ಬೆಂಗಳೂರು: ರಾಜಧಾನಿ ಬೆಂಗಳೂರಿನ (Bengaluru) ನಾಯಂಡಹಳ್ಳಿ ಜಂಕ್ಷನ್ (Nayanda Halli) ಬಳಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿಯೊಂದು (Lorry) ಬೈಕ್ಗೆ (Bike) ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು (Woman) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವೇಗವಾಗಿ ಬಂದ ಲಾರಿ, ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ (KSRTC Bus) ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಬ್ಯಾಟರಾಯನಪುರ (Byatarayanapura) ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಹಿಳೆಯನ್ನು 34 ವರ್ಷದ ಅನುಷಾ ಎಂದು ಗುರುತಿಸಲಾಗಿದೆ.
ಮೃತ ಮಹಿಳೆ ಅನುಷಾ ಮೈಸೂರು ರಸ್ತೆಯಲ್ಲಿ ತಮ್ಮ ತಾಯಿ ಮಂಜುಮ್ಮ ಹಾಗೂ ಮಗು ಜೊತೆ ಬೈಕ್ನಲ್ಲಿ ಚಲಿಸುತ್ತಿದ್ದ ಸಂದರ್ಭದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Crime News: ಕೇವಲ 5 ರೂಪಾಯಿಗಾಗಿ 8 ವರ್ಷದ ಬಾಲಕನ ಹತ್ಯೆ! ತಲೆ ಮೇಲೆ ಕಲ್ಲು ಎತ್ತಿಹಾಕಿದ್ದ ಆರೋಪಿ ಅರೆಸ್ಟ್
ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ವೇಗವಾಗಿ ಬರುತ್ತಿದ್ದ ಸಿಮೆಂಟ್ ಚೀಲ ತುಂಬಿದ್ದ ಲಾರಿ ಬೈಕ್ಗೆ ಡಿಕ್ಕಿಯಾಗಿದೆ. ಕೂಡಲೇ ಹೆದರಿಕೊಂಡ ಲಾರಿ ಚಾಲಕ, ಚಲಿಸುತ್ತಿದ್ದ ಲಾರಿಯನ್ನು ನಡುರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಈ ವೇಳೆ ಸಮಯಪ್ರಜ್ಞೆ ಮೆರೆದ ಕೆಎಸ್ಆರ್ ಟಿಸಿ ಬಸ್ ಚಾಲಕ ಲಾರಿಗೆ ಬಸ್ ಅಡ್ಡ ನಿಲ್ಲಿಸಿ ತಡೆದಿದ್ದಾರೆ.
ಅಪಘಾತ ಸಂಭವಿಸಿ ಅರ್ಧ ಗಂಟೆಯಾದರೂ ಪೊಲೀಸರು ಸ್ಥಳಕ್ಕೆ ಬರಲಿಲ್ಲ ಎಂದು ಸ್ಥಳೀಯ ಆಕ್ರೋಶ ಹೊರ ಹಾಕಿದ್ದರು. ಅಲ್ಲದೆ ರಸ್ತೆ ತಡೆ ನಡೆಸಿದ್ದರು. ಆ ವೇಳೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯನ್ನ ಚದುರಿಸಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದರು. ಅಪಘಾತ ಎಸಗಿದ ಲಾರಿ ಹಾಗೂ ಕೆಎಸ್ಆರ್ಡಿಸಿ ಬಸ್ಅನ್ನು ಪೊಲೀಸರು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಇದನ್ನೂ ಓದಿ: Siddaramaiah: ಕಾಂಗ್ರೆಸ್ನಲ್ಲಿ ಸಿದ್ದು ಮೂಲೆ ಗುಂಪು ಮಾಡುವ ಹುನ್ನಾರ ನಡೀತಿದ್ಯಾ? ಹೈಕಮಾಂಡ್ಗೆ ರಮೇಶ್ ಕುಮಾರ್ ವಾರ್ನಿಂಗ್
ಘಟನೆಯಲ್ಲಿ ಗಾಯಗೊಂಡಿರುವ ಅಜ್ಜಿ ಮಂಜುಮ್ಮ ಹಾಗೂ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಕೆಲಸ ಮಾಡಿದ್ದಾರೆ. ಲಾರಿ ಚಾಲಕ ಸ್ಕೂಟರ್ ಡಿಕ್ಕಿ ಹೊಡೆದು ಪರಾರಿಯಾಗುತ್ತಿದ್ದನ್ನು ಗಮನಿಸಿ ಕೆಎಸ್ಆರ್ಟಿಸಿ ಬಸ್ ಚಾಲಕ ನಂದೀಶ್ ಗಮನಿಸಿ ಬಸ್ಅನ್ನು ಲಾರಿಗೆ ಅಡ್ಡಲಾಗಿ ನಿಲ್ಲಿಸಿ ಮುಂದಕ್ಕೆ ಹೋಗದಂತೆ ತಡೆದಿದ್ದಾರೆ. ಮೃತ ಅನುಷಾ ಮಂಡ್ಯ ಮೂಲದವರಾಗಿದ್ದು, ಅತ್ತಿಗುಪ್ಪೆಯಲ್ಲಿ ವಾಸಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ