• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Farmers Protest: ರೈತ, ಸೈನಿಕನಿಗೆ ಗೌರವ ಇಲ್ಲದಿರುವ ದೇಶ, ಅದು ದೇಶವೇ ಅಲ್ಲ; ಕೇಂದ್ರದ ವಿರುದ್ಧ ರಮೇಶ್​ ಕುಮಾರ್​ ವಾಗ್ದಾಳಿ

Farmers Protest: ರೈತ, ಸೈನಿಕನಿಗೆ ಗೌರವ ಇಲ್ಲದಿರುವ ದೇಶ, ಅದು ದೇಶವೇ ಅಲ್ಲ; ಕೇಂದ್ರದ ವಿರುದ್ಧ ರಮೇಶ್​ ಕುಮಾರ್​ ವಾಗ್ದಾಳಿ

ರಮೇಶ್ ಕುಮಾರ್ (File Photo)

ರಮೇಶ್ ಕುಮಾರ್ (File Photo)

ನಮ್ಮ ರೈತರು ನಮಗಾಗಿ ಅಲ್ಲಿ ಹೋರಾಟ ಮಾಡುತ್ತಿದ್ದಾರೆ. ನಾವು ಇಲ್ಲಿ ಸುಮ್ಮನಿದ್ದೀವಿ. ನಮಗೆ ಲಜ್ಜೆ ಪಜ್ಜೆ ಏನಿಲ್ಲ. ಆದರೆ, ರೈತರ ಹೋರಾಟದ ಫಲ ಎಲ್ಲರಿಗು ಸಿಗುತ್ತದೆ. ನಾಳೆಯೊಳಗೆ ದೆಹಲಿಯ ಗಾಜೀಪುರ ಗಡಿಯಲ್ಲಿ 10 ಲಕ್ಷ ರೈತರು ಜಮಾಯಿಸಲಿದ್ದಾರೆ ಎಂದು ರಮೇಶ್​ ಕುಮಾರ್ ತಿಳಿಸಿದ್ದಾರೆ.

ಮುಂದೆ ಓದಿ ...
  • Share this:

    ಕೋಲಾರ (ಜನವರಿ 29); ಜನವರಿ 26ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದಿರುವ ಗಲಭೆಯನ್ನು ಮುಂದಿಟ್ಟು ಕೇಂದ್ರ ಸರ್ಕಾರ ಇಡೀ ರೈತ ಹೋರಾಟವನ್ನೇ ಮರೆ ಮಾಚುವ ಕೆಲಸ ಮಾಡುತ್ತಿದೆ ಎಂದು ಕೇಂದ್ರದ ವಿರುದ್ಧ ಹರಿಹಾಯ್ದಿರುವ ಮಾಜಿ ಸ್ಪೀಕರ್​ ರಮೇಶ್​ ಕುಮಾರ್​, "ರೈತರು ಹಾಗೂ ಸೈನಿಕರನ್ನು ಗೌರವಿಸದ ದೇಶ ದೇಶವೇ ಅಲ್ಲ. ಭಾರತದಲ್ಲಿ ಇದೀಗ ಇಂತಹ ಪರಿಸ್ಥಿತಿ ಬಂದೊದಗಿದೆ. ಪೋಲಿ ಪುಂಡರು ಕೆಂಪುಕೋಟೆ ಮೇಲೆ ಏನೋ ಮಾಡಿದ್ರೆ ಮಾಧ್ಯಮಗಳು ಅದನ್ನೆ ತೋರಿಸ್ತಿದ್ದಾರೆ" ಎಂದು ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ರೈತರು ಕಳೆದ ಎರಡು ತಿಂಗಳಿನಿಂದ ಶಾಂತಿಯುತ ಹೋರಾಟ ನಡೆಸಿದ್ದಾರೆ. ಆದರೆ, ಜನವರಿ 26 ರಂದು ಆಯೋಜಿಸಿದ್ದ ಟ್ರ್ಯಾಕ್ಟರ್​ ರ್‍ಯಾಲಿ ವೇಳೆ ಕೆಂಪುಕೋಟೆಯ ಬಳಿ ಅಹಿತಕರ ಘಟನೆ ನಡೆದಿತ್ತು. ಆದರೆ, ಇದೇ ವೇಳೆ ಲಕ್ಷಾಂತರ ರೈತರು ತಮಗೆ ಪೊಲೀಸರು ಗೊತ್ತುಪಡಿಸಿದ ರಸ್ತೆಯಲ್ಲಿ ಶಾಂತಿಯುತವಾಗಿ ಮೆರವಣಿಗೆ ನಡೆಸಿದ್ದಾರೆ. ಆದರೆ, ಕೆಂಪುಕೋಟೆ ಗಲಭೆಯ ಸುದ್ದಿ ಮಾತ್ರ ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿದೆ. ಇನ್ನೂ ಇದೇ ವಿಚಾರವನ್ನು ಮುಂದಿಟ್ಟು ಕೇಂದ್ರ ಸರ್ಕಾರ ಸಹ ರೈತರ ಹೋರಾಟವನ್ನು ಹಣಿಯಲು ಮುಂದಾಗಿದೆ.


    ಈ ಕುರಿತು ಕೋಲಾರದಲ್ಲಿ ಇಂದು ಮಾತನಾಡಿರುವ ಮಾಜಿ ಸ್ಪೀಕರ್​ ರಮೇಶ್ ಕುಮಾರ್​, "​ದೆಹಲಿ ಹೊರ ವಲಯದಲ್ಲಿ ಕಳೆದ ಎರಡು ತಿಂಗಳಿನಿಂದ ನಡೆಯುತ್ತಿರುವ ರೈತರ ಹೋರಾಟದಲ್ಲಿ ಲಕ್ಷಗಟ್ಟಲೆ ಜನ ಟ್ರಾಕ್ಟರ್ ನಲ್ಲಿ ಬಂದು ಹೋರಾಟದ ಭಾಗವಾಗಿದ್ದಾರೆ. ಈ ಸಂಖ್ಯೆಯ ಜನ ರೈತ ಹೋರಾಟದ ಕಣಕ್ಕೆ ಧುಮುಕಿದ್ದಾರೆ ಎಂದರೆ ಅವರ ಆಕ್ರೋಶ ಎಷ್ಟಿರಬಹುದು? ಈ ವೇಳೆ ಕೆಲ ಪೋಲಿ ಪುಂಡರು ಕೆಂಪುಕೋಟೆ ಮೇಲೆ ಏನೋ ಮಾಡಿದ್ರೆ ಮಾಧ್ಯಮಗಳು ಅದನ್ನೇ ತೋರಿಸುತ್ತಿವೆ. ಈ ಮೂಲಕ ರೈತರ ಹೋರಾಟವನ್ನು ಮರೆಮಾಚುವ ಕೆಲಸ ನಡೆಯುತ್ತಿದೆ. ರೈತ, ಸೈನಿಕನಿಗೆ ಗೌರವ ಇಲ್ಲದಿರುವ ದೇಶ, ಅದು ದೇಶವೇ ಅಲ್ಲ" ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.


    ಇದನ್ನೂ ಓದಿ: ಸುಪ್ರೀಂ ಕೋರ್ಟ್​ ವಿರುದ್ಧ ಟೀಕೆ, ನ್ಯಾಯಾಂಗ ನಿಂದನೆ ಕೇಸ್​; ಕ್ಷಮೆ ಕೇಳಲು ನಿರಾಕರಿಸಿದ ಕುನಾಲ್ ಕಮ್ರಾ


    "ನಮ್ಮ ರೈತರು ನಮಗಾಗಿ ಅಲ್ಲಿ ಹೋರಾಟ ಮಾಡುತ್ತಿದ್ದಾರೆ. ನಾವು ಇಲ್ಲಿ ಸುಮ್ಮನಿದ್ದೀವಿ. ನಮಗೆ ಲಜ್ಜೆ ಪಜ್ಜೆ ಏನಿಲ್ಲ. ಆದರೆ, ರೈತರ ಹೋರಾಟದ ಫಲ ಎಲ್ಲರಿಗು ಸಿಗುತ್ತದೆ. ನಾಳೆಯೊಳಗೆ ದೆಹಲಿಯ ಗಾಜೀಪುರ ಗಡಿಯಲ್ಲಿ 10 ಲಕ್ಷ ರೈತರು ಜಮಾಯಿಸಲಿದ್ದಾರೆ. ನಾವೇನು ಪುಕ್ದಟ್ಟೆ ಬೆಳೀತೀವಾ, ಬೆಲೆ ನಿಗದಿ ಬೇರೆಯವರು ಮಾಡಿದ್ರೆ ಹೇಗೆ. ಹೇಳೋವ್ರು ಗಂಜಲ, ಸಗಣಿ ಎತ್ತುತ್ತಾರ? ನಮ್ಮ ಹೆಣ್ಣು ಮಕ್ಕಳು ಎಲ್ಲಾ ಕೆಲಸ ಮಾಡ್ತಾರೆ. ಸ್ವಲ್ಪ ಬೆವರು ಬಂದ್ರು ಪೌಡರ್ ಹಾಕ್ಕೋಳೋವ್ರು ಇದಾರೆ. ಅಂತದ್ದರಲ್ಲಿ ರೈತರು ತಮ್ಮ ಹಕ್ಕನ್ನು ಕೇಳೋದು ತಪ್ಪಾ?" ಎಂದು ರಮೇಶ್​ ಕುಮಾರ್​ ಪ್ರಶ್ನಿಸಿದ್ದಾರೆ.


    ಇದೇ ಸಂದರ್ಭದಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯದ ಕುರಿತು ಅಪಹಾಸ್ಯ ಮಾಡಿರುವ ರಮೇಶ್​ ಕುಮಾರ್​, "ಅಯೋಧ್ಯೆಯಲ್ಲಿ ರಾಮನ ಗುಡಿ ಕಟ್ಟಿದ್ರೆ ಎಲ್ಲಾ ಕ್ಲೋಸ್ ಆಗಲಿದೆ, ಆ ನಂತರ ಜನರಿಗೆ ಸಮಸ್ಯೆನೇ ಬರಲ್ಲ. ನಾವೆಲ್ಲ ಇಲ್ಲಿ ರಾಮ ರಾಮ ಅಂತ ತಾಳ ಹಾಕ್ಕೊಂಡು ಭಜನೆ ಮಾಡಬೇಕು. ಉಪವಾಸ ಇರೋರಿಗೆ ಊಟ ಬೇಡ, ಇಂತಹ ಜನ ದೇಶ ಆಳೋಕೆ ಬಂದಿದಾರೆ. ಸಾಯೋವಾಗ ಮಾನ ಮರ್ಯಾದೆಯಿಂದ ಸಾಯಬೇಕೆಂದು ನಾಮ ಬದುಕಿದ್ದೇನೆ. ಸಿದ್ದರಾಮಯ್ಯ ಅವ್ರ ಕಾಲದಲ್ಲಿ ಆದ ಕೆಲಸಗಳನ್ನೆಲ್ಲಾ ಈಗ ಹೋಗುತ್ತಿದೆ. ಕೃಷಿಹೊಂಡ ಹೋಯ್ತು, ಕುರಿ ಸತ್ತರೆ ಕಾಸಿಲ್ಲ, ಅಕ್ಕಿ ಕಡಿಮೆ ಆಯ್ತು" ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    Published by:MAshok Kumar
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು