Gold Rate Today | ಭಾರತದಲ್ಲಿ ಮೂರ್ನಾಲ್ಕು ದಿನಗಳಿಂದ ಚಿನ್ನದ ಬೆಲೆ ಕುಸಿತವಾಗುತ್ತಿದೆ. ಹೀಗಾಗಿ, ಬಂಗಾರ ಖರೀದಿಸಲು ಯೋಚಿಸುತ್ತಿದ್ದರೆ ಇದು ಸಕಾಲ. ನೀವೇನಾದರೂ ಚಿನ್ನ ಕೊಳ್ಳಲು ಯೋಚಿಸುತ್ತಿದ್ದರೆ ದೇಶದ ವಿವಿಧ ನಗರಗಳಲ್ಲಿ ಚಿನ್ನಕ್ಕೆ ಯಾವ ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ನಿನ್ನೆ 49,890 ರೂ. ಇದ್ದುದು, 10 ರೂ. ಕುಸಿತ ಕಾಣುವ ಮೂಲಕ 49,880 ರೂ.ಗೆ ಇಳಿದಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,740 ರೂ. ಇದ್ದುದು ಇಂದು 45,730 ರೂ.ಗೆ ಕುಸಿದಿದೆ. ಬೆಳ್ಳಿ ದರವೂ ಇಳಿಕೆಯಾಗಿದ್ದು, ನಿನ್ನೆ 72,300 ರೂ.ಇದ್ದ ಬೆಳ್ಳಿ ಬೆಲೆ (Silver Price) ಇಂದು 72,200ಕ್ಕೆ ಕುಸಿದಿದೆ.
ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಭಾರತದಲ್ಲಿ ಚಿನ್ನದ ದರ ಇಳಿಕೆಯಾಗಿದೆ. ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,730 ರೂ. ಇದ್ದುದು ಇಂದು 47,720 ರೂ.ಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,730 ರೂ. ಇತ್ತು. ಇಂದು ಆ ಬೆಲೆ 48,720ಕ್ಕೆ ಕುಸಿದಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 49,880 ರೂ. ಆಗಿದೆ. ಹಾಗೆಯೇ, 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಇಂದು 45,730 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 52,000 ರೂ. ದಾಟಿದೆ.
ಇದನ್ನೂ ಓದಿ: Karnataka Unlock: ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಇಂದಿನಿಂದ ಲಾಕ್ಡೌನ್ ಸಡಿಲಿಕೆ; ವೀಕೆಂಡ್ ಕರ್ಫ್ಯೂ ಮುಂದುವರಿಕೆ
ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಇಂದು ಕುಸಿತ ಕಂಡಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 72,300 ರೂ. ಇದ್ದುದು ಇಂದು 72,200 ರೂ. ಗೆ ಕುಸಿದಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 72,200 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 77,300 ರೂ. ಆಸುಪಾಸಿನಲ್ಲಿದೆ.
ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.
ಇದನ್ನೂ ಓದಿ: Karnataka Weather Today: ಮುಂಗಾರು ಮಳೆಯ ಆರ್ಭಟ; ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ
ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.
ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ