• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಸಿಎಂ ಬಿಎಸ್​ ಯಡಿಯೂರಪ್ಪ ಸಚಿವ ಸಂಪುಟ ಸೇರ್ಪಡೆಯಾಗುವ ನೂತನ ಮಂತ್ರಿಗಳು ಇವರೇ?

ಸಿಎಂ ಬಿಎಸ್​ ಯಡಿಯೂರಪ್ಪ ಸಚಿವ ಸಂಪುಟ ಸೇರ್ಪಡೆಯಾಗುವ ನೂತನ ಮಂತ್ರಿಗಳು ಇವರೇ?

ಸಿಎಂ ಬಿಎಸ್​ ಯಡಿಯೂರಪ್ಪ

ಸಿಎಂ ಬಿಎಸ್​ ಯಡಿಯೂರಪ್ಪ

ಇನ್ನು ಅಬಕಾರಿ ಸಚಿವ ಆರ್ ನಾಗೇಶ್ ಅವರು ಸಚಿವ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಆರ್ ನಾಗೇಶ್ ಅವರನ್ನ ಕೈಬಿಡಲಾಗುವ ಬಗ್ಗೆ ನಿನ್ನೆಯೇ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇವತ್ತು ಮುಖ್ಯಮಂತ್ರಿಗಳನ್ನ ಭೇಟಿಯಾಗಿ ಕೆಲ ನಿಮಿಷಗಳ ಕಾಲ ಮಾತನಾಡಿದ್ದರು. ಸಿಎಂ ಭೇಟಿ ಮಾಡಿ ಹೊರಬಂದ ನಾಗೇಶ್ ಮೊಗದಲ್ಲಿ ಕೋಪದ ಭಾವನೆ ನಿಚ್ಚಳವಾಗಿ ಕಾಣಿಸಿದ್ದು, ಅವರನ್ನು ಸಂಪುಟದಿಂದ ಕೈಬಿಡುವ ಸುಳಿವು ಸಿಕ್ಕಂತಿದೆ.

ಮುಂದೆ ಓದಿ ...
  • Share this:

ಬೆಂಗಳೂರು; ಬಹುನಿರೀಕ್ಷೆಯ ಸಚಿವ ಸಂಪುಟ ವಿಸ್ತರಣೆ ಆಗಿದ್ದು, ನಾಳೆ ಮಧ್ಯಾಹ್ನ 3.55ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಏಳು ಮಂದಿ ಶಾಸಕರು ಸಿಎಂ ಬಿಎಸ್​ ಯಡಿಯೂರಪ್ಪ ಅವರ ಸಚಿವ ಸಂಪುಟ ಸೇರಲಿದ್ದಾರೆ. ಆದರೆ ಯಾರೆಲ್ಲಾ ಸಂಪುಟ ಸೇರಲಿದ್ದಾರೆ ಎಂಬ ಕುತೂಹಲ ಸಾರ್ವಜನಿಕರು ಸೇರಿದಂತೆ ಬಿಜೆಪಿ ನಾಯಕರಲ್ಲಿಯೂ ಮೂಡಿದೆ. ಕಾರಣ ನೂತನ ಸಚಿವರ ಪಟ್ಟಿಯ ಗೌಪತ್ಯೆಯನ್ನು ಸಿಎಂ ಬಿಎಸ್​ ಯಡಿಯೂರಪ್ಪ ಅವರು ಕಾಯ್ದುಕೊಂಡಿದ್ದಾರೆ.


ಅಲ್ಲದೇ , ನೂತನ ಸಚಿವರಿಗೆ ತಾವೇ ಖುದ್ದು ಕರೆ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸುವುದಾಗಿ ತಿಳಿಸಿದ್ದಾರೆ. ಈ ನಡುವೆ ಮಾತನಾಡಿರುವ ಅವರು, ನಾಳೆ ಸಚಿವರಾಗಿ 7ರಿಂದ 8 ಶಾಸಕರ ಪದಗ್ರಹಣ  ಮಾಡಲಿದ್ದಾರೆ. ಅವರಿಗೆಲ್ಲಾ ನಾಳೆ ರಾಜಭವನಕ್ಕೆ ಬರಲು ಹೇಳಿದ್ದೇನೆ. ನಾಳೆ 3.50ಕ್ಕೆ ರಾಜಭವನದ ಗಾಜಿನ ಅರಮನೆಯಲ್ಲಿ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ ಎಂದು ತಿಳಿಸಿದ್ದಾರೆ.


ಇದನ್ನು ಓದಿ: ಮೂರನೇ ಬಾರಿಗೆ ಕತ್ತಿ ಕೈ ಹಿಡಿದ ಸಿಎಂ ಬಿಎಸ್​ವೈ; ಶಾಸಕ ಉಮೇಶ್ ಕತ್ತಿಗೆ ಮಂತ್ರಿಗಿರಿ ಪಕ್ಕಾ?


ಅದರಂತೆ ನ್ಯೂಸ್ 18 ಕನ್ನಡಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಈ ಏಳು ಜನರು ಸಚಿವರಾಗುವುದು ಬಹುತೇಕ ಖಚಿತ ಆಗಿದೆ.

top videos


    1. ಉಮೇಶ್ ಕತ್ತಿ
    2. ಮುರುಗೇಶ್ ನಿರಾಣಿ
    3. ಅರವಿಂದ ಲಿಂಬಾವಳಿ
    4. ಎಸ್ ಅಂಗಾರ
    5. ಆರ್ ಶಂಕರ್
    6. ಎಂಟಿಬಿ ನಾಗರಾಜ್
    7. ಸಿಪಿ ಯೋಗೇಶ್ವರ್


    ಈ 7 ಜನ ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಂಪುಟಕ್ಕೆ ಸೇರ್ಪಡೆ ಆಗೋದು ಖಚಿತ ಆಗಿದೆ. ಇನ್ನು ಅಬಕಾರಿ ಸಚಿವ ಆರ್ ನಾಗೇಶ್ ಅವರು ಸಚಿವ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಆರ್ ನಾಗೇಶ್ ಅವರನ್ನ ಕೈಬಿಡಲಾಗುವ ಬಗ್ಗೆ ನಿನ್ನೆಯೇ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇವತ್ತು ಮುಖ್ಯಮಂತ್ರಿಗಳನ್ನ ಭೇಟಿಯಾಗಿ ಕೆಲ ನಿಮಿಷಗಳ ಕಾಲ ಮಾತನಾಡಿದ್ದರು. ಸಿಎಂ ಭೇಟಿ ಮಾಡಿ ಹೊರಬಂದ ನಾಗೇಶ್ ಮೊಗದಲ್ಲಿ ಕೋಪದ ಭಾವನೆ ನಿಚ್ಚಳವಾಗಿ ಕಾಣಿಸಿದ್ದು, ಅವರನ್ನು ಸಂಪುಟದಿಂದ ಕೈಬಿಡುವ ಸುಳಿವು ಸಿಕ್ಕಂತಿದೆ.

    First published: