• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka CM Race: ದೆಹಲಿಗೆ ಹೊರಡುವ ಮುನ್ನ ಸಿದ್ದರಾಮಯ್ಯಗೆ ಡಿಕೆಶಿ ಟಾಂಗ್ ಕೊಟ್ಟಿದ್ದು ಹೀಗೆ

Karnataka CM Race: ದೆಹಲಿಗೆ ಹೊರಡುವ ಮುನ್ನ ಸಿದ್ದರಾಮಯ್ಯಗೆ ಡಿಕೆಶಿ ಟಾಂಗ್ ಕೊಟ್ಟಿದ್ದು ಹೀಗೆ

ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

DK Shivakumar Vs Siddaramaiah: ಚುನಾವಣೆಯಲ್ಲಿ ನನ್ನ ಡ್ಯೂಟಿ ಮಾಡಿದ್ದೇನೆ. ನೀವು ಒಬ್ಬರೇ ಬನ್ನಿ ಅಂತ ಹೇಳಿದ್ದು, ಒಬ್ಬನೇ ಹೋಗುತ್ತಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟರು.

  • News18 Kannada
  • 5-MIN READ
  • Last Updated :
  • Karnataka, India
  • Share this:

ಬೆಂಗಳೂರು: ಹೈಕಮಾಂಡ್(Congress High Command) ಬುಲಾವ್ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (KPCC President DK Shivakumar) ದೆಹಲಿಗೆ ಹೊರಟಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ನಾನು ದೆಹಲಿಗೆ ಹೋಗ್ತಿದ್ದೀನಿ. ದೆಹಲಿಗೆ ಬರುವಂತೆ ಕಾಂಗ್ರೆಸ್ ನಾಯಕರು (Congress Leaders) ಸೂಚನೆ ಕೊಟ್ಟಿದ್ದಾರೆ. ಈಗ ನನ್ನ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷ ನಮ್ಮ ಮನೆ, ಸರ್ವ ಜನಾಂಗದ ಶಾಂತಿಯ ತೋಟ. ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ. ನಾನು ನನ್ನ ದೇವರನ್ನು ಭೇಟಿ ಮಾಡಲು ದೇವಾಲಯಕ್ಕೆ ಹೋಗುತ್ತಿದ್ದೇನೆ ಎಂದರು.


ಚುನಾವಣೆಯಲ್ಲಿ ನನ್ನ ಡ್ಯೂಟಿ ಮಾಡಿದ್ದೇನೆ. ನೀವು ಒಬ್ಬರೇ ಬನ್ನಿ ಅಂತ ಹೇಳಿದ್ದು, ಒಬ್ಬನೇ ಹೋಗುತ್ತಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟರು.


ಸೋಮವಾರ ತಮ್ಮ ಬೆಂಬಲಿಗರ ಜೊತೆಯಲ್ಲಿ ಸಿದ್ದರಾಮಯ್ಯನವರು ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದರು. ಹೀಗಾಗಿ ಇಂದು ದೆಹಲಿಗೆ ತೆರಳುವ ಮುನ್ನ ನಾನು ಒಬ್ಬನೇ ಹೋಗುತ್ತಿದ್ದೇನೆ ಎಂದು ಹೇಳಿ ಟಾಂಗ್ ನೀಡಿದರು.




ಶಾಂತಿನಗರ ಶಾಸಕ ಎನ್​ಎ ಹ್ಯಾರಿಸ್ ಸಹ ಇಂದು ದೆಹಲಿಗೆ ತೆರಳುತ್ತಿದ್ದಾರೆ.


ಇದನ್ನೂ ಓದಿ:  Karnataka CM: ಹೈಕಮಾಂಡ್​​ಗೆ ‘ಡಿಕೆ’ ಕಂಡೀಷನ್ಸ್​; ಸಿದ್ದರಾಮಯ್ಯಗೆ ಸಾಥ್​ ಕೊಟ್ಟವರಿಗೆ ಶಾಕ್ ಕೊಡಲು ‘ಕನಕಪುರ ಬಂಡೆ’ ರಣತಂತ್ರ!


ಡಿಸಿಎಂ ಸ್ಥಾನಕ್ಕಾಗಿ ಪೈಪೋಟಿ


ತಮ್ಮನ್ನೂ ಉಪಮುಖ್ಯಮಂತ್ರಿ ಮಾಡಿ ಅನ್ನೋ ಕೂಗು ಎದ್ದಿದೆ. ಅನೇಕ ಡಿಸಿಎಂ ಆಕಾಂಕ್ಷಿಗಳು ನೇರವಾಗಿ ಕೇಳದೇ ತಮ್ಮದೇ ಸಮುದಾಯದವರನ್ನು ಮುಂದೆಬಿಟ್ಟು ಹೇಳಿಸ್ತಿದ್ದಾರೆ. ವಿವಿಧ ಸ್ವಾಮೀಜಿಗಳು (Swamiji) ತಮ್ಮ ಸಮುದಾಯದ ನಾಯಕನಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಮೇಲೆ ಒತ್ತಡ ಹಾಕುತ್ತಿದ್ದಾರೆ.

top videos
    First published: