ಝಾನ್ಸಿ ಜಿಲ್ಲೆಯಲ್ಲಿ ಯೋಗಿ ಸರ್ಕಾರ 2,489 ಜನರನ್ನು ಅನರ್ಹರೆಂದು ಗುರುತಿಸಿದೆ. ಅವರಿಗೆ ಈಗಾಗಲೇ ನೋಟಿಸ್ ಕಳುಹಿಸಿದೆ. ಸರಕಾರದ ಕ್ರಮಕ್ಕೆ ಹೆದರಿ ಈವರೆಗೆ 185 ಮಂದಿ ಒಟ್ಟು 12 ಲಕ್ಷ ರೂ. ಸ್ವಯಂ ಪ್ರೇರಿತವಾಗಿ ಹಣ ಹಿಂತಿರುಗಿಸದವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೇ ಹರ್ದೋಯ್ ಜಿಲ್ಲೆಯಲ್ಲಿ ಒಟ್ಟು 2,700 ಅನರ್ಹರನ್ನು ಗುರುತಿಸಲಾಗಿದೆ. ಅವರೆಲ್ಲರೂ ಅರ್ಹರಲ್ಲದಿದ್ದರೂ ಪಿಎಂ ಕಿಸಾನ್ ಅಡಿಯಲ್ಲಿ ಹಣ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ. ಇವರಿಗೆ ಈಗಾಗಲೇ ಅಧಿಕಾರಿಗಳು ನೋಟಿಸ್ ಕಳುಹಿಸಿದ್ದಾರೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅತ್ಯಂತ ಮಹತ್ವಾಕಾಂಕ್ಷೆಯಿಂದ ಕೈಗೆತ್ತಿಕೊಂಡಿರುವುದು ಎಲ್ಲರಿಗೂ ತಿಳಿದೇ ಇದೆ. ಈ ಯೋಜನೆಯಡಿ ಪ್ರತಿ ವರ್ಷ ಸಣ್ಣ ಮತ್ತು ಅತಿಸಣ್ಣ ರೈತರಿಗೆ 6,000 ರೂ.ಗಳ ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನು ಒಂದೇ ಬಾರಿಗೆ ಬದಲಾಗಿ ಕಂತುಗಳಲ್ಲಿ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ.