• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Janardhan Reddy: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಟಿಕೆಟ್ ಬೇಕಾ? ಹಾಗಿದ್ರೆ ಇಷ್ಟು ಮಾಡಿ ಸಾಕು

Janardhan Reddy: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಟಿಕೆಟ್ ಬೇಕಾ? ಹಾಗಿದ್ರೆ ಇಷ್ಟು ಮಾಡಿ ಸಾಕು

ಜನಾರ್ದನ ರೆಡ್ಡಿ, ಮಾಜಿ ಸಚಿವ

ಜನಾರ್ದನ ರೆಡ್ಡಿ, ಮಾಜಿ ಸಚಿವ

ದಯವಿಟ್ಟು ಟಿಕೆಟ್ ಆಕಾಂಕ್ಷಿಗಳು ಕೆಳಗಿನ ಮೇಲ್ ಐಡಿಗೆ ತಮ್ಮ ವಿವರಗಳನ್ನು ಕಳುಹಿಸಿರಿ. ನಾನು ಈಗಾಗಲೇ ಕ್ಷೇತ್ರಗಳ ಸಮೀಕ್ಷೆಯನ್ನು ಮಾಡುತ್ತಿದ್ದೇನೆ. ವರದಿಯ ಆಧಾರದ ಮೇಲೆ ಆಯಾ ಕ್ಷೇತ್ರಗಳಲ್ಲಿ ಸ್ಪರ್ಧೆ ಬಗ್ಗೆ ನಿರ್ಧರಿಸಿ ನಿಮ್ಮನ್ನು ಕರೆದು ಚರ್ಚಿಸುತ್ತೇನೆ ಅನ್ಯತಾ ಭಾವಿಸಬೇಡಿ ಎಂದು ಜನಾರ್ದನ ರೆಡ್ಡಿ ಕೇಳಿಕೊಂಡಿದ್ದಾರೆ.

ಮುಂದೆ ಓದಿ ...
  • News18 Kannada
  • 5-MIN READ
  • Last Updated :
  • Karnataka, India
  • Share this:

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ  (Former Minister Janardhan Reddy) ಚುನಾವಣೆಗೆ ಸಿದ್ಧವಾಗುತ್ತಿದ್ದು, ಮೊದಲ ಹಂತದಲ್ಲಿ ಸ್ಥಳೀಯ ನಾಯಕರನ್ನು (Local Leaders) ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದತ್ತ (Kalyana Rajya Pragati Paksha) ಸಳೆಯುತ್ತಿದ್ದಾರೆ. ಗಂಗಾವತಿಯಿಂದ (Gangavati) ಜನಾರ್ದನ ರೆಡ್ಡಿ ಮತ್ತು ಬಳ್ಳಾರಿ ನಗರ (Bellary City) ಕ್ಷೇತ್ರದಿಂದ ಅರುಣಾ ಲಕ್ಷ್ಮಿ (Aruna Laxmi) ಸ್ಪರ್ಧೆ ಮಾಡೋದು ಖಚಿತವಾಗಿದೆ. ಈಗಾಗಲೇ ಮೊದಲ ಹಂತವಾಗಿ ಐದು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಜನಾರ್ದನ ರೆಡ್ಡಿ ಘೋಷಣೆ ಮಾಡಿದ್ದಾರೆ. ಸಿರಗುಪ್ಪ, ಕನಕಗಿರಿ, ನಾಗಠಾಣ, ಸಿಂಧನೂರು ಮತ್ತು ಹಿರಿಯೂರು ವಿಧಾನಸಭಾ ಕ್ಷೇತ್ರಗಳಿಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಇಂದು ಟ್ವೀಟ್ ಮಾಡಿರುವ ಜನಾರ್ದನ ರೆಡ್ಡಿ ಟಿಕೆಟ್​ಗಾಗಿ ಮನೆಗೆ ಬರೋದು ಬೇಡ ಎಂದಿದ್ದಾರೆ.


ಜನಾರ್ದನ ರೆಡ್ಡಿ ಟ್ವೀಟ್


ಆತ್ಮೀಯರೇ ಕಳೆದ ಡಿಸೆಂಬರ್ 25ರಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಘೋಷಣೆಯಾದ ಮೇಲೆ ನಾಡಿನ ಎಲ್ಲೆಡೆ ಸಿಗುತ್ತಿರುವ ಅಭೂತಪೂರ್ವ ಬೆಂಬಲಕ್ಕೆ ನಾನು ಚಿರಋಣಿಯಾಗಿದ್ದೇನೆ. ಕಲ್ಯಾಣ ರಾಜ್ಯದ ಹಲವಾರು ಕ್ಷೇತ್ರಗಳಿಂದ ಪಕ್ಷದ ಟಿಕೆಟ್ ಆಕಾಂಕ್ಷಿಗಳು ತಮ್ಮ ನೂರಾರು ಅಭಿಮಾನಿಗಳೊಂದಿಗೆ ದಿನನಿತ್ಯ ಆಗಮಿಸುತ್ತಿದ್ದು ಪಕ್ಷದ ಮೇಲೆ ತಾವು ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾನು ಆಭಾರಿಯಾಗಿದ್ದೇನೆ.


ಆದರೆ ಬಂದವರ ಎಲ್ಲರೊಂದಿಗೆ ನಾನು ಹೆಚ್ಚಿನ ಸಮಯ ಕಳೆಯಲು ಆಗುತ್ತಿಲ್ಲ. ದೂರದ ಊರುಗಳಿಂದ ಕಷ್ಟಪಟ್ಟು ಬರುತ್ತಿರುವವರಲ್ಲಿ ನನ್ನ ಕಳಕಳಿಯ ಮನವಿ ತಾವು ಯಾರು ಖುದ್ದಾಗಿ ನೂರಾರು ಜನರೊಂದಿಗೆ ಆಗಮಿಸುವುದು ಬೇಡ. ಗಂಗಾವತಿಯ ನಿವಾಸದ ಹತ್ತಿರ ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರುತ್ತಿರುವುದು ಎಲ್ಲರೊಂದಿಗೆ ವೈಯಕ್ತಿಕವಾಗಿ ಮಾತನಾಡಲು ಆಗುತ್ತಿಲ್ಲ.


ಎಲ್ಲಾ ಕ್ಷೇತ್ರಗಳಲ್ಲಿ ಸಮೀಕ್ಷೆ


ದಯವಿಟ್ಟು ಟಿಕೆಟ್ ಆಕಾಂಕ್ಷಿಗಳು ಕೆಳಗಿನ ಮೇಲ್ ಐಡಿಗೆ ತಮ್ಮ ವಿವರಗಳನ್ನು ಕಳುಹಿಸಿರಿ. ನಾನು ಈಗಾಗಲೇ ಕ್ಷೇತ್ರಗಳ ಸಮೀಕ್ಷೆಯನ್ನು ಮಾಡುತ್ತಿದ್ದೇನೆ. ವರದಿಯ ಆಧಾರದ ಮೇಲೆ ಆಯಾ ಕ್ಷೇತ್ರಗಳಲ್ಲಿ ಸ್ಪರ್ಧೆ ಬಗ್ಗೆ ನಿರ್ಧರಿಸಿ ನಿಮ್ಮನ್ನು ಕರೆದು ಚರ್ಚಿಸುತ್ತೇನೆ ಅನ್ಯತಾ ಭಾವಿಸಬೇಡಿ ಎಂದು ಜನಾರ್ದನ ರೆಡ್ಡಿ ಕೇಳಿಕೊಂಡಿದ್ದಾರೆ.


ಮೇಲ್ ಐಡಿ: contactatkrpp@gmail.com


want kalyan rajya pragati party ticket then do this simple work mrq
ಜನಾರ್ದನ ರೆಡ್ಡಿ, ಮಾಜಿ ಸಚಿವ


ಐದು ಕ್ಷೇತ್ರದ ಅಭ್ಯರ್ಥಿಗಳು ಇವರೇ


1.ಸಿರಗುಪ್ಪ: ಧರೆಪ್ಪ ನಾಯಕ್


2.ಕನಕಗಿರಿ: ಡಾ.ಚಾರುಲ್ ದಾಸರಿ


3.ನಾಗಠಾಣಾ: ಶ್ರೀಕಾಂತ್


4.ಸಿಂಧನೂರು: ನೆಕ್ಕಂಟಿ ಮಲ್ಲಿಕಾರ್ಜುನ್


5.ಚಿತ್ರದುರ್ಗ: ಮಹೇಶ್




‘ದಳ’ದಲ್ಲಿ ಟಿಕೆಟ್ ತಳಮಳ


Hassan JDS ticket Fight: ಹಾಸನದಲ್ಲಿ ಜೆಡಿಎಸ್ ಟಿಕೆಟ್  ದಂಗಲ್ ಬಗೆಹರಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಶಿವರಾತ್ರಿ ಕಳೆದರೂ ಹಾಸನದ ಕದನಕಲಿ ಗುಟ್ಟು ಇತ್ಯರ್ಥವಾಗ್ತಿಲ್ಲ. ಸ್ವರೂಪ್ ಪರ ಕುಮಾರಸ್ವಾಮಿ ಒಲವು ತೋರಿಸಿದ್ದಾರೆ. ಸ್ವರೂಪ್ ತಂದೆ ಮಾಜಿ ಶಾಸಕ ಎಚ್.ಎಸ್.ಪ್ರಕಾಶ್​ಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಕುಮಾರಸ್ವಾಮಿ ಕಸರತ್ತು ಮಾಡ್ತಿದ್ದಾರೆ.



ಪ್ರೀತಂಗೌಡಗೆ ಸ್ವರೂಪ್​ ದೊಡ್ಡ ಸವಾಲೇ ಅಲ್ಲ. ಆದ್ದರಿಂದ ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಅವರಿಗೆ ಹಾಸನದಲ್ಲಿ ನನಗೆ ಟಿಕೆಟ್ ನೀಡಿ ಎಂದು ರೇವಣ್ಣ ಹೇಳ್ತಿದ್ದಾರಂತೆ. ರೇವಣ್ಣ ಪ್ರಸ್ತಾಪಕ್ಕೆ ಕುಮಾರಸ್ವಾಮಿ ಒಪ್ಪಿಗೆ ನೀಡಿಲ್ವಂತೆ. ಆದ್ದರಿಂದ ದೇವೇಗೌಡರ ಮನೆಯಲ್ಲಿ ಸಭೆ ಮಾಡಿ ಟಿಕೆಟ್ ಫೈನಲ್ ಮಾಡ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.


ಇದನ್ನೂ ಓದಿ:  Pramod Mutalik: ಸಚಿವ ಸುನೀಲ್ ಕುಮಾರ್ ಸುತ್ತಮುತ್ತ ಇರುವವರೆಲ್ಲ ಕಾಂಗ್ರೆಸ್ಸಿನವರು: ಪ್ರಮೋದ್ ಮುತಾಲಿಕ್ ಕಿಡಿ


ಆನಂದ್ ಸಿಂಗ್​​ಗೆ ಅಕ್ಕನ ಸವಾಲ್

top videos


    ವಿಜಯನಗರ ಜಿಲ್ಲೆ ಸ್ಥಾಪನೆ ರೂವಾರಿಗೆ ಜಿಲ್ಲೆಯಲ್ಲೇ ಸವಾಲ್ ಎದುರಾಗಿದೆ. ಅದರಲ್ಲೂ ಆನಂದ್ ಸಿಂಗ್ (Anand Singh) ಟಿಕೆಟ್​ಗೆ ಸಹೋದರಿಯೇ ಅಡ್ಡಗಾಲು ಹಾಕ್ತಿದ್ದಾರೆ. ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತ ವಿಜಯನಗರ ಟಿಕೆಟ್​ಗಾಗಿ ಪೈಪೋಟಿ ನಡೆಸುತ್ತಿದ್ದಾರೆ.

    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು