ಬೆಂಗಳೂರು(ಜ.11): ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದಾಗ ಕುಸಿದು ಬಿದ್ದಿದ್ದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ (Veera Mahanta shivacharya Swamiji) ಲಿಂಗೈಕ್ಯರಾಗಿದ್ದಾರೆ. ಹೃದಯಾಘಾತಕ್ಕೀಡಾಗಿದ್ದ (Heart Attack) ಸ್ವಾಮೀಜಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ದಾರಿ ಮಧ್ಯೆ ಅವರು ಲಿಂಗೈಕ್ಯರಾಗಿದ್ದಾರೆಂದು ವರದಿಗಳು ಉಲ್ಲೇಖಿಸಿವೆ.
ಹೌದು ಬೆಂಗಳೂರಿನಿಂದ ಯಾದಗಿರಿಗೆ ತೆರಳಲು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಹೃದಯಾಘಾತಕ್ಕೀಡಾಗಿ ಏಕಾಏಕಿ ಕುಸಿದು ಬಿದ್ದಿದ್ದರು. ಈ ವೇಳೆ ಸ್ವಾಮೀಜಿಗೆ ಅವರೊಂದಿಗಿದ್ದ ಭಕ್ತರು ಅವರನ್ನು ಬದುಕುಳಿಸಲು ಯತ್ನಿಸಿದ್ದರು. ಪ್ರಥಮ ಚಿಕಿತ್ಸೆ ಹಾಗೂ ಸಿಪಿಆರ್ ನೀಡಿ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ದಾರಿ ಮಧ್ಯೆ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: Bandemutt Swamy Case: ಬಂಡೇಮಠ ಸ್ವಾಮಿ ಆತ್ಮಹತ್ಯೆ ಕೇಸ್; ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ ಅರೆಸ್ಟ್
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ಮುಂದಿನ ತಿಂಗಳಲ್ಲಿ ತಮ್ಮ 25 ನೇ ಪಟ್ಟಾಧಿಕಾರ ಮಹೋತ್ಸವ ಆಯೋಜನೆ ಮಾಡಿದ್ದರು/ ಇದೇ ಕಾರ್ಯಕ್ರಮಕ್ಕೆ ಬಿ ವೈ ವಿಜಯೇಂದ್ರ- ಸೇರಿ ಹಲವು ಗಣ್ಯರನ್ನು ಆಹ್ವಾನಿಸಲು ಅವರು ಬೆಂಗಳೂರಿಗೆ ಆಗಮಿಸಿದ್ದರು. ಆಹ್ವಾನ ನೀಡುವ ಕಾರ್ಯ ಮುಗಿಸಿ ಮರಳಿ ಯಾದಗಿರಿಗೆ ತೆರಳು ಸಜ್ಜಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ