ಬೆಂಗಳೂರು (ಮೇ 9): ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತ ಸಾಕಷ್ಟು ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿವೆ. ಅವುಗಳ ಸ್ವಚ್ಛತಾ ಕಾರ್ಯಕ್ಕೆ ಕೇಂದ್ರ ಸರ್ಕಾರಕ್ಕೆ ಮುಂದಾಗಿದೆ. 2015ರಲ್ಲಿ ತೇಜಸ್ವಿ ಸೂರ್ಯ ಮಾಡಿರುವ ಟ್ವೀಟ್ ಸೇರಿ ಒಟ್ಟು 121 ಪೋಸ್ಟ್ಗಳನ್ನು ಅಳಿಸಿ ಹಾಕುವಂತೆ ಟ್ವಿಟ್ಟರ್ ಬಳಿ ಕೇಂದ್ರ ಮನವಿ ಮಾಡಿದೆ.
2015ರಲ್ಲಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತೇಜಸ್ವಿ ಸೂರ್ಯ ಪೋಸ್ಟ್ ಒಂದನ್ನು ಮಾಡಿದ್ದರು. ಅದರಲ್ಲಿ, “ಭಯೋತ್ಪಾದನೆಗೆ ಧರ್ಮವಿಲ್ಲ. ಆದರೆ, ಭಯೋತ್ಪಾದಕರಿಗೆ ಧರ್ಮ ಇದ್ದೇ ಇದೆ. ಬಹುತೇಕ ಪ್ರಕರಣಗಳಲ್ಲಿ ಅವರು ಮುಸ್ಲೀಮರೇ ಆಗಿದ್ದಾರೆ,” ಎಂದು ಹೇಳಿದ್ದರು. ತೇಜಸ್ವಿ ಸೂರ್ಯ ಅವರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು.
ಈ ಟ್ವೀಟ್ ಡಿಲೀಟ್ ಮಾಡುವಂತೆ ಸಾಕಷ್ಟು ಜನರು ಆಗ್ರಹಿಸಿದ್ದರು. ಆದಾಗ್ಯೂ ತೇಜಸ್ವಿ ಸೂರ್ಯ ಅವರು ಟ್ವೀಟ್ ಅಳಿಸಿ ಹಾಕಿರಲಿಲ್ಲ. ಆದರೆ ಈಗ ಈ ಪೋಸ್ಟ್ ಬ್ಲಾಕ್ ಮಾಡುವಂತೆ ಕೇಂದ್ರ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ಇಲಾಖೆ ಟ್ವಿಟ್ಟರ್ ಬಳಿ ಕೋರಿದೆ ಎನ್ನಲಾಗಿದೆ.
ಇದನ್ನೂ ಓದಿ: ಅರಬ್ ಮಹಿಳೆಯರ ವಿರುದ್ಧ ಅಸಭ್ಯ ಹೇಳಿಕೆ; ತೇಜಸ್ವಿ ಸೂರ್ಯ ಹಳೇ ಟ್ವೀಟ್ಗೆ ಛೀಮಾರಿ
2015ರಲ್ಲಿ ಮತ್ತೊಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, 'ಅರಬ್ ರಾಷ್ಟ್ರಗಳ ಶೇ. 95ರಷ್ಟು ಮಹಿಳೆಯರು ನೂರಾರು ವರ್ಷಗಳಿಂದ ಲೈಂಗಿಕವಾಗಿ ಉದ್ರೇಕಗೊಳ್ಳುವುದನ್ನೇ ಮರೆತಿದ್ದಾರೆ. ಅಲ್ಲಿನ ಪ್ರತಿಯೊಬ್ಬ ತಾಯಿಯೂ ಯಾಂತ್ರಿಕವಾದ ಲೈಂಗಿಕ ಕ್ರಿಯೆಯಿಂದ ಮಕ್ಕಳನ್ನು ಹೆತ್ತಿದ್ದಾಳೆಯೇ ವಿನಃ ಪ್ರೀತಿಯಿಂದಲ್ಲ' ಎಂದಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ನಂತರ ಈ ಟ್ವೀಟ್ ಅನ್ನು ತೆಗೆದು ಹಾಕಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ