Rain Update: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸಂಜೆ ಭಾರೀ ಮಳೆ ಸುರಿಯುತ್ತಿದ್ದು, ಇಂದು ಸಹ ವಿವಿಧ ಜಿಲ್ಲೆಗಳಲ್ಲಿ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಯಾವ್ಯಾವ ಜಿಲ್ಲೆಗಳಲ್ಲಿ, ಯಾವ ಸಮಯದಲ್ಲಿ ಮಳೆ ಆಗಲಿದೆ ಎಂಬುದು ಇಲ್ಲಿದೆ.
ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಸಂಜೆಯಾದರೆ ಸಾಕು ಮೋಡ ಕವಿದು ಧೋ ಎಂದು ಸುರಿಯುವ ಈ ಮಳೆಗೆ ಜನ ಹೈರಾಣಾಗಿದ್ದಾರೆ. ಅದರಲ್ಲೂ ಬೆಂಗಳೂರಿನ ಜನತೆಗೆ ಮಂಗಾರು ಆರಂಭಕ್ಕೂ ಮುನ್ನವೇ ಸಾಕು ಬೇಕಾಗಿದೆ.
2/ 7
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಅನಾಹುತಗಳಾಗಿದ್ದು, ಕೆಲವರು ಈ ಮಳೆಯಿಂದಾಗಿ ಜೀವ ಸಹ ಕಳೆದುಕೊಂಡಿದ್ದಾರೆ.
3/ 7
ಇನ್ನು ಇಂದು ಸಹ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ ಎಂದು ತಿಳಿಸಿದೆ.
4/ 7
ಬೆಂಗಳೂರಿನ ಹವಾಮಾನ ಇಲಾಖೆ ಈಗಾಗಲೇ ಮಾಹಿತಿ ನೀಡಿದ್ದು, ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸಹ ಇಲಾಖೆ ಸಲಹೆ ನೀಡಿದೆ. ಬೆಂಗಳೂರು ನಗರದಲ್ಲಿ ಸಹ ಈಗಾಗಲೇ ಕೆಲ ಪ್ರದೇಶಗಳಲ್ಲಿ ಮಳೆ ಶುರುವಾಗಿದ್ದು, ಮತ್ತೆ ಟ್ರಾಫಿಕ್ ಸಮಸ್ಯೆ ಆರಂಭವಾಗುತ್ತದೆ.
5/ 7
ಇನ್ನು ರಾಜ್ಯದ ಗದಗ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
6/ 7
ಈ ಮಳೆಯ ಕಾರಣದಿಂದ ವಿದ್ಯುತ್ ವ್ಯತ್ಯಯ ಸಹ ಕೆಲಕಾಲ ಆಗಲಿದ್ದು, ನಗರ ಪ್ರದೇಶಗಳಲ್ಲಿ ಟ್ರಾಫಿಕ್ ಸಮಸ್ಯೆ ಸಹ ಆಗಲಿದೆ ಎಂದು ಮುನ್ಸೂಚನೆ ನೀಡಿದೆ. ಅಲ್ಲದೇ, ಈ ಸಮಯದಲ್ಲಿ ಮನೆಯ ಒಳಗೆ ಇರಲಿ ಸೂಚನೆ ನೀಡಿರುವ ಇಲಾಖೆ ಬಾಗಿಲು ಹಾಗೂ ಕಿಟಕಿಗಳನ್ನು ಭದ್ರವಾಗಿ ಹಾಕಿಕೊಳ್ಳುವಂತೆ ತಿಳಿಸಿದೆ.
7/ 7
ಇಷ್ಟೇ ಅಲ್ಲದೇ, ಸಾಧ್ಯವಾದಷ್ಟಯ ಯಾವುದೇ ರೀತಿಯ ಪ್ರಯಾಣ ಮಾಡದಂತೆ ತಿಳಿಸಿದ್ದು, ವಿದ್ಯುತ್ ಉಪಕರಣಗಳಿಂದ ದೂರ ಇರಲು ಸಲಹೆ ನೀಡಿದೆ.
First published:
17
Rain Update: ರಾಜ್ಯದಲ್ಲಿ ಮುಂದಿನ 3 ಗಂಟೆ ಮಳೆಯ ಆರ್ಭಟ
ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಸಂಜೆಯಾದರೆ ಸಾಕು ಮೋಡ ಕವಿದು ಧೋ ಎಂದು ಸುರಿಯುವ ಈ ಮಳೆಗೆ ಜನ ಹೈರಾಣಾಗಿದ್ದಾರೆ. ಅದರಲ್ಲೂ ಬೆಂಗಳೂರಿನ ಜನತೆಗೆ ಮಂಗಾರು ಆರಂಭಕ್ಕೂ ಮುನ್ನವೇ ಸಾಕು ಬೇಕಾಗಿದೆ.
ಇನ್ನು ಇಂದು ಸಹ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ ಎಂದು ತಿಳಿಸಿದೆ.
ಬೆಂಗಳೂರಿನ ಹವಾಮಾನ ಇಲಾಖೆ ಈಗಾಗಲೇ ಮಾಹಿತಿ ನೀಡಿದ್ದು, ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸಹ ಇಲಾಖೆ ಸಲಹೆ ನೀಡಿದೆ. ಬೆಂಗಳೂರು ನಗರದಲ್ಲಿ ಸಹ ಈಗಾಗಲೇ ಕೆಲ ಪ್ರದೇಶಗಳಲ್ಲಿ ಮಳೆ ಶುರುವಾಗಿದ್ದು, ಮತ್ತೆ ಟ್ರಾಫಿಕ್ ಸಮಸ್ಯೆ ಆರಂಭವಾಗುತ್ತದೆ.
ಇನ್ನು ರಾಜ್ಯದ ಗದಗ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಮಳೆಯ ಕಾರಣದಿಂದ ವಿದ್ಯುತ್ ವ್ಯತ್ಯಯ ಸಹ ಕೆಲಕಾಲ ಆಗಲಿದ್ದು, ನಗರ ಪ್ರದೇಶಗಳಲ್ಲಿ ಟ್ರಾಫಿಕ್ ಸಮಸ್ಯೆ ಸಹ ಆಗಲಿದೆ ಎಂದು ಮುನ್ಸೂಚನೆ ನೀಡಿದೆ. ಅಲ್ಲದೇ, ಈ ಸಮಯದಲ್ಲಿ ಮನೆಯ ಒಳಗೆ ಇರಲಿ ಸೂಚನೆ ನೀಡಿರುವ ಇಲಾಖೆ ಬಾಗಿಲು ಹಾಗೂ ಕಿಟಕಿಗಳನ್ನು ಭದ್ರವಾಗಿ ಹಾಕಿಕೊಳ್ಳುವಂತೆ ತಿಳಿಸಿದೆ.