Tumkur: ಶಿರಾ ಬಳಿ ಭೀಕರ ಅಪಘಾತ; ಮದುವೆ ದಿಬ್ಬಣದ ಬಸ್ ಉರುಳಿ ಮೂವರು ಸಾವು

ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು

ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು

Crime News: ಶಿರಾದ ಮಾಳಗಟ್ಟಿ ಬಳಿಯ ಮೇಕೆರಹಳ್ಳಿ ಕ್ರಾಸ್ ಬಳಿ ನಿನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ಬಸ್ ಕೆಳಗುರುಳಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

  • Share this:

    ತುಮಕೂರು (ಫೆ. 19): ತುಮಕೂರು ಜಿಲ್ಲೆಯ ಶಿರಾದ ಮಾಳಗಟ್ಟಿಯಲ್ಲಿ ನಿನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣವನ್ನು ಹೊತ್ತೊಯ್ಯುತ್ತಿದ್ದ ಬಸ್ ಕಂದಕಕ್ಕೆ ಉರುಳಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಶಿರಾದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.


    ಕೊರಟಗೆರೆ ತಾಲೂಕಿನ ಬೆಟ್ಟಶಮ್ಮನಹಳ್ಳಿಯಲ್ಲಿ ಮದುವೆ ಮುಗಿಸಿದ ಸಂಬಂಧಿಕರು ಬಂಗಾರಹಟ್ಟಿಯಲ್ಲಿ ನಡೆಯುವ ರಿಸೆಪ್ಷನ್​ಗೆ ಬಸ್​ನಲ್ಲಿ ತೆರಳುತ್ತಿದ್ದರು. 40ರಿಂದ 50 ಜನರು ಇದ್ದ ಈ ಬಸ್​ ಮೇಕೆರಹಳ್ಳಿ ಕ್ರಾಸ್​ ಬಳಿ ಕಂದಕಕ್ಕೆ ಉರುಳಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದವರಿಗೆ ಗಾಯಗಳಾಗಿವೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚು ಸಾಧ್ಯತೆ ಇದೆ.


    Three People Dead after Wedding Bus Accident near Sira Tumakuru.
    ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು


    ಮದುವೆ ದಿಬ್ಬಣದ ಬಸ್ ಅಪಘಾತವಾಗಿದ್ದರಿಂದ ಮದುವೆಗೆ ಹೊರಟವರು ಮಸಣ ಸೇರಿದ್ದಾರೆ. ಮೇಕೆರಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಕೆಳಗುರುಳಿದೆ. 20 ಜನಕ್ಕೂ ಅಧಿಕ ಜನರಿಗೆ ಕೈ, ಕಾಲು ಮುರಿದಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಿರಾ ಸರ್ಕಾರಿ ಆಸ್ಪತ್ರೆಗೆ ಮೃತ ದೇಹಗಳನ್ನು ರವಾನೆ ಮಾಡಲಾಗಿದೆ. ಗಾಯಾಳುಗಳನ್ನು ಕೂಡ ಅದೇ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.


    ಮೃತಪಟ್ಟವರನ್ನು ಕಿಟ್ಟಪ್ಪ ಹಾಗೂ ಭಾಗ್ಯಮ್ಮ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈ ದುರಂತಕ್ಕೆ ರಸ್ತೆ ಕಾಮಗಾರಿಯೇ ಕಾರಣ ಎನ್ನಲಾಗಿದೆ. ಮೇಕೆರಹಳ್ಳಿ ಕ್ರಾಸ್​ ಬಳಿ ನಾಲ್ಕೈದು ವರ್ಷಗಳಿಂದ ರಸ್ತೆ ಕಾಮಗಾರಿ ನೆನೆಗುದಿಗೆ ಬಿದ್ದಿದೆ.

    Published by:Sushma Chakre
    First published: