ಅನ್ನದಾತರಿಗೆ ಯಾವುದೇ ತೊಂದರೆಯಾಗಬಾರದು ಅಂತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗಾಗಿ ವಿವಿಧ ಯೋಜನೆಗಳನ್ನು ನಡೆಸುತ್ತಿವೆ. ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸುವುದು ಈ ಯೋಜನೆಗಳ ಉದ್ದೇಶವಾಗಿದೆ.
2/ 8
ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೆ ತಂದಿದೆ. ಅದೇ ರೀತಿ ಕೃಷಿ ಆಶೀರ್ವಾದ ಯೋಜನೆಯನ್ನು ಜಾರ್ಖಂಡ್ ಸರ್ಕಾರ ನಡೆಸುತ್ತಿದೆ.
3/ 8
ಇದರಡಿ ರೈತರಿಗೆ ವಾರ್ಷಿಕ 5000 ರೂಪಾಯಿಗಳನ್ನು ನೀಡಲಾಗುತ್ತಿದೆ. ಕೃಷಿ ಆಶೀರ್ವಾದ ಯೋಜನೆಯು ಜಾರ್ಖಂಡ್ ಸರ್ಕಾರವು ನಡೆಸುತ್ತಿರುವ ಯೋಜನೆಯಾಗಿದೆ.
4/ 8
ಈ ಯೋಜನೆಯಡಿಯಲ್ಲಿ 5 ಎಕರೆ ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ ಪ್ರತಿ ಎಕರೆಗೆ 5 ಸಾವಿರ ರೂಪಾಯಿಯನ್ನು ಜಾರ್ಖಂಡ್ ಸರ್ಕಾರ ಕೊಡುತ್ತಿದೆ.
5/ 8
ಖಾರಿಫ್ ಹಂಗಾಮಿನ ಕೃಷಿಗೆ ಮುನ್ನ ಈ ಹಣವನ್ನು ರೈತರ ಖಾತೆಗೆ ವರ್ಗಾಯಿಸಲಾಗುವುದು. 5 ಎಕರೆ ಜಮೀನು ಹೊಂದಿರುವ ರೈತರು ಗರಿಷ್ಠ 25,000 ರೂಪಾಯಿ ಪಡೆಯುತ್ತಾರೆ.
6/ 8
ರಾಜ್ಯದಲ್ಲಿ ಪಿಎಂ ಕಿಸಾನ್ ನಿಧಿಯ ಲಾಭ ಪಡೆಯುವ ರೈತರಿಗೆ ಕನಿಷ್ಠ 11,000 ರೂ. ಮತ್ತು ಗರಿಷ್ಠ 31,000 ರೂ. ಸಿಗುತ್ತದೆ.
7/ 8
ಸಣ್ಣ ಮತ್ತು ಅತಿ ಸಣ್ಣ ರೈತರು ಮಾತ್ರ ಕೃಷಿ ಆಶೀರ್ವಾದ್ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಸಬಹುದು.
8/ 8
ಅದೇ ರೀತಿ 5 ಎಕರೆ ಕೃಷಿ ಭೂಮಿ ಹೊಂದಿರುವ ರೈತನ ಖಾತೆಗೆ 25 ಸಾವಿರ ರೂ. ರಾಜ್ಯ ಸರ್ಕಾರದಿಂದ ಮತ್ತು ಆರು ಸಾವಿರ ಕೇಂದ್ರ ಸರ್ಕಾರದಿಂದ ಹೀಗೆ ಒಟ್ಟು 31 ಸಾವಿರ ರೂ. ಬಂದು ಸೇರುತ್ತದೆ.
First published:
18
Good News: 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ರೈತರಿಗೆ ಜಾಕ್ಪಾಟ್, 1 ಎಕರೆಗೆ ಸರ್ಕಾರ ಕೊಡ್ತಿದೆ 5 ಸಾವಿರ!
ಅನ್ನದಾತರಿಗೆ ಯಾವುದೇ ತೊಂದರೆಯಾಗಬಾರದು ಅಂತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗಾಗಿ ವಿವಿಧ ಯೋಜನೆಗಳನ್ನು ನಡೆಸುತ್ತಿವೆ. ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸುವುದು ಈ ಯೋಜನೆಗಳ ಉದ್ದೇಶವಾಗಿದೆ.