• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಟಾರ್ಗೆಟ್ ಮಾಡಲು ಸಿದ್ದರಾಮಯ್ಯಗಿಂತ ಡಿಕೆ ಶಿವಕುಮಾರ್ ದೊಡ್ಡ ನಾಯಕರಲ್ಲ; ಸಚಿವ ಡಾ. ಸುಧಾಕರ್

ಟಾರ್ಗೆಟ್ ಮಾಡಲು ಸಿದ್ದರಾಮಯ್ಯಗಿಂತ ಡಿಕೆ ಶಿವಕುಮಾರ್ ದೊಡ್ಡ ನಾಯಕರಲ್ಲ; ಸಚಿವ ಡಾ. ಸುಧಾಕರ್

ಸಚಿವ ಕೆ.ಸುಧಾಕರ್

ಸಚಿವ ಕೆ.ಸುಧಾಕರ್

ಡಿಕೆ ಸಹೋದರರ ಮೇಲೆ ದಾಳಿ ನಡೆಯುತ್ತಿರುವುದು ಇದೇ ಮೊದಲಲ್ಲ. ಇದು ಹಳೆಯ ಕೇಸ್​​ಗೆ ಸಂಬಂಧಿಸಿ  ಮುಂದುವರೆದ ಶೋಧ ಇರಬಹುದು. ಡಿಕೆಶಿ ಅವರಿಗೆ ಪ್ರಾಮಾಣಿಕತೆ ಸಾಬೀತು ಮಾಡಲು ಇದೊಂದು ಅವಕಾಶ ಸಿಕ್ಕಿದೆ ಎಂದಿದ್ದಾರೆ ಸುಧಾಕರ್.

  • Share this:

ಮೈಸೂರು (ಅಕ್ಟೋಬರ್ 5):  ಆದಾಯಕ್ಕಿಂತಲೂ ಹೆಚ್ಚು ಆಸ್ತಿಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿ ಬೆನ್ನಲ್ಲೇ ಕಾಂಗ್ರೆಸ್​ ನಾಯಕರು ಹಾಗೂ ಡಿಕೆಶಿ ಬೆಂಬಲಿಗರು ಬಿಜೆಪಿ ವಿರುದ್ಧ ಹರಿಹಾಯುತ್ತಿದ್ದು, ಇದೊಂದು ರಾಜಕ್ರೀಯ ಪ್ರೇರಿತ ದಾಳಿ ಎಂದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ  ಖಾರವಾಗಿ ಉತ್ತರಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್​ ‘ಇಲ್ಲಿ ಟಾರ್ಗೆಟ್​ ಮಾಡುವ ಉದ್ದೇಶ ಯಾರಿಗೂ ಇಲ್ಲ. ಹಾಗೆ ಟಾರ್ಗೆಟ್​ ಮಾಡಬೇಕಿಂದ್ದರೆ ಡಿಕೆಶಿಗಿಂತ ದೊಡ್ಡ ನಾಯಕ ಸಿದ್ದರಾಮಯನವರನ್ನೇ ಟಾರ್ಗೆಟ್​ ಮಾಡಬೇಕಿತ್ತಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.


ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಸುಧಾಕರ್, "ಡಿಕೆ ಸಹೋದರರ ಮೇಲೆ ದಾಳಿ ನಡೆಯುತ್ತಿರುವುದು ಇದೇ ಮೊದಲಲ್ಲ. ಇದು ಹಳೆಯ ಕೇಸ್​​ಗೆ ಸಂಬಂಧಿಸಿ  ಮುಂದುವರೆದ ಶೋಧ ಇರಬಹುದು. ಡಿಕೆಶಿ ಅವರಿಗೆ ಪ್ರಾಮಾಣಿಕತೆ ಸಾಬೀತು ಮಾಡಲು ಇದೊಂದು ಅವಕಾಶ ಸಿಕ್ಕಿದೆ. ಅವರು ಪ್ರಾಮಾಣಿಕತೆಯನ್ನು ಸಾಬೀತು ಮಾಡಿಕೊಳ್ಳಲಿ," ಎಂದು ಹೇಳಿದ್ದಾರೆ.


ಡಿಕೆಶಿ ಮೇಲಿನ ಸಿಬಿಐ ದಾಳಿ ರಾಜಕೀಯ ಪ್ರೇರಿತ ಎನ್ನುವ ಮಾತು ಕೇಳಿ ಬಂದಿದೆ. ಇದಕ್ಕೆ ಉತ್ತರಿಸಿರುವ ಸುಧಾಕರ್, "ರಾಜಕೀಯ ಹಸ್ತಕ್ಷೇಪ ಮಾಡುವ ಉದ್ದೇಶ ಬಿಜೆಪಿಗೆ ಇಲ್ಲ. ಉಪಚುನಾವಣೆ ಇದೆ ಎನ್ನುವ ಕಾರಣಕ್ಕೂ ದಾಳಿ ನಡೆದಿಲ್ಲ. ನಮಗೆ ಈಗಾಗೇ 117 ಸ್ಥಾನ ಇದೆ. ಈಗ ಎರಡು ಸ್ಥಾನಗಳಿಗೆ ನಡೆಯುವ ಉಪಚುನಾವಣೆಯಿಂದ ಸರ್ಕಾರದ ಅಳಿವು ಉಳಿವು ಪ್ರಶ್ನೆ ಬರುವುದಿಲ್ಲ. ಹೀಗಾಗಿ, ಇದು ರಾಜಕೀಯ ಪ್ರೇರಿತ ದಾಳಿ ಎಂಬ ಆರೋಪದಲ್ಲಿ ಹುರುಳಿಲ್ಲ. ಸಿದ್ದರಾಮಯ್ಯರಿಗಿಂತ ದೊಡ್ಡ ನಾಯಕ ಡಿಕೆಶಿ ಅಲ್ಲ. ಇದು ರಾಜಕೀಯ ಪ್ರೇರಿತ ದಾಳಿ ಆಗಿದ್ದರ ಮಾಜಿ ಸಿಎಂ ಸಿದ್ದರಾಮಯ್ಯ ಅವರರನ್ನು ಟಾರ್ಗೆಟ್ ಮಾಡಬೇಕಿತ್ತಲ್ಲವೇ?" ಎಂದು ಪ್ರಶ್ನಿಸಿದರು.





ಹಳೆಯ ಘಟನೆಯನ್ನು ನೆನೆದ ಸುಧಾಕರ್, "ಪ್ರತೀ ಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರು, ಅಮಿತ್ ಶಾ ಅವರಿಗೆ 2 ವರ್ಷ ಗುಜರಾತ್ ಪ್ರವೇಶ ನಿಷೇಧಿಸಿದ್ದಾಗ, ಈಗಿನ ಆಂಧ್ರ ಪ್ರದೇಶದ ಸಿಎಂ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ ಸಿಬಿಐ ದಾಳಿ ನಡೆದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ಎಂಬುದು ಮರೆತುಹೋಯಿತೇ? ಸ್ವಾಯತ್ತ ಸಂಸ್ಥೆಗೆ ಗೌರವ ಕೊಡಬೇಕು. ಅವರ ಮೇಲೆ ನಂಬಿಕೆ ಇಡೋಣ," ಎಂದು ಹೇಳುವ ಮೂಲಕ ಈ ದಾಳಿ ರಾಜಕೀಯ ಪ್ರೇರಿತ ಅಲ್ಲ ಎಂದು ಸುಧಾಕರ್ ಸ್ಪಷ್ಟಪಡಿಸಿದರು.

Published by:Rajesh Duggumane
First published: