KS Eshwarappa ಅವರನ್ನ ಸಚಿವ ಸ್ಥಾನದಿಂದ ವಜಾಗೊಳಿಸಿ: ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ಮನವಿ

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಆಗ್ರಹಿಸಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಕಾಂಗ್ರೆಸ್ ನಿಯೋಗ ಕೆ ಎಸ್ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಮನವಿ ಸಲ್ಲಿಸಿದೆ.

First published:

  • 18

    KS Eshwarappa ಅವರನ್ನ ಸಚಿವ ಸ್ಥಾನದಿಂದ ವಜಾಗೊಳಿಸಿ: ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ಮನವಿ

    ಮೃತ ಸಂತೋಷ್ ಪಾಟೀಲ್, ಬೆಳಗಾವಿ ಮೂಲದ ಗುತ್ತಿಗೆದಾರರಾಗಿದ್ದು, ಸಚಿವ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಈ ಸಂಬಂಧ ದೆಹಲಿಗೂ ತೆರಳಿ ಬಿಜೆಪಿ ಹೈಕಮಾಂಡ್ ನಾಯಕರಿಗೆ ದೂರು ಸಲ್ಲಿಸಿದ್ದರು.

    MORE
    GALLERIES

  • 28

    KS Eshwarappa ಅವರನ್ನ ಸಚಿವ ಸ್ಥಾನದಿಂದ ವಜಾಗೊಳಿಸಿ: ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ಮನವಿ

    ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾವು ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ಇಡೀ ದೇಶದಲ್ಲಿ ಕರ್ನಾಟಕ ರಾಜ್ಯಕ್ಕೆ ಇದೊಂದು ಕಪ್ಪು ಚುಕ್ಕೆ. ಗುತ್ತಿಗೆದಾರರು ಸಚಿವರ ಮೇಲೆ ಧ್ವನಿಯನ್ನು ಎತ್ತಿದ್ದರು. ಸಂತೋಷ್ ಪಾಟೀಲ್ ಪ್ರಧಾನಿಗೆ, ಸಿಎಂಗೆ ಹಾಗೂ ಅವರ ಪಕ್ಷದ ಹಿರಿಯರಿಗೆ ಮನವಿ ಸಲ್ಲಿಸಿದ್ದರು ಎಂದು ತಿಳಿಸಿದರು.

    MORE
    GALLERIES

  • 38

    KS Eshwarappa ಅವರನ್ನ ಸಚಿವ ಸ್ಥಾನದಿಂದ ವಜಾಗೊಳಿಸಿ: ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ಮನವಿ

    ಉಡುಪಿಯಲ್ಲಿ ತಮ್ಮ ಪಕ್ಷದ ಹಿರಿಯರನ್ನು ಭೇಟಿ ಮಾಡುವ ಯತ್ನವನ್ನು ಸಂತೋಷ್ ಪಾಟೀಲ್ ಮಾಡಿದ್ದರು ಎಂಬ ಮಾಹಿತಿಯಿದೆ, ಈಶ್ವರಪ್ಪ ಅವರನ್ನು ತಕ್ಷಣ ಬಂಧಿಸಬೇಕು ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

    MORE
    GALLERIES

  • 48

    KS Eshwarappa ಅವರನ್ನ ಸಚಿವ ಸ್ಥಾನದಿಂದ ವಜಾಗೊಳಿಸಿ: ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ಮನವಿ

    ತದನಂತರ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಗ್ರಾಮೀಣ ಭಾಗದ ರಸ್ತೆಯನ್ನು ಮಾಡಲು ಸೂಚಿಸಿದ್ದರಿಂದ ಸಂತೋಷ್ ಪಾಟೀಲ್ 108 ಕಾಮಗಾರಿ ಮಾಡಿದ್ದರು.ಆದರೆ ಅವರಿಗೆ ವರ್ಕ್ ಆರ್ಡರ್ ಕೊಡಲು, ಬಿಲ್ ಮಾಡಲು ೪೦% ಕಮೀಷನ್ ಕೇಳಿದ್ದಾರೆ. ಈಶ್ವರಪ್ಪ ಹಾಗೂ ಅವರ ಪಿಎಗಳು ಕಮಿಷನ್ ಕೇಳಿದ್ದಾರೆ ಎಂದು ಆರೋಪಿಸಿದರು.

    MORE
    GALLERIES

  • 58

    KS Eshwarappa ಅವರನ್ನ ಸಚಿವ ಸ್ಥಾನದಿಂದ ವಜಾಗೊಳಿಸಿ: ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ಮನವಿ

    ಹೆಂಡತಿಯ ಒಡವೆಗಳನ್ನು ಇತ್ತೆ ಇಟ್ಟು ಕಾಮಗಾರಿ ಮಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಆದರೆ ಅವರ ಬಿಲ್ ಪಾವತಿ ಆಗಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

    MORE
    GALLERIES

  • 68

    KS Eshwarappa ಅವರನ್ನ ಸಚಿವ ಸ್ಥಾನದಿಂದ ವಜಾಗೊಳಿಸಿ: ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ಮನವಿ

    ತಮ್ಮದೇ ಪಕ್ಷದ ವಿರುದ್ಧ ಕೇಳಿ ಬರುತ್ತಿರುವ 40% ಕಮಿಷನ್ (40% Commission Allegation) ವಿಚಾರ ಹಾಗೂ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಷಯ ಭಾರೀ ತಲೆನೋವಾಗಿ ಪರಿಣಮಿಸಿದೆ. ಈ‌ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ (BJP High Command) ರಾಜ್ಯ ಘಟಕದಿಂದ ಸಮಗ್ರವಾದ ವರದಿ ಕೇಳಿದೆ ಎಂದು ತಿಳಿದು ಬಂದಿದೆ.

    MORE
    GALLERIES

  • 78

    KS Eshwarappa ಅವರನ್ನ ಸಚಿವ ಸ್ಥಾನದಿಂದ ವಜಾಗೊಳಿಸಿ: ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ಮನವಿ

    ಮೃತ ಸಂತೋಷ್ ಪಾಟೀಲ್ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರಾಗಿದ್ದರು. ತಡರಾತ್ರಿ ಮಾಧ್ಯಮಗಳಿಗೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಷಯವನ್ನು ವಾಟ್ಸಪ್ ಮಾಡಿದ್ದರು.

    MORE
    GALLERIES

  • 88

    KS Eshwarappa ಅವರನ್ನ ಸಚಿವ ಸ್ಥಾನದಿಂದ ವಜಾಗೊಳಿಸಿ: ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ಮನವಿ

    ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ ಎಂದು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ. ಈಶ್ವರಪ್ಪ ಅವರಿಗೆ ಶಿಕ್ಷೆಯಾಗಬೇಕು. ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕೆಂದು ಪತ್ರದಲ್ಲಿ ಸಂತೋಷ್ ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ..

    MORE
    GALLERIES