಣಿದಾರರ ಹಿತವನ್ನು ಕಾಪಾಡಲಿದೆ ಎಂಬ ಭರವಸೆ ನೀಡಿದ್ದಾರೆ. ಠೇವಣಿದಾರು ಯಾರೂ ಭಯ ಪಡಬೇಡಿ, ಕೇಂದ್ರ ಸರ್ಕಾರ ನಿಮ್ಮ ಜೊತೆಗಿದೆ. ನಿಮ್ಮ ಹಣ ಏನೂ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸರ್ಕಾರದ್ದು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
I want to assure all depositors of Sri Guru Raghavendra Co-operative Bank to not panic.
Hon’ble Finance Minister Smt. @nsitharaman is appraised of matter & is personally monitoring the issue. She has assured Govt will protect interests of depositors. Grateful for her concern. pic.twitter.com/pmoAcUFAu7
— Tejasvi Surya (@Tejasvi_Surya) January 13, 2020
ಟ್ವಿಟ್ಟರ್ನಲ್ಲಿ ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರಿಗೆ ಭರವಸೆ ನೀಡಿರುವ ಸಂಸದ ಸೂರ್ಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೇ ಖುದ್ದಾಗಿ ಬೆಳವಣಿಗೆಗಳನ್ನು ಗಮನಿಸುತ್ತಿದ್ದಾರೆ. ಯಾರೂ ಆತಂಕ ಪಡಬೇಡಿ ಎಂದಿದ್ದಾರೆ.
ಇದನ್ನೂ ಓದಿ: ರಾಜ್ಯಕ್ಕೆ ಅಮಿತ್ ಶಾ ಆಗಮಿಸಿದಾಗಲೇ ಸಂಪುಟ ವಿಸ್ತರಣೆ ಕುರಿತು ಚರ್ಚೆ; ಸಿಎಂ ಯಡಿಯೂರಪ್ಪ
ಆರ್ಬಿಐ ಆದೇಶ ಬಂದ ಬೆನ್ನಲ್ಲೇ ಠೇವಣಿದಾರರು ಸಾವಿರಾರು ಸಂಖ್ಯೆಯಲ್ಲಿ ಬಸವನಗುಡಿಯಲ್ಲಿರುವ ಬ್ಯಾಂಕ್ ಮುಂದೆ ಜಮಾಯಿಸಿದ್ದಾರೆ. ಬಿಗಿ ಪೊಲೀಸ್ ಭದ್ರತೆ ಕೂಡ ಒದಗಿಸಲಾಗಿದ್ದು, ಪಿಎಂಸಿ ಬ್ಯಾಂಕ್ಗೆ ಆರ್ಬಿಐ ನಿರ್ಬಂಧ ಹೇರಿದಾಗ ಉಂಟಾದ ಪರಿಣಾಮವೇ ಇಲ್ಲೂ ತಲೆದೋರುವ ಸಾಧ್ಯತೆಯಿದೆ.
ಇದನ್ನೂ ಓದಿ: ಬೆಂಗಳೂರಿನ ಗುರು ರಾಘವೇಂದ್ರ ಬ್ಯಾಂಕ್ನಲ್ಲಿ 600 ಕೋಟಿಗೂ ಹೆಚ್ಚು ಎನ್ಪಿಎ; ಆರ್ಬಿಐನಿಂದ ನಿರ್ಬಂಧ; ಆತಂಕದಲ್ಲಿ ಗ್ರಾಹಕರು
ಆರ್ಬಿಐ ಆದೇಶವೇನು?:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ