• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Farmers Protest: ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತರುವ ನಾಯಕರೇ ಭಯೋತ್ಪಾದಕರು; ನಟ ಚೇತನ್ ಕಿಡಿ

Farmers Protest: ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತರುವ ನಾಯಕರೇ ಭಯೋತ್ಪಾದಕರು; ನಟ ಚೇತನ್ ಕಿಡಿ

ನಟ ಚೇತನ್.

ನಟ ಚೇತನ್.

ಇದು ಎರಡನೇ ಸ್ವಾತಂತ್ರ್ಯ ಹೋರಾಟ. ಕೇಂದ್ರ, ರಾಜ್ಯ ಸರ್ಕಾರದ ಕುತಂತ್ರವನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ರೈತ ವಿರೋಧಿ ಕಾಯ್ದೆ ಜಾರಿ ಮಾಡಿದ್ದಾರೆ ಎಂದು ನಟ ಹೋರಾಟಗಾರ ಚೇತನ್ ಕಿಡಿಕಾರಿದ್ದಾರೆ.

  • Share this:

ಬೆಂಗಳೂರು (ಮಾರ್ಚ್​ 22); "ರೈತ ಹೋರಾಟಗಾರರನ್ನು ಇಂದು ಭಯೋತ್ಪಾಕರು ಎಂದು ಹೀಯಾಳಿಸಲಾಗುತ್ತಿದೆ. ಆದರೆ, ಭಯೋತ್ಪಾದಕರು ನಾವಲ್ಲ. ಬದಲಾಗಿ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತಂದು ರೈತರನ್ನು ಶೋಷಣೆ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಗೂ ನಾಯಕರುಗಳೇ ನಿಜವಾದ ಭಯೋತ್ಪಾದಕರು" ಎಂದು ನಟ-ಹೋರಾಟಗಾರ ಚೇತನ್ ಇಂದು ಕಿಡಿಕಾರಿದ್ದಾರೆ. ದೆಹಲಿಯಲ್ಲಿ ಕಳೆದ ನಾಲ್ಕು ತಿಂಗಳಿನಿಂದ ರೈತ ಮಸೂದೆ ವಿರೋಧಿ ಹೋರಾಟ ನಡೆಯುತ್ತಿದೆ. ದೆಹಲಿಯ ಹೊರ ವಲಯದಲ್ಲಿ ರೈತ ಹೋರಾಟಗಾರರು ಬೀಡು ಬಿಟ್ಟಿದ್ದು, ಮಳೆ ಬಿಸಿಲೆನ್ನದೆ ಹೋರಾಟ ನಡೆಸುತ್ತಿದ್ದಾರೆ. ಇದೀಗ ಈ ಹೋರಾಟ ದೇಶದೆಲ್ಲೆಡೆ ವ್ಯಾಪಿಸಿದ್ದು, ಎಲ್ಲಾ ರಾಜ್ಯದಲ್ಲೂ ರೈತರು ಬೀದಿಗಿಳಿಯುತ್ತಿದ್ದಾರೆ.


ದೆಹಲಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ರಾಜ್ಯದಲ್ಲೂ ಸಹ ರೈತರು ಒಟ್ಟಾಗಿ ಕಳೆದ ಎರಡು ದಿನ ಶಿವಮೊಗ್ಗ ಮತ್ತು ಹಾವೇರಿಯಲ್ಲಿ ರೈತ ಮಹಾ ಪಂಚಾಯತ್​ ನಡೆಸಿದ್ದರು. ಈ ರೈತ ಪಂಚಾಯತ್​ನಲ್ಲಿ ಕೇಂದ್ರ ರಾಜ್ಯ ಸರ್ಕಾರಗಳ ವಿರುದ್ಧ ಗುಡುಗಿದ್ದರು. ಇಂದು ಸಹ ಎಲ್ಲಾ ರೈತರು ವಿಧಾನಸೌಧ ಚಲೋ ಹೋರಾಟಕ್ಕೆ ಕರೆ ನೀಡಿದ್ದರು.


ಈ ಹೋರಾಟದ ವೇಳೆ ಮಾತನಾಡಿರುವ ನಟ ಹೋರಾಟಗಾರ ಚೇತನ್, "ಇದು ಎರಡನೇ ಸ್ವಾತಂತ್ರ್ಯ ಹೋರಾಟ. ಕೇಂದ್ರ, ರಾಜ್ಯ ಸರ್ಕಾರದ ಕುತಂತ್ರವನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ರೈತ ವಿರೋಧಿ ಕಾಯ್ದೆ ಜಾರಿ ಮಾಡಿದ್ದಾರೆ. ರೈತರ ಪರ ಯಾರು ನಿಲ್ಲುತ್ತಾರೊ ಅಂತವರನ್ನು ಭಯೋತ್ಪಾದಕರು ಎಂದು ಹಣೆಪಟ್ಟಿ ಕಟ್ಟಲಾಗುತ್ತಿದೆ.


ಇದನ್ನೂ ಓದಿ: ಜನರು ಕೊರೋನಾ ಬಗ್ಗೆ ಜಾಗೃತರಾಗದಿದ್ದರೆ ಮೈಸೂರಿನಲ್ಲಿ ಮಿನಿ ಲಾಕ್‌ಡೌನ್ ಮಾಡಬೇಕಾಗುತ್ತದೆ : ಜಿಲ್ಲಾಡಳಿತ ಎಚ್ಚರಿಕೆ!


ಅದರೆ, ಭಯೋತ್ಪಾದಕರು ನಾವಲ್ಲ. ಬದಲಾಗಿ ಜನ ವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡುವ ಮೂಲಕ ಸಾಮಾನ್ಯ ವರ್ಗದ ಜನರನ್ನು ಶೋಷಣೆ ಮಾಡುತ್ತಿರುವ ಕೇಂದ್ರ, ರಾಜ್ಯ ಸರ್ಕಾರ ಮತ್ತು ಅದನ್ನು ಮುನ್ನಡೆಸುತ್ತಿರುವ ನಾಯಕರುಗಳೇ ನಿಜವಾದ ಭಯೋತ್ಪಾದಕರು" ಎಂದು ಕಿಡಿಕಾರಿದ್ದಾರೆ.


ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿರುದ್ಧವೂ ಕಿಡಿಕಾರಿದ ನಟ ಚೇತನ್, "ಯಡಿಯೂರಪ್ಪನವರು ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿ ಇದೀಗ ರೈತ ವಿರೋಧಿ ಕಾನೂನನ್ನು ಬೆಂಬಲಿಸುತ್ತಿದ್ದಾರೆ. ರೈತರ ಹೆಸರನ್ನು ಹೇಳಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ. ಮಣ್ಣಿನ ಮಗ ಎನ್ನುವ ಮಾಜಿ‌ ಪ್ರಧಾನಿಗೂ ಮಣ್ಣಿನ‌ ಮಕ್ಕಳ ಬಗ್ಗೆ ಅನುಕಂಪವಿಲ್ಲ. ಮತ್ತೊಂದೆಡೆ ವಿರೋಧ ಪಕ್ಷದವರು ಎಪಿಎಂಸಿ ಕಾಯ್ದೆ ಬೇಕು ಎಂದು ಹೇಳುತ್ತಾರೆ. ಈ‌ ಮೂರು ಪಕ್ಷಗಳ ಗುರಿ ಒಂದೇ, ಅದೇ ದಬ್ಬಾಳಿಕೆಯ ಗುರಿ" ಎಂದು ಎಲ್ಲಾ ಪಕ್ಷದವರನ್ನು ಹೀಗೆಳೆದಿದ್ದಾರೆ.

First published: