ಚಿತ್ರದುರ್ಗ : ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ (Village) ಹಸಿ ಮತ್ತು ಒಣ ಕಸ ನಿರ್ವಹಣೆ (Garbage Diversification) ಕುರಿತು ಸ್ವಚ್ಛವಾಹಿನಿ ಮೂಲಕ ವ್ಯಾಪಕ ಪ್ರಚಾರ ಮಾಡಲಾಗುತ್ತಿದೆ. ಬೀದಿ ನಾಟಕದ ಮೂಲಕ ಮಾಹಿತಿ ಮತ್ತು ಸ್ವಚ್ಛತಾ ವಾಹಿನಿಯಲ್ಲಿ ಕಸ ವಿಂಗಡಣೆಯ ಬಗ್ಗೆ ತಿಳಿ ಹೇಳುವಂತಹ ಹಾಡುಗಳ ಮೂಲಕ ಜನ ಜಾಗೃತಿ ಮೂಡಿಸಲಾಗಿದ್ದು, ಚಿತ್ರದುರ್ಗ ಜಿಲ್ಲೆಯ ಧರ್ಮಪುರ ಗ್ರಾಮ ಪಂಚಾಯ್ತಿ (Dharmapur Gram panchayat) ಮಾದರಿಯಾಗಿದೆ. ಸ್ವಚ್ಛ ಭಾರತ ಅಭಿಯಾನವು (Swachch Bharta Campaign) ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ಆರೋಗ್ಯ ದೃಷ್ಠಿಯಿಂದ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ.
ಮೊದಲೆಲ್ಲಾ ಹಳ್ಳಿಗಳಲ್ಲಿ ಹಸಿ ಕಸ, ಒಣ ಕಸ ಎಲ್ಲವನ್ನೂ ಮಿಶ್ರಣ ಮಾಡಿ ಮನೆಗಳ ಬಳಿ ಇರುತ್ತಿದ್ದ ತಿಪ್ಪೆಗುಂಡಿಗೆ ಎಸೆಯುತ್ತಿದ್ದರು. ಪಕ್ಕದಲ್ಲೇ ಮನೆಗಳಿರುತ್ತಿದ್ದ ಕಾರಣ ಸೊಳ್ಳೆಗಳು, ಕ್ರಿಮಿ ಕೀಟಗಳಿಗೆ ನಾವೇ ಆಹ್ವಾನ ನೀಡಿ ರೋಗಗಳನ್ನು ತಂದು ಕೊಳ್ಳುವಂತಹ ಪರಿಸ್ಥಿತಿ ನಾವೇ ನಿರ್ಮಿಸಿಕೊಂಡಿದ್ದೇವೆ.
ಮಾದರಿಯಾದ ಗ್ರಾಮ ಪಂಚಾಯ್ತಿ
ಆದರೆ ಈಗ ಹಸಿ ಕಸ, ಒಣ ಕಸ ಪ್ರತ್ಯೇಕಗೊಳಿಸಿ ಮನೆ ಬಳಿ ಬರುವ ಸ್ವಚ್ಛತಾವಾಹಿನಿಗೆ ನೀಡುವುದರಿಂದ ನಮ್ಮ ಗ್ರಾಮ ಜೊತೆಗೆ ನಮ್ಮನ್ನು ನಾವು ಸುರಕ್ಷಿತವಾಗಿಟ್ಟುಕೊಳ್ಳುವ ನಿಟ್ಟಿನಲ್ಲಿ ಧರ್ಮಪುರ ಗ್ರಾಮ ಪಂಚಾಯಿತಿಯ ಕಾರ್ಯ ಮಾದರಿ ಏನಿಸಿದೆ.
ಇನ್ನೂ ಹಿರಿಯೂರು ತಾಲ್ಲೂಕಿನ ಧರ್ಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಧರ್ಮಪುರ, ಶ್ರಾವಣಗೆರೆ, ಕೃಷ್ಣಾಪುರ, ಅರಳಿಕೆರೆ, ಬೆನಕನಹಳ್ಳಿ ಗ್ರಾಮಗಳಲ್ಲಿ ಘನತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದೆ. ಪಂಚಾಯಿತಿ ವ್ಯಾಪ್ತಿಯ ಪ್ರತೀ ಮನೆಗೂ 2 ಕಸದ ಬುಟ್ಟಿಗಳನ್ನು ನೀಡಲಾಗಿದೆ. ಅದರಲ್ಲಿ ಹಸಿ ಕಸ ಮತ್ತು ಒಣ ಕಸ ಎಂದು ವಿಂಗಡಣೆ ಮಾಡುವ ಕ್ರಮ ವಹಿಸಲಾಗಿದೆ. ಈ ಮೂಲಕ ಧರ್ಮಪುರ ಗ್ರಾಮ ಪಂಚಾಯಿತಿಯ ಕಾರ್ಯ ಯಶಸ್ವಿಯಾಗಿದೆ.
ಇದನ್ನೂ ಓದಿ: Chitradurga: ಕೃಷಿ ಸಚಿವರ ಉಸ್ತುವಾರಿ ಜಿಲ್ಲೆಯಲ್ಲಿ ನಕಲಿ ಗೊಬ್ಬರದ ಹಾವಳಿ; ಮಹಾ ವಂಚನಗೆ ಬಲಿಯಾದ ರೈತರು
ಅಲ್ಲದೇ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹಾಗೂ ನೀರು ನೈರ್ಮಲ್ಯ ಸಮಿತಿಯ ಸದಸ್ಯರುಗಳಿಗೆ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಘಟಕಾಂಶಗಳ ಕುರಿತು ಗ್ರಾಮ ಸಭೆಗಳಲ್ಲಿ ಮಾಹಿತಿ ನೀಡಲಾಗಿದೆ.
ಕಸ ನಿರ್ವಹಣೆ ಕುರಿತು ಪ್ರಚಾರ
ಸಾರ್ವಜನಿಕ ಸ್ಥಳಗಳಲ್ಲಿ ಕಸದ ತೊಟ್ಟಿಗಳನ್ನು ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ. ಹಸಿ ಕಸ ಒಣ ಕಸ ನಿರ್ವಹಣೆ ಕುರಿತು ಸ್ವಚ್ಛವಾಹಿನಿ ಮೂಲಕ ವ್ಯಾಪಕ ಪ್ರಚಾರ ಮಾಡಲಾಗುತ್ತಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಕಸ ವಿಂಗಡಣೆ ಕುರಿತು ಅರಿವು ಮೂಡಿಸಲಾಗುತ್ತಿದೆ. ಬೀದಿ ನಾಟಕದ ಮೂಲಕ ಮಾಹಿತಿ, ಮತ್ತು ಸ್ವಚ್ಛತಾವಾಹಿನಿಯಲ್ಲಿ ಕಸ ವಿಂಗಡಣೆಯ ಬಗ್ಗೆ ತಿಳಿ ಹೇಳುವಂತಹ ಹಾಡುಗಳ ಮೂಲಕ ಜನ ಜಾಗೃತಿ ಮೂಡಿಸಲಾಗಿದೆ.
ತ್ಯಾಜ್ಯ ವಿಲೇವಾರಿಗೆ ಶುಲ್ಕ ಸಂಗ್ರಹಣೆ
ಪ್ರತಿ ಮನೆಯಿಂದ ರೂ.20/- ಅಂಗಡಿ ಮತ್ತು ಹೋಟೆಲ್ಗಳಿಂದ ರೂ.40/- ಗಳ ಶುಲ್ಕವನ್ನು ಪಡೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಘನ ತ್ಯಾಜ್ಯ ಸಂಗ್ರಹಣೆ ವಿಂಗಡಣೆ ವಿಲೇವಾರಿ ಮಾಡಲು ಕ್ರಮವಹಿಸಲಾಗಿದೆ. ಸ್ವಚ್ಛ ಸಂಕೀರ್ಣ ಘಟಕಗಳಲ್ಲಿ ಗ್ರಾಮ ಪಂಚಾಯಿತಿಯ ಸ್ವ-ಸಹಾಯ ಸಂಘದ ಸದಸ್ಯರು ಕಾರ್ಯನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ: Accident: ಆಂಧ್ರದಲ್ಲಿ ಕರ್ನಾಟಕ ಪೊಲೀಸರ ವಾಹನ ಅಪಘಾತ; ಶಿವಾಜಿನಗರ ಪಿಎಸ್ಐ, ಕಾನ್ಸ್ಟೇಬಲ್ ಸೇರಿ ಮೂವರ ದುರ್ಮರಣ
ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿ ಮನೆ ಜೊತೆಗೆ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಕಾರ್ಯದಲ್ಲಿ ತೊಡಗಬೇಕು. ಪರಿಸರ ನಮ್ಮ ಮನೆಯೆಂದೇ ಭಾವಿಸಿ ಸ್ವಚ್ಛಗೊಳಿಸಿದರೆ ಧರ್ಮಪುರ ಗ್ರಾಮ ಪಂಚಾಯಿತಿಯಂತೆ ಇತರೆ ಗ್ರಾಮ ಪಂಚಾಯಿತಿಗಳು ಸಹ ಮಾದರಿ ಗ್ರಾಮ ಎನಿಸಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ