Karnataka Rains: ಮಳೆಗಾಗಿ ಕಳಸೇಶ್ವರನ ಮೊರೆ, ಪೂಜೆಗೂ ಮುನ್ನ ಸುರಿದ ವರ್ಷಧಾರೆ!

Karnataka Rains: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸುತ್ತಮುತ್ತ ಮಧ್ಯಾಹ್ನದ ನಂತರ ಭರ್ಜರಿ ಮಳೆ ಸುರಿದಿದೆ. ಬಲಿಗೆ, ಹೊರನಾಡು, ಕಳಸ, ಹೊನ್ನೆ ಕಾಡು ಮುನ್ನೂರ್ ಪಾಲ್, ಹಳುವಳ್ಳಿಯಲ್ಲಿ ಮಳೆ ಸುರಿದಿದೆ.

First published:

  • 17

    Karnataka Rains: ಮಳೆಗಾಗಿ ಕಳಸೇಶ್ವರನ ಮೊರೆ, ಪೂಜೆಗೂ ಮುನ್ನ ಸುರಿದ ವರ್ಷಧಾರೆ!

    ಚಿಕ್ಕಮಗಳೂರು: ಕಾಫಿನಾಡಲ್ಲಿ ವರ್ಷದ ಮೊದಲ ಮಳೆ (Karnataka Rains) ಸುರಿದಿದೆ. ಬಿಸಿಲಿನಿಂದ ತತ್ತರಿಸಿದ್ದ ಮಲೆನಾಡಿಗೆ ವರುಣದೇವ ತಂಪೆರೆದಿದ್ದಾನೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Karnataka Rains: ಮಳೆಗಾಗಿ ಕಳಸೇಶ್ವರನ ಮೊರೆ, ಪೂಜೆಗೂ ಮುನ್ನ ಸುರಿದ ವರ್ಷಧಾರೆ!

    ನಾಳೆ ಮಳೆಗಾಗಿ ಕಳಸೇಶ್ವರ ದೇವಸ್ಥಾನದಲ್ಲಿ (Kalaseshwara Temple) ವಿಶೇಷ ಪೂಜೆಗೆ ಭಕ್ತರು ಮುಂದಾಗಿದ್ದರು. ಆದರೆ ಪೂಜೆಗೂ ಮುನ್ನ ವರ್ಷದ ಮೊದಲ ವರುಣ ಸಿಂಚನವಾಗಿರುವುದು (Karnataka Weather) ಸ್ಥಳೀಯರಲ್ಲಿ ಹರ್ಷ ಮೂಡಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Karnataka Rains: ಮಳೆಗಾಗಿ ಕಳಸೇಶ್ವರನ ಮೊರೆ, ಪೂಜೆಗೂ ಮುನ್ನ ಸುರಿದ ವರ್ಷಧಾರೆ!

    ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸುತ್ತಮುತ್ತ ಮಧ್ಯಾಹ್ನದ ನಂತರ ಭರ್ಜರಿ ಮಳೆ ಸುರಿದಿದೆ. ಬಲಿಗೆ, ಹೊರನಾಡು, ಕಳಸ, ಹೊನ್ನೆ ಕಾಡು ಮುನ್ನೂರ್ ಪಾಲ್, ಹಳುವಳ್ಳಿಯಲ್ಲಿ ಮಳೆ ಸುರಿದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Karnataka Rains: ಮಳೆಗಾಗಿ ಕಳಸೇಶ್ವರನ ಮೊರೆ, ಪೂಜೆಗೂ ಮುನ್ನ ಸುರಿದ ವರ್ಷಧಾರೆ!

    ರಾಜ್ಯ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡ ಹಿನ್ನೆಲೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Karnataka Rains: ಮಳೆಗಾಗಿ ಕಳಸೇಶ್ವರನ ಮೊರೆ, ಪೂಜೆಗೂ ಮುನ್ನ ಸುರಿದ ವರ್ಷಧಾರೆ!

    ಮಾ.14ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆಯಾಗಲಿದೆ. ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Karnataka Rains: ಮಳೆಗಾಗಿ ಕಳಸೇಶ್ವರನ ಮೊರೆ, ಪೂಜೆಗೂ ಮುನ್ನ ಸುರಿದ ವರ್ಷಧಾರೆ!

    ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯ ಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Karnataka Rains: ಮಳೆಗಾಗಿ ಕಳಸೇಶ್ವರನ ಮೊರೆ, ಪೂಜೆಗೂ ಮುನ್ನ ಸುರಿದ ವರ್ಷಧಾರೆ!

    ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾ.17 ಮತ್ತು 18ರಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES