ಬೆಳಗಾವಿ(ಸೆಪ್ಟೆಂಬರ್ 8): ಉತ್ತರ ಕರ್ನಾಟಕದ ಬಹುದಿನಗಳ ಕನಸಿನ ಯೋಜನೆ ಇದೀಗ ಸಾಕಾರಗೊಳ್ಳುವ ಕಾಲ ಬಂದಿದೆ. ಬೆಳಗಾವಿ- ಧಾರವಾಡ ನಡುವಿನ ರೈಲು ಮಾರ್ಗದ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಕೇಂದ್ರ ರೈಲ್ವೆ ಸಚಿವ ಸುರೇಶ ಅಂಗಡಿ ಸುದ್ದಿಗೋಷ್ಠಿ ನಡೆಸಿ ಈ ವಿಚಾರವನ್ನು ಹೇಳಿದರು. ಸದ್ಯ ಬೆಳಗಾವಿಯಿಂದ ಧಾರವಾಡಕ್ಕೆ ರೈಲು ಮಾರ್ಗದಿಂದ ಹೋಗುವುದು ದೂರದ ಪ್ರಯಾಣವಾಗಿದೆ. ಬೆಳಗಾವಿಯಿಂದ ಖಾನಾಪುರ, ಲೋಂಡಾ ಮಾರ್ಗವಾಗಿ ಧಾರವಾಡಕ್ಕೆ ಹೋಗಬೇಕು. ಬೆಳಗಾವಿಯಿಂದ ಕಿತ್ತೂರು ಮಾರ್ಗವಾಗಿ ಧಾರವಾಡಕ್ಕೆ ರೈಲು ಸಂಪರ್ಕ ಕಲ್ಪಿಸಬೇಕು ಎನ್ನುವುದು ಬಹುದಿನಗಳ ಬೇಡಿಕೆಯಾಗಿದೆ. ಈ ಬಗ್ಗೆ ಹಿಂದೆ ಅನೇಕ ಸರ್ವೆಗಳು ನಡೆದಿದ್ದವು. ಆದ ಯಾವುದೇ ಪ್ರಯೋಜವಾಗಿರಲಿಲ್ಲ. ಇದೀಗ ಸಚಿವ ಸುರೇಶ ಅಂಗಡಿ ಯೋಜನೆ ಜಾರಿ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ.
ಸದ್ಯದ ಬೆಳಗಾವಿ- ಧಾರವಾಡ ರೈಲು ಮಾರ್ಗಕ್ಕೆ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. 73 ಕಿ.ಮೀ ಉದ್ದದ ಯೋಜನಾ ವರದಿಗೆ ಹಸಿರು ನಿಶಾನೆ ತೋರಿಸಿದ್ದು, ಈ ಬಗ್ಗೆ ಲೋಕಸಭಾ ಅಧಿವೇಶನ ಮುಗಿದ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ.
ನಿಮ್ಮ ಕಣ್ಣಿನ ಆರೋಗ್ಯ ಉತ್ತಮಗೊಳ್ಳಬೇಕೇ? ಹಾಗಿದ್ರೆ ಹೀಗೆ ಮಾಡಿ
927.40 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಅಸ್ತು ಎಂದಿದ್ದು, ಭೂಸ್ವಾಧೀನ ಪ್ರಕ್ರಿಯೆ ಬಳಿಕ ಕಾಮಗಾರಿ ಆರಂಭವಾಗಲಿದೆ. ಇದಕ್ಕಾಗಿ ಅಧಿಕಾರಿಗಳ ಸಭೆಯಲ್ಲಿ ರೈತರ ಜಮೀನುಗಳ ಭೂಸ್ವಾಧೀನ ಪ್ರಕ್ರಿಯೆ ಬಗ್ಗೆ ಮಹತ್ವದ ಚರ್ಚೆ ನಡೆಯಬೇಕಿದೆ. ಯೋಜನೆಯಿಂದ ಬೆಳಗಾವಿ- ಧಾರವಾಡ ಭಾಗಕ್ಕೆ ಹೆಚ್ಚಿನ ಅನಕೂಲವಾಗಲಿದ್ದು, ವ್ಯಾಪಾರ, ವಹಿವಾಟು ನಡೆಸಲು ಹೆಚ್ಚಿನ ಅನುಕೂಲವಾಗಲಿದೆ.
ಬೆಳಗಾವಿ- ಧಾರವಾಡ ನಡುವೆ ಒಟ್ಟು 11 ರೈಲು ನಿಲ್ದಾಣಗಳು ಬರಲಿವೆ. ಬೆಳಗಾವಿ, ದೇಸೂರು, ಕೆ ಕೆ ಕೊಪ್ಪ, ಹಿರೇಬಾಗೇವಾಡಿ, ಎಂ ಕೆ ಹುಬ್ಬಳ್ಳಿ, ಹುಲಿಕಟ್ಟಿ, ಕಿತ್ತೂರು, ತೇಗೂರು, ಮಮ್ಮಿಗುಟ್ಟಿ, ಕ್ಯಾರಕೊಪ್ಪಯಿಂದ ಧಾರವಾಡಕ್ಕೆ ತಲುಪಿದೆ. ರೈಲು ಮಾರ್ಗ ನಿರ್ಮಾಣಕ್ಕೆ ಬೇಕಾಗುವ ಭೂಮಿಯನ್ನು ರಾಜ್ಯ ಸರ್ಕಾರ ಉಚಿತವಾಗಿ ನೀಡಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ