• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Text Book Row: ಪಠ್ಯಪುಸ್ತಕ ಪರಿಷ್ಕರಣೆ ವಿರೋಧ; ಮೇ 31ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರವೇ ಸಜ್ಜು

Text Book Row: ಪಠ್ಯಪುಸ್ತಕ ಪರಿಷ್ಕರಣೆ ವಿರೋಧ; ಮೇ 31ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರವೇ ಸಜ್ಜು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಜಾ ಮಾಡಬೇಕು ಹಾಗೂ ಪಠ್ಯವನ್ನು ಬದಲಿಸಬೇಕು ಎಂದು ಬೇಡಿಕೆಯನ್ನು ಕರವೇ ಇರಿಸಿದೆ. ಮೇ 31ರ ಪ್ರತಿಭಟನೆಗೆ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆ ಬದಲಿಸದೆ ಇದ್ದರೆ ಮುಂದಿನ ದಿನದಲ್ಲಿ ಹೋರಾಟದ ತೀವ್ರತೆ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ.

ಮುಂದೆ ಓದಿ ...
  • Share this:

ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆಗೆ (Karnataka Text Book Row) ವಿಪಕ್ಷಗಳು, ಎಡಪಂಥೀಯ ಚಿಂತರು ಮತ್ತು ಬುದ್ಧಿಜೀವಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಾಹಿತಿ ದೇವನೂರು ಮಹದೇವ (Devanuru Mahadeva) ಅವರ ತಮ್ಮ ಪಠ್ಯಕ್ಕೆ ನೀಡಿದ ಅನುಮತಿ ಹಿಂಪಡೆದುಕೊಳ್ಳುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಕರವೇ ನಾರಾಯಣಗೌಡರು (Karave Narayanagowda) ಸಹ ಟ್ವಿಟರ್ ನಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ರಚನೆಯಲ್ಲಿ ಸರ್ಕಾರ ಎಡವಿದೆ ಎಂದು ಆರೋಪಿಸಿದ್ದರು.


ಗುರುವಾರ ಎಲ್ಲಾ ಕರವೇ ಜಿಲ್ಲಾ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದ ನಾರಾಯಾಣಗೌಡರು, ಮೇ 31ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಬೆಂಗಳೂರು ಸೇರಿ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯಲಿದೆ.


ಸರ್ಕಾರಕ್ಕೆ ಮೇ 31ರ ಗಡುವು


ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಜಾ ಮಾಡಬೇಕು ಹಾಗೂ ಪಠ್ಯವನ್ನು ಬದಲಿಸಬೇಕು ಎಂದು ಬೇಡಿಕೆಯನ್ನು ಕರವೇ ಇರಿಸಿದೆ. ಮೇ 31ರ ಪ್ರತಿಭಟನೆಗೆ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆ ಬದಲಿಸದೆ ಇದ್ದರೆ ಮುಂದಿನ ದಿನದಲ್ಲಿ ಹೋರಾಟದ ತೀವ್ರತೆ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ.


ಇದನ್ನೂ ಓದಿ:  Chandra Arya: ಕೆನಡಾದಲ್ಲಿ ಕನ್ನಡದ ಕಂಪು ಹರಿಸಿದ ಚಂದ್ರ ಆರ್ಯ ಅವರ ಸರಳತೆ ಬಗ್ಗೆ ಗ್ರಾಮಸ್ಥರ ಮಾತು


ಪಠ್ಯ ಪರಿಷ್ಕರಣೆಗೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದ್ದು, ವಿವಿಧ ಸಂಘಟನೆಗಳು ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿದೆ. ಇನ್ನೂ ಈ ಪ್ರತಿಭಟನೆಗೆ ಸಾಹಿತಿಗಳು, ಚಿಂತಕರು ಹಾಗೂ ಶಿಕ್ಷಣ ತಜ್ಞರ ಹೋರಾಟಕ್ಕೆ ಕರವೇ ಸಾಥ್ ನೀಡಲಿದ್ದಾರೆ.


ವಿದ್ಯಾರ್ಥಿ ಸಂಘಟನೆಗಳಿಂದಲೂ ಪ್ರತಿಭಟನೆ


ಇತ್ತ ಪಠ್ಯ ಪರಿಷ್ಕರಣೆ ಹಿಂಪಡೆಯುವಂತೆ ವಿವಿಧ ವಿಧ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನಾ ಧರಣಿಗೆ ಕರೆ ನೀಡಿವೆ. ಮೇ 31 ರ ಪ್ರತಿಭಟನೆಯಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳು ಭಾಗಿಯಾಗಲಿವೆ.


SFI, NSUI, AISF, AISA, KVS, DSF, AIRSO, DVP, VBV, VJD ಹಾಗೂ ಬೆಂ ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಭಾಗಿಯಾಗಲಿದೆ. ವಿವಿಧ ವಿದ್ಯಾರ್ಥಿ ಸಂಘಟನೆಗಳ ಜೊತೆಗೆ ಕರವೇ ನಾರಯಣಗೌಡ ಬಣದಿಂದಲೂ ಪ್ರತಿಭಟನೆ ನಡೆಸಲಾಗುತ್ತಿದೆ.


ಹಳೆಯ ಪಠ್ಯಕ್ರಮ ಮುಂದುವರಿಸಲು ಒತ್ತಾಯ


31 ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಹೋರಾಟ ಮಾಡಲು ಕರವೇ ನಿರ್ಧಾರ ಮಾಡಿದೆ. 31 ರೊಳಗೆ ಹೊಸ ಪಠ್ಯಕ್ರಮದ ಪರಿಷ್ಕರಣ ಸಮತಿಯನ್ನ ವಜಾ ಮಾಡುವಂತೆ ಗಡುವು ನೀಡಿದೆ. ಹಳೆಯ ಪಠ್ಯಕ್ರಮವನ್ನೇ ಮುಂದುವರಿಸಬೇಕು ಎಂದು ಕರವೇ ಮನವಿ ಮಾಡಿಕೊಂಡಿದೆ.


ಕರವೇ ನಾರಾಯಣಗೌಡರು ಹೇಳಿದ್ದೇನು?


ಕರ್ನಾಟಕದ, ಕನ್ನಡದ ಕೀರ್ತಿ ಶಿಖರಗಳಲ್ಲಿ ಒಬ್ಬರಾದ ಮೇರುಸಾಹಿತಿ ದೇವನೂರು ಮಹಾದೇವ (Devanuru Mahadeva) ಅವರು ಹತ್ತನೇ ತರಗತಿಯ ಪಠ್ಯಕ್ಕೆ ನೀಡಿದ್ದ 'ಎದೆಗೆ ಬಿದ್ದ ಅಕ್ಷರ' ಲೇಖನ (Article) ಹಿಂದಕ್ಕೆ ಪಡೆದಿರುವುದನ್ನು ಕೇಳಿ ಆಘಾತವಾಯಿತು ಎಂದು ನಾರಾಯಣಗೌಡರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (CM Basavaraj Bommai) ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು‌ ಬಗೆಹರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರು (Karve Narayanagowda) ಆಗ್ರಹಿಸಿದ್ದಾರೆ. ತಮ್ಮ ಪಠ್ಯವನ್ನು ಹಿಂದಕ್ಕೆ ಪಡೆದ ಘಟನೆ ಕರ್ನಾಟಕದ (Karnataka) ಇತಿಹಾಸದಲ್ಲಿ ಮೊದಲ ಬಾರಿ ಘಟಿಸಿದೆ. ಕರ್ನಾಟಕ ಸರ್ಕಾರಕ್ಕೆ ಇದು ಶೋಭೆ ತರುವ ವಿಷಯವಲ್ಲ‌ ಎಂದು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.


ಇದನ್ನೂ ಓದಿ:  Hubballi: ಹೆಸರಿಗೆ ಹೆದ್ದಾರಿ, ಸಾವಿಗೆ ರಹದಾರಿ: 12 ವರ್ಷದಲ್ಲಿ 390 ಬಲಿ; ಇದ್ರಿಂದ ಮುಕ್ತಿ ಯಾವಾಗ?


ಸಮಿತಿ ನೇಮಕ ಮಾಡುವಾಗಲೇ ಸರ್ಕಾರ ಎಡವಿದೆ


ಪಠ್ಯಪುಸ್ತಕ ಪುನರ್ ಪರಿಶೀಲನೆಗಾಗಿ ಸಮಿತಿ ನೇಮಕ ಮಾಡಿದಾಗಲೇ ಸರ್ಕಾರ ಎಡವಿದೆ. ಸಮಿತಿಗೆ ನೇಮಕ ಮಾಡಲು ಬಲಪಂಥೀಯ ವಿದ್ವಾಂಸರು, ಶಿಕ್ಷಣ ತಜ್ಞರೇ ಬೇಕು ಎಂದಿದ್ದರೆ ಹಲವಾರು ಮಂದಿ ಸಜ್ಜನರು, ಎದೆಯಲ್ಲಿ ನಂಜು ಇಟ್ಟುಕೊಳ್ಳದೆ ಕಾರ್ಯ ನಿರ್ವಹಿಸುವವರು ಲಭ್ಯವಿದ್ದರು. ಆದರೆ ಸರ್ಕಾರ ಇಂಥವರನ್ನು ನೇಮಕ ಮಾಡದೆ ತಪ್ಪೆಸಗಿದೆ.

Published by:Mahmadrafik K
First published: