ಕರ್ನಾಟಕಕ್ಕೆ ಇನ್ನೊಂದು ವಂದೇ ಭಾರತ್ ರೈಲಿನ ಆಗಮನದ ಸುದ್ದಿ ಹೊರಬಿದ್ದಿದೆ. ಉತ್ತರ ಕರ್ನಾಟಕದ ಜನತೆ ರಾಜ್ಯ ರಾಜಧಾನಿ ಬೆಂಗಳೂರನ್ನು ಸಂಪರ್ಕಿಸಲು ಈ ರೈಲು ಅನುಕೂಲ ಕಲ್ಪಿಸಲಿದೆ. (ಸಾಂದರ್ಭಿಕ ಚಿತ್ರ)
2/ 9
ಸದ್ಯದಲ್ಲೇ ಬೆಂಗಳೂರಿನಿಂದ ಹುಬ್ಬಳ್ಳಿಗೆ ವಂದೇ ಭಾರತ್ ಸಂಚಾರ ಆರಂಭವಾಗಲಿದೆ. (ಸಾಂದರ್ಭಿಕ ಚಿತ್ರ)
3/ 9
ಬೆಂಗಳೂರು- ಹುಬ್ಬಳ್ಳಿ ನಗರಗಳ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಮಾಹಿತಿ ಬಹಿರಂಗಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)
4/ 9
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಮ್ಮ ಧಾರವಾಡ-ಹುಬ್ಬಳ್ಳಿಯಿಂದ ಬೆಂಗಳೂರಿಗೆ ಅತ್ಯಾಧುನಿಕ ಅತಿವೇಗದ ವಂದೇ ಭಾರತ್ ರೈಲನ್ನು ಆರಂಭಿಸಲು ಕೇಂದ್ರ ಸರ್ಕಾರ ಮತ್ತು ರೈಲ್ವೆ ಇಲಾಖೆ ವೇಗವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
5/ 9
2023 ರ ಮಾರ್ಚ್ ತಿಂಗಳಲ್ಲಿ ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ್ ರೈಲು ಸಂಚಾರ ಆರಂಭವಾಗುವ ನಿರೀಕ್ಷೆಯಿದೆ. (ಸಾಂದರ್ಭಿಕ ಚಿತ್ರ)
6/ 9
ಭಾರತೀಯ ರೈಲ್ವೆಗೆ ಆಧುನಿಕ ಸ್ಪರ್ಷ ನೀಡಲು ರೈಲ್ವೇ ಇಲಾಖೆ ಮುಂದಾಗಿದೆ. ಅಲ್ಲದೇ ವಂದೇ ಭಾರತ್ ರೈಲುಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಮಾಡಲು ನಿರ್ಧರಿಸಿದೆ. (ಸಾಂದರ್ಭಿಕ ಚಿತ್ರ)
7/ 9
2023ರ ಬಜೆಟ್ನಲ್ಲಿ ಇಡೀ ದೇಶದಲ್ಲಿ 300ರಿಂದ 400 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳನ್ನು ಘೋಷಿಸುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
8/ 9
ರಾಜಧಾನಿ ಎಕ್ಸ್ಪ್ರೆಸ್ ಮತ್ತು ಶತಾಬ್ದಿ ಎಕ್ಸ್ಪ್ರೆಸ್ ಸೇರಿದಂತೆ ಅಸ್ತಿತ್ವದಲ್ಲಿರುವ ಎಲ್ಲಾ ಹೈಸ್ಪೀಡ್ ರೈಲುಗಳನ್ನು ಕ್ರಮೇಣ ವಂದೇ ಭಾರತ್ ಆಗಿ ಬದಲಾಯಿಸುವ ಸೂಚನೆಯನ್ನು ಕೇಂದ್ರ ಸರ್ಕಾರ ನೀಡಿದೆ. (ಸಾಂದರ್ಭಿಕ ಚಿತ್ರ)
9/ 9
ಇದಕ್ಕಾಗಿ ಮುಂಬರುವ ಬಜೆಟ್ನಲ್ಲಿ ರಾಷ್ಟ್ರೀಯ ಸಾರಿಗೆಗೆ ನೀಡಲಾಗಿದ್ದ 1.37 ಟ್ರಿಲಿಯನ್ ಬಜೆಟ್ ಗಾತ್ರವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)